AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Siddique: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ

ಬಾಬಾ ಸಿದ್ದಿಕಿ ಕಚೇರಿ ಸಮೀಪದ ರಾಮಮಂದಿರ ಬಳಿಯೇ ಕೃತ್ಯವೆಸಗಲಾಗಿದೆ. ಬಾಬಾ ಸಿದ್ದಿಕಿ ಮೇಲೆ ಎರಡು ಮೂರು ಸುತ್ತು ಗುಂಡು ಹಾರಿಸಲಾಗಿದೆ. ಅದರಲ್ಲಿ ಒಂದು ಗುಂಡು ಅವರ ಎದೆಗೆ ತಗುಲಿತು. ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Baba Siddique: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ
ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ
TV9 Web
| Edited By: |

Updated on:Oct 12, 2024 | 11:16 PM

Share

ಮುಂಬೈ, ಅಕ್ಟೋಬರ್​ 12: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಬಣದ ಎನ್​ಸಿಪಿ ಹಿರಿಯ ನಾಯಕ ಬಾಬಾ ಸಿದ್ದಿಕಿ (Baba Siddique) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವಂತಹ ಘಟನೆ ಮುಂಬೈನ ಬಾಂದ್ರಾ ಪಶ್ಚಿಮ ಭಾಗದಲ್ಲಿ ನಡೆದಿದೆ. ಎದೆ, ಹೊಟ್ಟೆ ಭಾಗಕ್ಕೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಇದರಿಂದ ಗಂಭೀರ ಗಾಯಗೊಂಡಿದ್ದ ಸಿದ್ದಿಕಿರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುರಿಸೆಳೆದಿದ್ದಾರೆ.

ಇಂದು ರಾತ್ರಿ 9.15 ರ ಸುಮಾರಿಗೆ ನಿರ್ಮಲ್ ನಗರ ಪ್ರದೇಶದಲ್ಲಿ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿ ಹತ್ಯೆಗೈಯಲಾಗಿದೆ. ಬಾಬಾ ಸಿದ್ದಿಕಿ ಕಚೇರಿ ಸಮೀಪದ ರಾಮಮಂದಿರ ಬಳಿಯೇ ಕೃತ್ಯವೆಸಗಲಾಗಿದೆ. ಬಾಬಾ ಸಿದ್ದಿಕಿ ಮೇಲೆ ಎರಡು ಮೂರು ಸುತ್ತು ಗುಂಡು ಹಾರಿಸಲಾಗಿದೆ. ಅದರಲ್ಲಿ ಒಂದು ಗುಂಡು ಅವರ ಎದೆಗೆ ತಗುಲಿತು. ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ರೈಲು ಅಪಘಾತಕ್ಕೆ ಕಾರಣವೇನು? ರೈಲ್ವೆ ಅಧಿಕಾರಿ ಹೀಗಂತಾರೆ…

ಬಾಬಾ ಸಿದ್ದಿಕಿ ಜೊತೆಗಿದ್ದ ಸಹೋದ್ಯೋಗಿ ಕಾಲಿಗೆ ಕೂಡ ಗುಂಡು ತಗುಲಿದೆ. ಸದ್ಯ ವಿಡಿಯೋ ಒಂದು ವೈರಲ್ ಆಗಿದೆ. ಕಳೆದ 15 ದಿನಗಳ ಹಿಂದೆ ಬಾಬಾ ಸಿದ್ದಿಕಿ ಅವರಿಗೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.

ಬಾಬಾ ಸಿದ್ದಿಕಿ ನಿಧನದ ಸುದ್ದಿ ತಿಳಿದ ತಕ್ಷಣ ಸಾಕಷ್ಟು ಕಾರ್ಯಕರ್ತರು ಆಸ್ಪತ್ರೆ ಎದುರು ಜಮಾಯಿಸಿದ್ದಾರೆ. ಆಶಿಶ್ ಶೇಲಾರ್ ಇತ್ತೀಚೆಗೆ ಲೀಲಾವತಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಾಬಾ ಸಿದ್ದಿಕಿ ಶಾಸಕ ಜೀಶನ್ ಸಿದ್ದಿಕಿ ಅವರ ತಂದೆ. ಕೆಲ ದಿನಗಳ ಹಿಂದೆ ಎನ್‌ಸಿಪಿ ಸೇರಿದ್ದರು. ನಟ ಸಯಾಜಿ ಶಿಂಧೆ ಅವರ ಪಾರ್ಟಿ ಸೇರ್ಪಡೆ ಸಂದರ್ಭದಲ್ಲಿ ಅವರು ಉಪಸ್ಥಿತರಿದ್ದರು.

ಬಾಬಾ ಸಿದ್ದಿಕಿ ಯಾರು?

ಬಾಬಾ ಸಿದ್ದಿಕಿ ರಾಜಕಾರಣಿ ಮಾತ್ರವಲ್ಲದೆ ಅವರ ಹೆಸರು ಬಾಲಿವುಡ್‌ನಲ್ಲೂ ಪ್ರಸಿದ್ಧವಾಗಿದೆ. ಪ್ರತಿ ವರ್ಷ ಇವರು ಆಯೋಜಿಸುವ ಇಫ್ತಾರ್ ಕೂಟ ಮನೆಮಾತಾಗಿದೆ. ಬಾಲಿವುಡ್ ಸೆಲೆಬ್ರಿಟಿಗಳು ಮಾತ್ರವಲ್ಲದೆ ಅನೇಕ ಕಿರುತೆರೆ ತಾರೆಯರು ಕೂಡ ಈ ಪಾರ್ಟಿಯಲ್ಲಿ ಭಾಗವಹಿಸುತ್ತಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಕೂಡ ಸಿದ್ದಿಕಿ ಅವರ ಪಾರ್ಟಿಗೆ ತಪ್ಪದೇ ಬರುತ್ತಿದ್ದರು. ಸಲ್ಮಾನ್ ಖಾನ್ ಬಾಬಾ ಸಿದ್ದಿಕಿ ಜೊತೆ ನಿಕಟ ಸಂಬಂಧ ಹೊಂದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:53 pm, Sat, 12 October 24

Follow Us
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು