AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಪಿ ಪ್ರತಿಮೆ ಮಾಲಾರ್ಪಣೆ ವಿವಾದ: ಮೋದಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆಯುವಂತೆ ನಿತೀಶ್ ಕುಮಾರ್​​ಗೆ ಅಖಿಲೇಶ್ ಒತ್ತಾಯ

"ನಾವು ಅವರ ಜನ್ಮದಿನವನ್ನು ಆಚರಿಸುತ್ತೇವೆ. ಈ ಸರ್ಕಾರವು ಅವರಿಗೆ ಹಾರ ಹಾಕುವುದನ್ನು ತಡೆಯಲು ಪ್ರಯತ್ನಿಸುತ್ತಿದೆ, ಆದರೆ ನಾವು ಅದನ್ನು ರಸ್ತೆಯಲ್ಲಿ ಮಾಡಿದ್ದೇವೆ. ಅವರು ಈ ವಸ್ತುಸಂಗ್ರಹಾಲಯವನ್ನು ಮಾರಾಟ ಮಾಡಲು ಪಿತೂರಿ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಅವರು JPNIC ಅನ್ನು ಮುಚ್ಚಿದ್ದಾರೆ ಎಂದ ಅಖಿಲೇಶ್ ಯಾದವ್

ಜೆಪಿ ಪ್ರತಿಮೆ ಮಾಲಾರ್ಪಣೆ ವಿವಾದ: ಮೋದಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆಯುವಂತೆ ನಿತೀಶ್ ಕುಮಾರ್​​ಗೆ ಅಖಿಲೇಶ್ ಒತ್ತಾಯ
ಅಖಿಲೇಶ್ ಯಾದವ್
ರಶ್ಮಿ ಕಲ್ಲಕಟ್ಟ
|

Updated on: Oct 11, 2024 | 2:22 PM

Share

ದೆಹಲಿ ಅಕ್ಟೋಬರ್ 11: ಜಯಪ್ರಕಾಶ್ ನಾರಾಯಣ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡದಂತೆ ಸಮಾಜವಾದಿ ಪಕ್ಷದ ನಾಯಕರನ್ನು ತಡೆದ ಕಾರಣ ಕೇಂದ್ರದಲ್ಲಿರುವ  ನರೇಂದ್ರ ಮೋದಿ (Narendra Modi) ಸರ್ಕಾರಕ್ಕೆ ಬೆಂಬಲವನ್ನು ಹಿಂಪಡೆಯುವಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಶುಕ್ರವಾರ ಜನತಾ ದಳ (ಯುನೈಟೆಡ್) ನಾಯಕ ನಿತೀಶ್ ಕುಮಾರ್ ಅವರನ್ನು ಒತ್ತಾಯಿಸಿದ್ದಾರೆ. ಗುರುವಾರ ಲಕ್ನೋದಲ್ಲಿ ಅಧಿಕಾರಿಗಳು ಅವರನ್ನು ಪ್ರತಿಮೆಯನ್ನು ಬಳಿ ಹೋಗದಂತೆ ತಡೆದಿದ್ದಕ್ಕೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಿದೆ. “ಹಲವು ಸಮಾಜವಾದಿ ಜನರು ಸರ್ಕಾರದಲ್ಲಿದ್ದಾರೆ ಮತ್ತು ಸರ್ಕಾರವನ್ನು ಮುಂದುವರೆಸಲು ಸಹಾಯ ಮಾಡುತ್ತಿದ್ದಾರೆ. ಬಿಹಾರ ಸಿಎಂ ನಿತೀಶ್ ಕುಮಾರ್ ಅವರ (ಜೈ ಪ್ರಕಾಶ್ ನಾರಾಯಣ್) ಚಳುವಳಿಯಿಂದ ಹೊರಹೊಮ್ಮಿದರು, ಇದು ಸಮಾಜವಾದಿಗೆ ಅವಕಾಶ ನೀಡದ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಳ್ಳಲು ನಿತೀಶ್ ಕುಮಾರ್ ಅವರಿಗೆ ಅವಕಾಶವಾಗಿದೆ. ಜಯಪ್ರಕಾಶ ನಾರಾಯಣ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ,” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಅಖಿಲೇಶ್ ಯಾದವ್ ಟ್ವೀಟ್

ಜಯಪ್ರಕಾಶ್ ನಾರಾಯಣ್ ಅಥವಾ ಜೆಪಿ ಅವರು ಗಾಂಧಿವಾದಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರು ತುರ್ತು ಪರಿಸ್ಥಿತಿಯ ಮೊದಲು ಮತ್ತು ಸಮಯದಲ್ಲಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಪ್ರಚಾರ ಮಾಡಿದರು.

“ನಾವು ಅವರ ಜನ್ಮದಿನವನ್ನು ಆಚರಿಸುತ್ತೇವೆ. ಈ ಸರ್ಕಾರವು ಅವರಿಗೆ ಹಾರ ಹಾಕುವುದನ್ನು ತಡೆಯಲು ಪ್ರಯತ್ನಿಸುತ್ತಿದೆ, ಆದರೆ ನಾವು ಅದನ್ನು ರಸ್ತೆಯಲ್ಲಿ ಮಾಡಿದ್ದೇವೆ. ಅವರು ಈ ವಸ್ತುಸಂಗ್ರಹಾಲಯವನ್ನು ಮಾರಾಟ ಮಾಡಲು ಪಿತೂರಿ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಅವರು JPNIC ಅನ್ನು ಮುಚ್ಚಿದ್ದಾರೆ. ಜೈ ಪ್ರಕಾಶ್ ನಾರಾಯಣ್ ಅವರನ್ನು ಗೌರವಿಸಲು ನಿರ್ಮಿಸಿದ ಮ್ಯೂಸಿಯಂ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಸರ್ಕಾರವು ಸಂವಿಧಾನವನ್ನು ರಕ್ಷಿಸುತ್ತದೆ ಎಂದು ನೀವು ಹೇಗೆ ನಿರೀಕ್ಷಿಸುತ್ತೀರಿ ಎಂದು ಯೋಚಿಸಿ ಎಂದು ಅಖಿಲೇಶ್ ಹೇಳಿದ್ದಾರೆ.

ಏತನ್ಮಧ್ಯೆ, ಅಖಿಲೇಶ್ ಯಾದವ್ ಇಂತಹ ರಾಜಕೀಯ ಸ್ಟಂಟ್‌ಗಳಿಂದ ದೂರವಿರಬೇಕು ಎಂದು ಬಿಜೆಪಿ ನಾಯಕಿ ಶಾಜಿಯಾ ಇಲ್ಮಿ ಹೇಳಿದ್ದಾರೆ.

ಜೈ ಪ್ರಕಾಶ್ ನಾರಾಯಣ್ ಅವರಿಗೆ ಪ್ರಾಮಾಣಿಕವಾಗಿ ಶ್ರದ್ಧಾಂಜಲಿ ಸಲ್ಲಿಸಬೇಕೆಂದರೆ ಆ ಪಕ್ಷಗಳ ಜೊತೆಗಿನ ಮೈತ್ರಿ ಮುರಿದುಕೊಳ್ಳುತ್ತಾರೆ, ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಜೈ ಪ್ರಕಾಶ್ ಜೀ ದನಿ ಎತ್ತಿ ಜೈಲಿಗೆ ಹೋದರು.ಅಲ್ಲೊಂದು ಕೆಲಸ ನಡೆಯುತ್ತಿದೆ ಹಾಗಾಗಿ ಗೌರವ ಅರ್ಪಿಸಲು ಇತರ ಮಾರ್ಗಗಳಿವೆ ಎಂದು ಅವರಿಗೂ ಗೊತ್ತು ಎಂದಿದ್ದಾರೆ.

ಇದನ್ನೂ ಓದಿ: ಭಾರತೀಯ ಕೋಸ್ಟ್​ ಗಾರ್ಡ್​ ಹೆಲಿಕಾಪ್ಟರ್​ ಪತನ ಪ್ರಕರಣ, ಪೈಲಟ್ ಶವ ಪತ್ತೆ

ಜೆಪಿ ನಾರಾಯಣ್ ಕನ್ವೆನ್ಷನ್ ಸೆಂಟರ್ ಯೋಜನೆಯು ನಿರ್ಮಾಣ ಹಂತದಲ್ಲಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರವು ಪಕ್ಷಕ್ಕೆ ಪತ್ರ ಬರೆದಿತ್ತು.

“ನಿರ್ಮಾಣ ಸಾಮಗ್ರಿಯನ್ನು ಯೋಜಿತವಲ್ಲದ ರೀತಿಯಲ್ಲಿ ಇಡಲಾಗಿದೆ ಮತ್ತು ಮಳೆಗಾಲದ ಕಾರಣ ಅಲ್ಲಿ ಇತರ ಜೀವಿಗಳ ಉಪಸ್ಥಿತಿಯ ಸಾಧ್ಯತೆಯಿದೆ. ಝಡ್-ಪ್ಲಸ್ ಭದ್ರತೆಯನ್ನು ಹೊಂದಿರುವ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಭದ್ರತಾ ದೃಷ್ಟಿಯಿಂದ ಮಾಲೆ ಹಾಕಲು/ಭೇಟಿ ಮಾಡಲು ಸೈಟ್ ಸೂಕ್ತವಾಗಿ ಕಂಡುಬಂದಿಲ್ಲ ಎಂದು ಎಲ್ಡಿಎ ತನ್ನ ಅಕ್ಟೋಬರ್ 10 ರ ಪತ್ರದಲ್ಲಿ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ