AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕಾಶ್ ಏರ್ ಡೇಟಾಗೆ ಹ್ಯಾಕರ್‌ಗಳಿಂದ ಕನ್ನ; ಮಾಹಿತಿ ಸೋರಿಕೆಯಾಗಿದ್ದಕ್ಕೆ ಕ್ಷಮೆಯಾಚಿಸಿದ ವಿಮಾನಯಾನ ಸಂಸ್ಥೆ

ಘಟನೆ ಬಗ್ಗೆ ಅರಿವಿಗೆ ಬಂದ ಕೂಡಲೇ , ಆಕಾಶ ಏರ್ ತನ್ನ ಸಿಸ್ಟಮ್‌ನ ಸಂಬಂಧಿತ ಕ್ರಿಯಾತ್ಮಕ ಅಂಶಗಳನ್ನು ಸಂಪೂರ್ಣವಾಗಿ ಮುಚ್ಚುವ ಮೂಲಕ ಈ ಅನಧಿಕೃತ ಪ್ರವೇಶವನ್ನು ತಕ್ಷಣವೇ ನಿಲ್ಲಿಸಿದೆ ಎಂದು ಹೇಳಿದೆ

ಆಕಾಶ್ ಏರ್ ಡೇಟಾಗೆ ಹ್ಯಾಕರ್‌ಗಳಿಂದ ಕನ್ನ; ಮಾಹಿತಿ ಸೋರಿಕೆಯಾಗಿದ್ದಕ್ಕೆ ಕ್ಷಮೆಯಾಚಿಸಿದ ವಿಮಾನಯಾನ ಸಂಸ್ಥೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 28, 2022 | 8:26 PM

Share

ದೆಹಲಿ: ಒಂದು ತಿಂಗಳ ಹಿಂದೆಯಷ್ಟೇ ಕಾರ್ಯಾಚರಣೆ ಆರಂಭಿಸಿದ ಆಕಾಶ ಏರ್‌ ಡೇಟಾಗೆ (Akasa Air) ಹ್ಯಾಕರ್‌ಗಳು ಕನ್ನ ಹಾಕಿರುವ ಬಗ್ಗೆ ವರದಿ ಆಗಿದೆ. ಮಾಹಿತಿ ಸೋರಿಕೆ ಆಗಿರುವ ಬಗ್ಗೆ ಬಗ್ಗೆ ಏರ್‌ಲೈನ್ ಭಾನುವಾರ ಕ್ಷಮೆಯಾಚಿಸಿದೆ. ಈ ಘಟನೆಯನ್ನು ನೋಡಲ್ ಏಜೆನ್ಸಿಯಾದ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In) ಗೆ ವರದಿ ಮಾಡಲಾಗಿದೆ ಎಂದು ಪ್ರಸ್ತುತ ವಿಮಾನಯಾನ ಸಂಸ್ಥೆ ಹೇಳಿದೆ. ತನ್ನ ವೆಬ್‌ಸೈಟ್‌ನಲ್ಲಿ ಈ ಬಗ್ಗೆ ತಿಳಿಸಿರುವ ಆಕಾಶ್ ಏರ್, ತನ್ನ ಲಾಗಿನ್ ಮತ್ತು ಸೈನ್-ಅಪ್ ಸೇವೆಗೆ ಸಂಬಂಧಿಸಿದ ತಾತ್ಕಾಲಿಕ ತಾಂತ್ರಿಕ ಕಾನ್ಫಿಗರೇಶನ್ ದೋಷವನ್ನು ಆಗಸ್ಟ್ 25 ರಂದು ವರದಿ ಮಾಡಲಾಗಿದೆ ಎಂದು ಏರ್‌ಲೈನ್ ಹೇಳಿದೆ. ಇದರ ಪರಿಣಾಮ,  ಹೆಸರು, ಲಿಂಗ, ಇಮೇಲ್ ವಿಳಾಸಗಳು ಮತ್ತು ಫೋನ್ ಸಂಖ್ಯೆಗಳಿಗೆ ಸೀಮಿತವಾಗಿರುವ ಕೆಲವು ಆಕಾಶ ಏರ್ ನೊಂದಾಯಿತ ಬಳಕೆದಾರರ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳು ವೀಕ್ಷಿಸಿರಬಹುದು. “ಮೇಲಿನ ವಿವರಗಳನ್ನು ಹೊರತುಪಡಿಸಿ, ಯಾವುದೇ ಪ್ರಯಾಣ-ಸಂಬಂಧಿತ ಮಾಹಿತಿ, ಪ್ರಯಾಣ ದಾಖಲೆಗಳು ಅಥವಾ ಪಾವತಿ ಮಾಹಿತಿಯು ರಾಜಿ ಮಾಡಿಕೊಂಡಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಘಟನೆ ಬಗ್ಗೆ ಅರಿವಿಗೆ ಬಂದ ಕೂಡಲೇ , ಆಕಾಶ ಏರ್ ತನ್ನ ಸಿಸ್ಟಮ್‌ನ ಸಂಬಂಧಿತ ಕ್ರಿಯಾತ್ಮಕ ಅಂಶಗಳನ್ನು ಸಂಪೂರ್ಣವಾಗಿ ಮುಚ್ಚುವ ಮೂಲಕ ಈ ಅನಧಿಕೃತ ಪ್ರವೇಶವನ್ನು ತಕ್ಷಣವೇ ನಿಲ್ಲಿಸಿದೆ ಎಂದು ಹೇಳಿದೆ. ಈ ಪರಿಸ್ಥಿತಿಯನ್ನು ಪರಿಹರಿಸಲು ಹೆಚ್ಚುವರಿ ನಿಯಂತ್ರಣಗಳನ್ನು ಸೇರಿಸಿದ ನಂತರ, ನಾವು ನಮ್ಮ ಲಾಗಿನ್ ಮತ್ತು ಸೈನ್-ಅಪ್ ಅನ್ನು ಪುನರಾರಂಭಿಸಿದ್ದೇವೆ” ಎಂದು ವಿಮಾನಯಾನ ಸಂಸ್ಥೆ ಹೇಳಿದೆ

ಸಿಸ್ಟಂ ಭದ್ರತೆ ಮತ್ತು ಗ್ರಾಹಕರ ಮಾಹಿತಿಯ ರಕ್ಷಣೆ ಅತಿಮುಖ್ಯವಾಗಿದೆ ಎಂದ ಆಕಾಶ ಏರ್, ಇದರಿಂದ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ನಿಮ್ಮಲ್ಲಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ ಎಂದಿದೆ.

ಸುಮಾರು ಒಂದು ದಶಕದಲ್ಲಿ ಪ್ರಾರಂಭವಾದ ಮೊದಲ ಭಾರತೀಯ ವಾಹಕವಾದ ಆಕಾಶ ಏರ್ ಆಗಸ್ಟ್ 7 ರಂದು ಮುಂಬೈನಿಂದ ಅಹಮದಾಬಾದ್‌ಗೆ ತನ್ನ ಮೊದಲ ವಿಮಾನ ಹಾರಾಟ ನಡೆಸಿದೆ.ಈ ತಿಂಗಳ ಆರಂಭದಲ್ಲಿ ನಿಧನರಾದ ಧನಿಕ ರಾಕೇಶ್ ಜುಂಜುನ್ ವಾಲಾ ಅವರು ವಿಮಾನಯಾನ ಸಂಸ್ಥೆಯಲ್ಲಿ ಗಣನೀಯ ಹೂಡಿಕೆ ಮಾಡಿದ್ದರು.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ