AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿ ಒತ್ತಡಕ್ಕೆ ಪತ್ನಿಯನ್ನು ಕೊಲೆಗೈದ ಬಿಜೆಪಿ ನಾಯಕ ರೋಹಿತ್ ಸೈನಿ

ಪ್ರೇಯಸಿ ಒತ್ತಡದಿಂದ ಬಿಜೆಪಿ ನಾಯಕ ರೋಹಿತ್ ಸೈನಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಅಜ್ಮೀರ್​​ನಲ್ಲಿ ನಡೆದಿದೆ. ರೋಹಿತ್ ಸೈನಿ ತನ್ನ ಗೆಳತಿ ರಿತು ಸೈನಿಯ ಮಾತು ಕೇಳಿ ಪತ್ನಿಯನ್ನು ಹತ್ಯೆ ಮಾಡಿ ಈಗ ಜೈಲು ಸೇರಿದ್ದಾರೆ. ಆಗಸ್ಟ್ 10 ರಂದು ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಈ ಹತ್ಯೆಯನ್ನು ಆರಂಭದಲ್ಲಿ ದರೋಡೆ ಎಂದು ಬಿಂಬಿಸಲಾಗಿತ್ತು, ಆದರೆ ಪೊಲೀಸರು ಒಂದು ದಿನದೊಳಗೆ ಪಿತೂರಿಯನ್ನು ಬಯಲು ಮಾಡಿದರು.ಆಗಸ್ಟ್ 10 ರಂದು ಸಂಜು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿರುವುದು ಪತ್ತೆಯಾಗಿದೆ.

ಪ್ರೇಯಸಿ ಒತ್ತಡಕ್ಕೆ ಪತ್ನಿಯನ್ನು ಕೊಲೆಗೈದ ಬಿಜೆಪಿ ನಾಯಕ ರೋಹಿತ್ ಸೈನಿ
ಕೊಲೆ Image Credit source: Free Press Journal
ನಯನಾ ರಾಜೀವ್
|

Updated on: Aug 17, 2025 | 12:07 PM

Share

ಅಜ್ಮೀರ್​, ಆಗಸ್ಟ್​ 17: ಪ್ರೇಯಸಿ ಒತ್ತಡದಿಂದ ಬಿಜೆಪಿ ನಾಯಕ ರೋಹಿತ್ ಸೈನಿ ಪತ್ನಿಯನ್ನು ಕೊಲೆ(Murder) ಮಾಡಿರುವ ಘಟನೆ ಅಜ್ಮೀರ್​​ನಲ್ಲಿ ನಡೆದಿದೆ. ರೋಹಿತ್ ಸೈನಿ ತನ್ನ ಗೆಳತಿ ರಿತು ಸೈನಿಯ ಮಾತು ಕೇಳಿ ಪತ್ನಿಯನ್ನು ಹತ್ಯೆ ಮಾಡಿ ಈಗ ಜೈಲು ಸೇರಿದ್ದಾರೆ. ಆಗಸ್ಟ್ 10 ರಂದು ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಈ ಹತ್ಯೆಯನ್ನು ಆರಂಭದಲ್ಲಿ ದರೋಡೆ ಎಂದು ಬಿಂಬಿಸಲಾಗಿತ್ತು, ಆದರೆ ಪೊಲೀಸರು ಒಂದು ದಿನದೊಳಗೆ ಪಿತೂರಿಯನ್ನು ಬಯಲು ಮಾಡಿದರು.ಆಗಸ್ಟ್ 10 ರಂದು ಸಂಜು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿರುವುದು ಪತ್ತೆಯಾಗಿದೆ.

ರೋಹಿತ್ ಸೈನಿ ತನ್ನ ಮೊದಲ ಹೇಳಿಕೆಯಲ್ಲಿ, ದರೋಡೆಕೋರರು ತನ್ನ ಪತ್ನಿಯನ್ನು ಕೊಂದು ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.ಪೊಲೀಸರು ರೋಹಿತ್ ಸೈನಿಯ ಗೆಳತಿ ರಿತು ಸೈನಿಯನ್ನೂ ಬಂಧಿಸಿದ್ದಾರೆ.

ರೋಹಿತ್ ಸ್ವತಃ ತನ್ನ ಪತ್ನಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡರು ಮತ್ತು ಈ ಕೃತ್ಯವು ಆಕಸ್ಮಿಕವಲ್ಲ ಆದರೆ ತನ್ನ ಗೆಳತಿಯ ಪ್ರಭಾವದಿಂದ ಪೂರ್ವಯೋಜಿತ ಕೊಲೆ ಎಂದು ಹೇಳಿದ್ದಾರೆ. ರೋಹಿತ್ ಮತ್ತು ರಿತು ಹಲವಾರು ವರ್ಷಗಳಿಂದ ಸಂಬಂಧದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಸಂಜು ಅವರಿಬ್ಬರ ಮಧ್ಯೆ ಗೋಡೆಯಂತಿದ್ದರು. ಹೀಗಾಗಿ ಹೇಗಾದರೂ ಮಾಡ ಆಕೆಯನ್ನು ತನ್ನ ಜೀವನದಿಂದ ದೂರವಾಗುವಂತೆ ಮಾಡಬೇಕು ಎಂದು ರೋಹಿತ್​ಗೆ ಒತ್ತಡ ಹಾಕಿ ರಿತು ಈ ಕೊಲೆ ಮಾಡಿಸಿದ್ದಾಳೆ. ಪ್ರಕರಣವನ್ನು 24 ಗಂಟೆಗಳ ಒಳಗೆ ಭೇದಿಸಲಾಯಿತು.

ಮತ್ತಷ್ಟು ಓದಿ: ಬಿಹಾರ: ಲವರ್​ ಜತೆ ಸೇರಿ ಗಂಡನನ್ನು ಕೊಂದ ಪತ್ನಿ, ರಾಜಾ ರಘುವಂಶಿ ಹತ್ಯೆ ನೆನಪಿಸುವ ಮತ್ತೊಂದು ಘಟನೆ

ಮತ್ತೊಂದು ಘಟನೆ ದೆಹಲಿಯ (Delhi Crime) ಕರವಾಲ್ ನಗರದಲ್ಲಿ ಆಘಾತಕಾರಿ ಘಟನೆ (Shocking News) ನಡೆದಿದ್ದು, ಒಬ್ಬ ವ್ಯಕ್ತಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಯನ್ನು ಪ್ರದೀಪ್ ಎಂದು ಗುರುತಿಸಲಾಗಿದೆ ಈತ ತನ್ನ ಪತ್ನಿ ಜಯಶ್ರೀ ಮತ್ತು ಐದು ಮತ್ತು ಏಳು ವರ್ಷದ ಪುತ್ರಿಯರನ್ನು ಕೊಂದಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ, ದಂಪತಿಯ ನಡುವೆ ಜಗಳವಾಗಿದ್ದು, ನಂತರ ಪ್ರದೀಪ್ ಈ ಕೊಲೆ ಮಾಡಿದ್ದಾರೆ.

ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರದೀಪ್ ಬಂಧನಕ್ಕೆ ಹುಡುಕಾಟ ಆರಂಭಿಸಿದ್ದಾರೆ. ಇದರ ಜೊತೆಗೆ, 3 ಜನರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. “ದೆಹಲಿಯ ಕರವಾಲ್ ನಗರ ಪ್ರದೇಶದಲ್ಲಿ ಪ್ರದೀಪ್ ಎಂಬ ವ್ಯಕ್ತಿ ತನ್ನ ಪತ್ನಿ, 5 ಮತ್ತು 7 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಕೊಂದಿದ್ದಾರೆ. ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ