AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಮೀರ್ ಹತ್ಯಾಕಾಂಡದಲ್ಲಿ ಟ್ವಿಸ್ಟ್​: ವೆಬ್​ ಸೀರೀಸ್ ನೋಡಿ ನಾಲ್ವರನ್ನು ಕೊಂದ 17ರ ಬಾಲಕ, ಸಿಕ್ಕಿಬಿದ್ದಿದ್ದು ಹೀಗೆ

ಅಜ್ಮೀರ್ ಹತ್ಯಾಕಾಂಡದಲ್ಲಿ ಆಘಾತಕಾರಿ ತಿರುವು. ಆಸ್ತಿ ವಿವಾದಕ್ಕಾಗಿ 17 ವರ್ಷದ ಬಾಲಕನೇ ತಂದೆ ಸೇರಿ ನಾಲ್ವರನ್ನು ಕ್ರೂರವಾಗಿ ಕೊಂದಿದ್ದಾನೆ. ಅಪರಾಧ ವೆಬ್ ಸೀರೀಸ್‌ಗಳಿಂದ ಪ್ರೇರಿತನಾಗಿ ಕೊಲೆಗೆ ಸ್ಕೆಚ್ ಹಾಕಿ, ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ. ಆದರೆ, ಆತನ ಅಸಹಜ ವರ್ತನೆ ಪೊಲೀಸರಿಗೆ ಅನುಮಾನ ಮೂಡಿಸಿತು. ತನಿಖೆ ಬಳಿಕ ಬಾಲಕನ ಕ್ರೂರ ಕೃತ್ಯ ಮತ್ತು ವೆಬ್ ಸರಣಿ ಗೀಳು ಬಯಲಾಯಿತು.

ಅಜ್ಮೀರ್ ಹತ್ಯಾಕಾಂಡದಲ್ಲಿ ಟ್ವಿಸ್ಟ್​: ವೆಬ್​ ಸೀರೀಸ್ ನೋಡಿ ನಾಲ್ವರನ್ನು ಕೊಂದ 17ರ ಬಾಲಕ, ಸಿಕ್ಕಿಬಿದ್ದಿದ್ದು ಹೀಗೆ
ಕಾರುImage Credit source: Loksatta
ನಯನಾ ರಾಜೀವ್
|

Updated on: May 30, 2026 | 7:20 AM

Share

ಅಜ್ಮೀರ್, ಮೇ 30: ರಾಜಸ್ಥಾನದ ಅಜ್ಮೀರ್​ ಜಿಲ್ಲೆಯ ಮಾಜಿ ಸರಪಂಚ್ ರಾಮ್ ಸಿಂಗ್ ಚೌಧರಿ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಸಜೀವದಹನ ಪ್ರಕರಣಕ್ಕೆ ಇದೀಗ ದೊಡ್ಡ ತಿರುವುದು ಸಿಕ್ಕಿದೆ. ಆರಂಭದಲ್ಲಿ ಇದೊಂದು ಕಾರು ಅಪಘಾತ(Accident) ಎನ್ನಲಾಗಿತ್ತು. ಆದರೆ, ಪೊಲೀಸರ ಹದ್ದಿನ ಕಣ್ಣಿನ ತನಿಖೆಯಿಂದಾಗಿ ಇದು ಅಪರಾಧ ಜಗತ್ತಿನ ವೆಬ್ ಸೀರೀಸ್ ನೋಡಿ, ಆಸ್ತಿಗಾಗಿ 17 ವರ್ಷದ ಮಗನೇ ರೂಪಿಸಿದ ಭೀಕರ ಕೊಲೆ ಎಂಬ ಆಘಾತಕಾರಿ ಸತ್ಯ ಬಯಲಾಗಿದೆ.

ಚಹಾ ಕುಡಿಯುವಾಗ ಸಿಕ್ಕಿಬಿದ್ದ ಹಂತಕ

ಘಟನೆಯ ನಂತರ ಇಡೀ ಕುಟುಂಬ ಕಣ್ಣೀರಿಡುತ್ತಿದ್ದರೆ, ರಾಮ್ ಸಿಂಗ್ ಅವರ 17 ವರ್ಷದ ಅಪ್ರಾಪ್ತ ಮಗ ಮಾತ್ರ ಶಾಂತನಾಗಿದ್ದ. ತನ್ನ ತಾಯಿ ಪಕ್ಕದಲ್ಲಿ ಕುಳಿತು ಆಕೆಯನ್ನು ಸಮಾಧಾನಪಡಿಸುತ್ತಾ, ಅತ್ಯಂತ ನಿರಾಳವಾಗಿ ಚಹಾ ಕುಡಿಯುತ್ತಿದ್ದ. ಸಾವಿನ ಮನೆಯಲ್ಲಿ ಬಾಲಕನ ಈ ಅಸಹಜ ನಡವಳಿಕೆಯೇ ಪೊಲೀಸರಿಗೆ ಮೊದಲ ಅನುಮಾನ ಮೂಡಿಸಿತು.

ಅಪಘಾತದ ಕಥೆ ಫೇಲ್ ಆಗಿದ್ದು ಹೇಗೆ?

ಕೊಲೆಯನ್ನು ಅಪಘಾತವೆಂದು ಬಿಂಬಿಸಲು ಶವಗಳನ್ನು ಸ್ಕಾರ್ಪಿಯೋ ಕಾರಿನಲ್ಲಿಟ್ಟು ಬೆಂಕಿ ಹಚ್ಚಲಾಗಿತ್ತು. ಆದರೆ ಪೊಲೀಸರು ಸೂಕ್ಷ್ಮವಾಗಿ ಗಮನಿಸಿದಾಗ ಎರಡು ಪ್ರಮುಖ ಸಾಕ್ಷ್ಯಗಳು ಸಿಕ್ಕಿವೆ.

ಖಾಲಿ ಇದ್ದ ಮುಂಭಾಗದ ಸೀಟು: ಕಾರು ಅಪಘಾತವಾಗಿದ್ದರೆ ಯಾರಾದರೂ ಒಬ್ಬರು ಡ್ರೈವಿಂಗ್ ಸೀಟಿನಲ್ಲಿ ಇರಬೇಕಿತ್ತು, ಆದರೆ ಎಲ್ಲಾ ನಾಲ್ಕು ಶವಗಳು ಹಿಂಬದಿಯ ಸೀಟಿನಲ್ಲಿದ್ದವು.

ಇರಿತದ ಗಾಯಗಳು: ಮೃತರಲ್ಲಿ ಒಬ್ಬರಾದ ಎರಡನೇ ಪತ್ನಿ ಸರ್ಗ್ಯಾನ್ ದೇಹದ ಮೇಲೆ ಚೂರಿಯಿಂದ ಇರಿದ ಗಾಯಗಳಿದ್ದವು. ಇದರಿಂದಾಗಿ ಪೊಲೀಸರು ತನಿಖೆಯ ದಿಕ್ಕನ್ನು ಬದಲಿಸಿದರು.

5 ತಿಂಗಳ ಕ್ರಿಮಿನಲ್ ಸ್ಕೆಚ್ ಮತ್ತು ವೆಬ್ ಸೀರೀಸ್ ಗೀಳು

ಪೊಲೀಸ್ ವಿಚಾರಣೆಯಲ್ಲಿ ಬಾಲಕ ತನ್ನ ತಪ್ಪು ಒಪ್ಪಿಕೊಂಡಿದ್ದಾನೆ. ತಂದೆ ರಾಮ್ ಸಿಂಗ್ ಎರಡನೇ ಮದುವೆಯಾಗಿದ್ದರಿಂದ ಆಸ್ತಿ ಕೈತಪ್ಪುವ ಭಯ ಮತ್ತು ಮೊದಲ ತಾಯಿಗೆ ನೀಡುತ್ತಿದ್ದ ಕಿರುಕುಳದಿಂದಾಗಿ ಬಾಲಕ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ.

ಕಳೆದ 5 ತಿಂಗಳುಗಳಿಂದ ಆತ ಅಪರಾಧ ಆಧಾರಿತ ವೆಬ್ ಸರಣಿಗಳು (Crime Web Series) ಮತ್ತು ಆನ್‌ಲೈನ್ ಗೇಮ್‌ಗಳನ್ನು ನೋಡಿ, ಪೊಲೀಸರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಹಾಗೂ ಸಾಕ್ಷ್ಯಗಳನ್ನು ಹೇಗೆ ನಾಶಪಡಿಸಬೇಕು ಎಂದು ಸ್ಕೆಚ್ ಹಾಕಿದ್ದ.

ಮತ್ತಷ್ಟು ಓದಿ: ಬೆಳಗಾವಿ: ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ, ಗೂಡ್ಸ್ ಆಟೋ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ದುರ್ಮರಣ

ಘಟನೆಯ ರಾತ್ರಿ ನಡೆದಿದ್ದೇನು?

ಘಟನೆಯ ರಾತ್ರಿ ತಂದೆ ರಾಮ್ ಸಿಂಗ್ ಮತ್ತು ಎರಡನೇ ಪತ್ನಿ ಬಿಯರ್ ಕುಡಿದು ಮಲಗಿದ್ದರು. ಮುಂಜಾನೆ 4 ಗಂಟೆಗೆ ಮೊಬೈಲ್‌ನಲ್ಲಿ ಗೇಮ್ ಆಡುತ್ತಿದ್ದ ಬಾಲಕ, ತಂದೆಯ ಕೋಣೆಗೆ ನುಗ್ಗಿ ಅವರ ಕಿವಿಯ ಬಳಿ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಆದರೆ ಈ ಗಲಾಟೆಯಿಂದ ಎರಡನೇ ಪತ್ನಿ ಸರ್ಗ್ಯಾನ್ ಎಚ್ಚರಗೊಂಡು ಕಿರುಚಾಡಿದ್ದಾಳೆ. ಆಗ ಬಾಲಕನಿಗೆ ಸಹಾಯ ಮಾಡಲು ಆತನ ತಾಯಿ (ಮೊದಲ ಪತ್ನಿ ಸುನೀತಾ) ಮತ್ತು ಸಹೋದರಿ ಕೂಡ ಕೋಣೆಗೆ ಬಂದಿದ್ದಾರೆ. ನಂತರ ಎಲ್ಲರೂ ಸೇರಿ ಎರಡನೇ ಪತ್ನಿ ಸರ್ಗ್ಯಾನ್, ತಾಯಿ ಪುಸಿ ದೇವಿ ಮತ್ತು ಬ್ಯಾಂಕ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಸೊಸೆ ಮಹಿಮಾಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಸಾಕ್ಷ್ಯ ನಾಶಕ್ಕೆ ಕಾರಿನೊಳಗೆ ಹಾಕಿ ಬೆಂಕಿ ಹಚ್ಚಿದ್ದರು.

ವೆಬ್ ಸೀರೀಸ್ ನೋಡಿ ಪರ್ಫೆಕ್ಟ್ ಮರ್ಡರ್ ಮಾಡಲು ಹೊರಟಿದ್ದ ಅಪ್ರಾಪ್ತ ಬಾಲಕ ಹಾಗೂ ಆತನ ತಾಯಿಯ ನಾಟಕವನ್ನು ಅಜ್ಮೀರ್ ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ