AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂಪುರ್ ಹತ್ಯೆಗೈದವರಿಗೆ ಬಹುಮಾನ ಘೋಷಿಸಿದ್ದ ಅಜ್ಮೇರ್ ಧಾರ್ಮಿಕ ಮುಖಂಡನ ಬಂಧನ

ಭಾರತದಲ್ಲಿ ಮುಸ್ಲಿಮರನ್ನು ಬೇಕೆಂದೇ ಸಮಾಜದಿಂದ ಪ್ರತ್ಯೇಕಿಸಿ ಹತ್ಯೆ ಮಾಡಲಾಗುತ್ತಿದೆ ಎಂದು ಆತ ಆರೋಪಿಸಿದ್ದ.

ನೂಪುರ್ ಹತ್ಯೆಗೈದವರಿಗೆ ಬಹುಮಾನ ಘೋಷಿಸಿದ್ದ ಅಜ್ಮೇರ್ ಧಾರ್ಮಿಕ ಮುಖಂಡನ ಬಂಧನ
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಮತ್ತು ಬಂಧಿತ ಸಲ್ಮಾನ ಚಿಷ್ತಿ
TV9 Web
| Edited By: |

Updated on:Jul 06, 2022 | 10:02 AM

Share

ದೆಹಲಿ: ಬಿಜೆಪಿಯ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡಿದವರಿಗೆ ತನ್ನ ಮನೆ ಮತ್ತು ಆಸ್ತಿ ಕೊಡುವುದಾಗಿ ಘೋಷಿಸಿದ್ದ ಅಜ್ಮೇರ್​ನ ಧಾರ್ಮಿಕ ಮುಖಂಡನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.  ನೂಪುರ್ ಹತ್ಯೆಗೆ ಕರೆ ನೀಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾದ ವ್ಯಕ್ತಿಯನ್ನು ಸಲ್ಮಾನ್ ಚಿಷ್ತಿ ಎಂದು ಗುರುತಿಸಲಾಗಿದೆ. ವಿಡಿಯೊ ರೆಕಾರ್ಡ್ ಮಾಡಿದಾಗ ಅವನು ಕುಡಿತದ ಮತ್ತಿನಲ್ಲಿದ್ದ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಪ್ರವಾದಿ ಮೊಹಮದ್ ಪೈಗಂಬರ್ ಬಗ್ಗೆ ನೂಪುರ್ ಶರ್ಮಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಖಂಡಿಸಿ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು. ನೂಪುರ್ ಶರ್ಮಾಗೆ ಬೆಂಬಲಿಸಿದ ಆರೋಪದ ಮೇಲೆ ಉದಯ್​ಪುರ್ ಮತ್ತು ಅಮರಾವತಿಯಲ್ಲಿ ತಲಾ ಒಬ್ಬರು ಕೊಲೆಯಾಗಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೊ ವೈರಲ್ ಆಗಿತ್ತು. ನೂಪುರ್ ಶರ್ಮಾರ ತಲೆ ತಂದು ತೋರಿಸಿದವರಿಗೆ ನನ್ನ ಮನೆ ಮತ್ತು ಆಸ್ತಿ ಕೊಡುತ್ತೇನೆ ಎಂದು ಈತ ಘೋಷಿಸಿದ್ದ. ಖ್ವಾಜಾ ಸಾಹೇಬ್ ಮತ್ತು ಮೊಹಮದ್ ಸಾಹೇಬರ ಗೌರವವನ್ನೂ ಬಿಜೆಪಿ ನಾಯಕಿ ಹಾಳು ಮಾಡಿದ್ದಾರೆ. ಹೀಗಾಗಿಯೇ ಅವರನ್ನು ಕೊಂದವರಿಗೆ ತನ್ನ ಸರ್ವಸ್ವವನ್ನೂ ಕೊಡಲು ಸಿದ್ಧನಿದ್ದೇನೆ ಎಂದು ಹೇಳಿದ್ದ.

ಭಾರತದಲ್ಲಿ ಮುಸ್ಲಿಮರನ್ನು ಬೇಕೆಂದೇ ಸಮಾಜದಿಂದ ಪ್ರತ್ಯೇಕಿಸಿ ಹತ್ಯೆ ಮಾಡಲಾಗುತ್ತಿದೆ ಎಂದು ಆತ ಆರೋಪಿಸಿದ್ದ.

Published On - 9:56 am, Wed, 6 July 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ