AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯವರಂಥಾ ನಾಯಕ ಬೇರೆ ಇಲ್ಲ: ಪ್ರಧಾನಿಯನ್ನು ಹೊಗಳಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್

ಶಿಂಧೆ-ಫಡ್ನವಿಸ್ ಸರ್ಕಾರಕ್ಕೆ ಏಕೆ ಸೇರಲು ನಿರ್ಧರಿಸಿದ್ದೀರಿ ಎಂದು ಅಜಿತ್ ಪವಾರ್ ಅವರಲ್ಲಿ ಕೇಳಿದಾಗ, ಪ್ರಧಾನಿ ಮೋದಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಭಾನುವಾರ ಹೇಳಿದ್ದರು.

ಮೋದಿಯವರಂಥಾ ನಾಯಕ ಬೇರೆ ಇಲ್ಲ: ಪ್ರಧಾನಿಯನ್ನು ಹೊಗಳಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್
ಅಜಿತ್ ಪವಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 04, 2023 | 8:57 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಂತಹ ನಾಯಕ ಬೇರೆ ಇಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮಂಗಳವಾರ ಹೇಳಿದ್ದಾರೆ.ಬಿಜೆಪಿ-ಶಿವಸೇನೆ (ಶಿಂಧೆ ಬಣ) ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಲು ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP)ಯಲ್ಲಿ ಬಂಡಾಯವೆದ್ದ 63 ವರ್ಷದ ನಾಯಕ, ದಕ್ಷಿಣ ಮುಂಬೈನಲ್ಲಿ ಎನ್‌ಸಿಪಿ ಬಣದ ಹೊಸ ಕಚೇರಿ ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ದೇಶ ಮೋದಿ ನಾಯಕತ್ವದಲ್ಲಿ ಮುನ್ನಡೆಯುತ್ತಿದೆ. ಅವರನ್ನು ಬೆಂಬಲಿಸಲು ನಾವು ಸರ್ಕಾರವನ್ನು ಸೇರಿಕೊಂಡಿದ್ದೇವೆ. ಅವರಿಗೆ ಪರ್ಯಾಯವಿಲ್ಲ ಎಂದು ಅಜಿತ್ ಪವಾರ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ

ಶಿಂಧೆ-ಫಡ್ನವಿಸ್ ಸರ್ಕಾರಕ್ಕೆ ಏಕೆ ಸೇರಲು ನಿರ್ಧರಿಸಿದ್ದೀರಿ ಎಂದು ಅಜಿತ್ ಪವಾರ್ ಅವರಲ್ಲಿ ಕೇಳಿದಾಗ, ಪ್ರಧಾನಿ ಮೋದಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಭಾನುವಾರ ಹೇಳಿದ್ದರು.

ಏಳನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರು ಎನ್‌ಸಿಪಿಯನ್ನು ಎಂದಿಗೂ ತೊರೆಯುವುದಿಲ್ಲ ಎಂದು ಹೇಳುವಾಗಲೆಲ್ಲಾ ಹಲವಾರು ಸಂದರ್ಭಗಳಲ್ಲಿ ಮೋದಿಯನ್ನು ಹೊಗಳಿದ್ದರು. ಆದಾಗ್ಯೂ, ಭಾನುವಾರ ಅವರು ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ್, ಸಂಜಯ್ ಬನ್ಸೋಡೆ ಮತ್ತು ಅದಿತಿ ತಟ್ಕರೆ ಸೇರಿದಂತೆ ಎಂಟು ಎನ್‌ಸಿಪಿ ಶಾಸಕರೊಂದಿಗೆ ಆಡಳಿತ ಸರ್ಕಾರಕ್ಕೆ ಸೇರಲು ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ರಾಷ್ಟ್ರವಾದಿ ಭವನಕ್ಕೆ ಬೀಗ; ಕೀ ಕಳೆದುಕೊಂಡು ಹೊಸ ಕಚೇರಿಯ ಬಾಗಿಲು ತೆರೆಯಲಾಗದೆ ಒದ್ದಾಡಿದ ಅಜಿತ್ ಪವಾರ್ ಬಣ

ಶಿಂಧೆ ಬಣದ ಸದಸ್ಯರು ಪವಾರ್ ಸೇರ್ಪಡೆಗೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಅವರು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ