Sign In

By signing in or creating an account, you agree with Associated Broadcasting Company's Terms & Conditions and Privacy Policy.

Baba Siddique: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ

ಬಾಬಾ ಸಿದ್ದಿಕಿ ಕಚೇರಿ ಸಮೀಪದ ರಾಮಮಂದಿರ ಬಳಿಯೇ ಕೃತ್ಯವೆಸಗಲಾಗಿದೆ. ಬಾಬಾ ಸಿದ್ದಿಕಿ ಮೇಲೆ ಎರಡು ಮೂರು ಸುತ್ತು ಗುಂಡು ಹಾರಿಸಲಾಗಿದೆ. ಅದರಲ್ಲಿ ಒಂದು ಗುಂಡು ಅವರ ಎದೆಗೆ ತಗುಲಿತು. ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Baba Siddique: ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿಗೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಹತ್ಯೆ
ಅಜಿತ್ ಪವಾರ್ ಬಣದ ಹಿರಿಯ ನಾಯಕ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 12, 2024 | 11:16 PM

ಮುಂಬೈ, ಅಕ್ಟೋಬರ್​ 12: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಬಣದ ಎನ್​ಸಿಪಿ ಹಿರಿಯ ನಾಯಕ ಬಾಬಾ ಸಿದ್ದಿಕಿ (Baba Siddique) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವಂತಹ ಘಟನೆ ಮುಂಬೈನ ಬಾಂದ್ರಾ ಪಶ್ಚಿಮ ಭಾಗದಲ್ಲಿ ನಡೆದಿದೆ. ಎದೆ, ಹೊಟ್ಟೆ ಭಾಗಕ್ಕೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಇದರಿಂದ ಗಂಭೀರ ಗಾಯಗೊಂಡಿದ್ದ ಸಿದ್ದಿಕಿರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಲೀಲಾವತಿ ಆಸ್ಪತ್ರೆಯಲ್ಲಿ ಕೊನೆಯುರಿಸೆಳೆದಿದ್ದಾರೆ.

ಇಂದು ರಾತ್ರಿ 9.15 ರ ಸುಮಾರಿಗೆ ನಿರ್ಮಲ್ ನಗರ ಪ್ರದೇಶದಲ್ಲಿ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿ ಹತ್ಯೆಗೈಯಲಾಗಿದೆ. ಬಾಬಾ ಸಿದ್ದಿಕಿ ಕಚೇರಿ ಸಮೀಪದ ರಾಮಮಂದಿರ ಬಳಿಯೇ ಕೃತ್ಯವೆಸಗಲಾಗಿದೆ. ಬಾಬಾ ಸಿದ್ದಿಕಿ ಮೇಲೆ ಎರಡು ಮೂರು ಸುತ್ತು ಗುಂಡು ಹಾರಿಸಲಾಗಿದೆ. ಅದರಲ್ಲಿ ಒಂದು ಗುಂಡು ಅವರ ಎದೆಗೆ ತಗುಲಿತು. ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ರೈಲು ಅಪಘಾತಕ್ಕೆ ಕಾರಣವೇನು? ರೈಲ್ವೆ ಅಧಿಕಾರಿ ಹೀಗಂತಾರೆ…

ಬಾಬಾ ಸಿದ್ದಿಕಿ ಜೊತೆಗಿದ್ದ ಸಹೋದ್ಯೋಗಿ ಕಾಲಿಗೆ ಕೂಡ ಗುಂಡು ತಗುಲಿದೆ. ಸದ್ಯ ವಿಡಿಯೋ ಒಂದು ವೈರಲ್ ಆಗಿದೆ. ಕಳೆದ 15 ದಿನಗಳ ಹಿಂದೆ ಬಾಬಾ ಸಿದ್ದಿಕಿ ಅವರಿಗೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.

ಬಾಬಾ ಸಿದ್ದಿಕಿ ನಿಧನದ ಸುದ್ದಿ ತಿಳಿದ ತಕ್ಷಣ ಸಾಕಷ್ಟು ಕಾರ್ಯಕರ್ತರು ಆಸ್ಪತ್ರೆ ಎದುರು ಜಮಾಯಿಸಿದ್ದಾರೆ. ಆಶಿಶ್ ಶೇಲಾರ್ ಇತ್ತೀಚೆಗೆ ಲೀಲಾವತಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಾಬಾ ಸಿದ್ದಿಕಿ ಶಾಸಕ ಜೀಶನ್ ಸಿದ್ದಿಕಿ ಅವರ ತಂದೆ. ಕೆಲ ದಿನಗಳ ಹಿಂದೆ ಎನ್‌ಸಿಪಿ ಸೇರಿದ್ದರು. ನಟ ಸಯಾಜಿ ಶಿಂಧೆ ಅವರ ಪಾರ್ಟಿ ಸೇರ್ಪಡೆ ಸಂದರ್ಭದಲ್ಲಿ ಅವರು ಉಪಸ್ಥಿತರಿದ್ದರು.

ಬಾಬಾ ಸಿದ್ದಿಕಿ ಯಾರು?

ಬಾಬಾ ಸಿದ್ದಿಕಿ ರಾಜಕಾರಣಿ ಮಾತ್ರವಲ್ಲದೆ ಅವರ ಹೆಸರು ಬಾಲಿವುಡ್‌ನಲ್ಲೂ ಪ್ರಸಿದ್ಧವಾಗಿದೆ. ಪ್ರತಿ ವರ್ಷ ಇವರು ಆಯೋಜಿಸುವ ಇಫ್ತಾರ್ ಕೂಟ ಮನೆಮಾತಾಗಿದೆ. ಬಾಲಿವುಡ್ ಸೆಲೆಬ್ರಿಟಿಗಳು ಮಾತ್ರವಲ್ಲದೆ ಅನೇಕ ಕಿರುತೆರೆ ತಾರೆಯರು ಕೂಡ ಈ ಪಾರ್ಟಿಯಲ್ಲಿ ಭಾಗವಹಿಸುತ್ತಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಕೂಡ ಸಿದ್ದಿಕಿ ಅವರ ಪಾರ್ಟಿಗೆ ತಪ್ಪದೇ ಬರುತ್ತಿದ್ದರು. ಸಲ್ಮಾನ್ ಖಾನ್ ಬಾಬಾ ಸಿದ್ದಿಕಿ ಜೊತೆ ನಿಕಟ ಸಂಬಂಧ ಹೊಂದಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:53 pm, Sat, 12 October 24

ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ