AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊಂದಲ ಮುಂದುವರಿದರೆ ಇಂಡಿಯಾ ಮೈತ್ರಿಕೂಟ ಯಶಸ್ವಿಯಾಗಲ್ಲ: ಕಾಂಗ್ರೆಸ್ ವಿರುದ್ಧ ಅಖಿಲೇಶ್ ಯಾದವ್ ಮತ್ತೆ ವಾಗ್ದಾಳಿ

ದೇಶಕ್ಕೆ 2024 ರಲ್ಲಿ ದೊಡ್ಡ ಸವಾಲಿದೆ. ಬಿಜೆಪಿ ಒಂದು ದೊಡ್ಡ ಪಕ್ಷವಾಗಿದೆ. ಅದು ಅತ್ಯಂತ ಸಂಘಟಿತವಾಗಿ ಸಜ್ಜಾಗಿದೆ. ಆದ್ದರಿಂದ ಅದನ್ನು ಎದುರಿಸಲು ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಗೊಂದಲ ಉಂಟಾಗಬಾರದು. ನೀವು ಗೊಂದಲದಿಂದ ಬಿಜೆಪಿಯನ್ನು ಎದುರಿಸಿದರೆ, ನೀವು ಯಶಸ್ವಿಯಾಗುವುದಿಲ್ಲ ಎಂದು ಅಖಿಲೇಶ್ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೊಂದಲ ಮುಂದುವರಿದರೆ ಇಂಡಿಯಾ ಮೈತ್ರಿಕೂಟ ಯಶಸ್ವಿಯಾಗಲ್ಲ: ಕಾಂಗ್ರೆಸ್ ವಿರುದ್ಧ ಅಖಿಲೇಶ್ ಯಾದವ್ ಮತ್ತೆ ವಾಗ್ದಾಳಿ
ಅಖಿಲೇಶ್​ ಯಾದವ್​
ಗಣಪತಿ ಶರ್ಮಾ
|

Updated on: Oct 21, 2023 | 11:50 AM

Share

ನವದೆಹಲಿ, ಅಕ್ಟೋಬರ್​​​ 21: ಮಧ್ಯ ಪ್ರದೇಶ ಚುನಾವಣೆಗೆ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಸಮಾಜವಾದಿ ಪಕ್ಷದ (Samajwadi Party) ಅಧ್ಯಕ್ಷ ಅಖಿಲೇಶ್​ ಯಾದವ್(Akhilesh Yadav) ‘ಕೈ’ ಪಡೆ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ರಾಷ್ಟ್ರವ್ಯಾಪಿ ಜಾತಿ ಆಧಾರಿತ ಜನಗಣತಿಗೆ ಕಾಂಗ್ರೆಸ್ಸಿನ ಬೇಡಿಕೆಯ ಬಗ್ಗೆ ಟೀಕಾ ಪ್ರಹಾರ ನಡೆಸಿದ ಅವರು, ಇದೊಂದು ಪವಾಡ ಎಂದು ಹೇಳಿದ್ದಾರೆ. ದೇಶದ ಅತ್ಯಂತ ಹಳೆಯ ಪಕ್ಷವು ಜಾತಿ ಗಣತಿಯನ್ನು ಬೆಂಬಲಿಸಿರುವುದು ‘ಪವಾಡ’ವೇ ಸರಿ. ಹಿಂದುಳಿದ ಜಾತಿಗಳ ಬೆಂಬಲವಿಲ್ಲದೆ ಯಶಸ್ವಿಯಾಗುವುದು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಜಾತಿ ಗಣತಿಯ ಬೇಡಿಕೆಯನ್ನು ಬೆಂಬಲಿಸಿದೆ ಎಂದು ಅವರು ಟೀಕಿಸಿದ್ದಾರೆ.

ಇದೇ ಕಾಂಗ್ರೆಸ್ ಪಕ್ಷ ಜಾತಿ ಗಣತಿಯ ಅಂಕಿ-ಅಂಶಗಳನ್ನು ನೀಡಿರಲಿಲ್ಲ. ಈಗ ಜಾತಿ ಗಣತಿಯನ್ನು ಬೆಂಬಲಿಸುತ್ತಿದೆ. ಇದೊಂದು ಪವಾಡ. ಏಕೆಂದರೆ ಹಿಂದುಳಿದ ಜಾತಿಗಳ ಬೆಂಬಲವಿಲ್ಲದಿದ್ದರೆ ಅವರು ಯಶಸ್ವಿಯಾಗುವುದಿಲ್ಲ ಎಂಬುದು ಈಗ ಎಲ್ಲರಿಗೂ ತಿಳಿದಿದೆ ಎಂದು ಅಖಿಲೇಶ್ ಭದೋಹಿಯಲ್ಲಿ ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಾಂಗ್ರೆಸ್​​ನವರಿಗೆ ಈಗ ಹಿಂದುಳಿದ ಜಾತಿಗಳ ಬೆಂಬಲ ಇಲ್ಲದೆ ಯಶಸ್ವಿಯಾಗಲು ಸಾಧ್ಯವಿಲ್ಲ ಎಂಬ ಅರಿವಾಗಿದೆ. ಆದರೆ. ಅವರು ಹುಡುಕುತ್ತಿರುವ ಮತಗಳು ಈಗ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಅಖಿಲೇಶ್ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ವಿರುದ್ಧ 28 ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯು ರಾಷ್ಟ್ರೀಯ ರಾಜಕೀಯಕ್ಕಾಗಿ ರೂಪುಗೊಂಡಿದೆಯೇ ವಿನಃ, ಪ್ರಾದೇಶಿಕ ಚುನಾವಣೆಗಳಿಗಾಗಿ ಅಲ್ಲ ಎಂದು ಕಾಂಗ್ರೆಸ್ ಹೇಳಿದ ಕೆಲವೇ ದಿನಗಳಲ್ಲಿ ಸಮಾಜವಾದಿ ಪಕ್ಷದ ಜತೆ ಒಡಕುಮೂಡಿದೆ. ಮಧ್ಯ ಪ್ರದೇಶ ಚುನಾವಣೆಗೆ ಕಾಂಗ್ರೆಸ್‌ನ 144 ಅಭ್ಯರ್ಥಿಗಳ ಪಟ್ಟಿಯನ್ನು ಸಮಾಜವಾದಿ ಪಕ್ಷವು ವಿರೋಧಿಸಿದ ನಂತರ ಉಭಯ ಪಕ್ಷಗಳ ನಡುವಣ ಅಂತರ ಹೆಚ್ಚಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ ವಿಧಾನಸಭೆ ಸೀಟು ಹಂಚಿಕೆ ವಿಚಾರ: ಕಾಂಗ್ರೆಸ್​​ ವಿರುದ್ಧ ಅಖಿಲೇಶ್​ ಯಾದವ್ ಕಿಡಿ

ಕನಿಷ್ಠ ಆರು ಸ್ಥಾನಗಳನ್ನು ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಯಾವುದನ್ನೂ ನೀಡಿಲ್ಲ ಎಂದು ಯಾದವ್ ಇತ್ತೀಚೆಗೆ ಹೇಳಿದ್ದರು.

ಇಂಡಿಯಾ ಮೈತ್ರಿಕೂಟ ಯಶಸ್ವಿಯಾಗದು ಎಂದ ಅಖಿಲೇಶ್

ಈಗಿರುವ ಗೊಂದಲವು ಮುಂದುವರಿದರೆ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸಲು ಎಂದಿಗೂ ಸಾಧ್ಯವಾಗುವುದಿಲ್ಲ ಎಂದು ಯಾದವ್ ಶುಕ್ರವಾರ ಹೇಳಿದ್ದಾರೆ. ದೇಶಕ್ಕೆ 2024 ರಲ್ಲಿ ದೊಡ್ಡ ಸವಾಲಿದೆ. ಬಿಜೆಪಿ ಒಂದು ದೊಡ್ಡ ಪಕ್ಷವಾಗಿದೆ. ಅದು ಅತ್ಯಂತ ಸಂಘಟಿತವಾಗಿ ಸಜ್ಜಾಗಿದೆ. ಆದ್ದರಿಂದ ಅದನ್ನು ಎದುರಿಸಲು ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಗೊಂದಲ ಉಂಟಾಗಬಾರದು. ನೀವು ಗೊಂದಲದಿಂದ ಬಿಜೆಪಿಯನ್ನು ಎದುರಿಸಿದರೆ, ನೀವು ಯಶಸ್ವಿಯಾಗುವುದಿಲ್ಲ ಎಂದು ಅಖಿಲೇಶ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು