AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ನನಗೆ ಆಹ್ವಾನ ಬಂದಿಲ್ಲ: ಅಖಿಲೇಶ್ ಯಾದವ್

ಯುಪಿ ಪ್ರವೇಶಿಸಿದಾಗ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್ ಯಾದವ್, "ಸಮಸ್ಯೆ ಏನೆಂದರೆ ನಮಗೆ ಅನೇಕ ದೊಡ್ಡ ಕಾರ್ಯಕ್ರಮಗಳಿಗೆ ಆಹ್ವಾನ ಸಿಗುವುದಿಲ್ಲ. ಹೀಗಿರುವಾಗ ನಾವೇ ಆಹ್ವಾನ ಕೇಳುವುದು ಹೇಗೆ? ಎಂದಿದ್ದಾರೆ

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ನನಗೆ ಆಹ್ವಾನ ಬಂದಿಲ್ಲ: ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 03, 2024 | 6:45 PM

Share

ದೆಹಲಿ ಫೆಬ್ರುವರಿ 03: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರು ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಯ (Bharat Jodo Nyay Yatra) ಬಾಗಿಲು ನನಗೆ ಇನ್ನೂ ತೆರೆದಿಲ್ಲ ಎಂದು ಸೂಚಿಸಿದ್ದಾರೆ. ಇನ್ನೆರಡು ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ(Lok sabha Election) ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸುತ್ತಿರುವಾಗಲೇ ಅವರ ಈ ಹೇಳಿಕೆ ಬಂದಿವೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಎರಡೂ ಹೊಸದಾಗಿ ರೂಪುಗೊಂಡ ವಿರೋಧ ಪಕ್ಷ ಮೈತ್ರಿಕೂಟ ಇಂಡಿಯಾದ ಭಾಗವಾಗಿದೆ.

ಆದಾಗ್ಯೂ, ಪಶ್ಚಿಮ ಬಂಗಾಳವನ್ನು ಪ್ರವೇಶಿಸಿ, ನಂತರ ಬಿಹಾರಕ್ಕೆ ಹೋಗಿ, ನಂತರ ಬಂಗಾಳಕ್ಕೆ ಹಿಂತಿರುಗಿದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಯಾತ್ರೆಗೆ ಇನ್ನೂ ಯಾವುದೇ ಆಹ್ವಾನವನ್ನು ಪಡೆದಿಲ್ಲ ಎಂದು ಯಾದವ್ ಹೇಳಿದರು. ಯುಪಿ ಪ್ರವೇಶಿಸಿದಾಗ ಯಾತ್ರೆಗೆ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್, “ಸಮಸ್ಯೆ ಏನೆಂದರೆ ನಮಗೆ ಅನೇಕ ದೊಡ್ಡ ಕಾರ್ಯಕ್ರಮಗಳಿಗೆ ಆಹ್ವಾನ ಸಿಗುವುದಿಲ್ಲ. ಹೀಗಿರುವಾಗ ನಾವೇ ಆಹ್ವಾನ ಕೇಳುವುದು ಹೇಗೆ? ಎಂದಿದ್ದಾರೆ.

ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಮಾಜವಾದಿ ಪಕ್ಷದ ಉನ್ನತ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಸೂಚಿಸಿದಾಗ, “ನಾವು ಅದನ್ನು (ಆಹ್ವಾನ) ಕೇಳಿದ್ದೇವೆ . ನಮ್ಮ ಮನೆಯನ್ನು ಗಂಗಾಜಲದಿಂದ (ನೀರಿನಿಂದ) ಸ್ವಚ್ಛಗೊಳಿಸಲಾಗಿದೆ ಎಂದು ನಾವು ಅವರಿಗೆ ತಿಳಿಸಿದ ನಂತರ, ನಾವು ಅವರು ನಮ್ಮನ್ನು ಆಹ್ವಾನಿಸಲು ನಿರ್ಧರಿಸಿದ್ದಾರೆ ಎಂದು ನಮಗೆ ಗೊತ್ತಾಯಿತು ಎಂದಿದ್ದಾರೆ.

ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 25 ರಂದು ಬೆಳಿಗ್ಗೆ ಬಂಗಾಳಕ್ಕೆ ಪ್ರವೇಶಿಸಿದ್ದು, ಅದು ನೆರೆಯ ಬಿಹಾರವನ್ನು ಪ್ರವೇಶಿಸುವ ಮೊದಲು ಉತ್ತರದ ಜಿಲ್ಲೆಗಳ ಮೂಲಕ ತ್ವರಿತವಾಗಿ ಹಾದುಹೋಗಲು ಹೊಸ ಮಾರ್ಗವನ್ನು ಅನುಸರಿಸಿತು.

ಸಾಂಪ್ರದಾಯಿಕ ಕಾಂಗ್ರೆಸ್ ಭದ್ರಕೋಟೆಗಳಾದ ಮಾಲ್ಡಾ ಮತ್ತು ಮುರ್ಷಿದಾಬಾದ್‌ಗೆ ಭೇಟಿ ನೀಡಲು ಯಾತ್ರೆಯು ಈ ವಾರವಷ್ಟೇ ಬಂಗಾಳವನ್ನು ಮರುಪ್ರವೇಶಿಸಿತು.

ತನ್ನ ಪಕ್ಷ ತೃಣಮೂಲ ಕಾಂಗ್ರೆಸ್ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಸೀಟುಗಳನ್ನು ಹಂಚಿಕೊಳ್ಳುವುದಿಲ್ಲ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಗೆ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದರಿಂದ ಯೋಜನೆಗಳಲ್ಲಿ ಕೊನೆಯ ಕ್ಷಣದ ಬದಲಾವಣೆ ಕಂಡುಬಂದಿದೆ. ಬ್ಯಾನರ್ಜಿ ಅವರು ಇಂಡಿಯಾ ಬ್ಲಾಕ್‌ನ ತಮ್ಮ ಪಕ್ಷದ ಸದಸ್ಯತ್ವವನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಅವರು ಇಂದು 16 ಸ್ಥಾನಗಳನ್ನು ಘೋಷಿಸಿದ್ದಾರೆ ಎಂದು ಹೇಳಿದ್ದಾರೆ. “ನಾವು ಒಂದೆರಡು ದಿನಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಘೋಷಿಸುತ್ತೇವೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷವು ಅಂತಿಮ ಒಪ್ಪಂದಕ್ಕೆ ಬಂದಿವೆ” ಎಂದು  ಯಾದವ್ ಹೇಳಿದರು. ಆದಾಗ್ಯೂ, ಈ ಕೆಲವು ಸ್ಥಾನಗಳು ಕಾಂಗ್ರೆಸ್ ಸ್ಪರ್ಧಿಸಲು ಬಯಸುವ ಕ್ಷೇತ್ರಗಳನ್ನು ಹೊಂದಿವೆ.

ಇದನ್ನೂ ಓದಿ: ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯಲ್ಲಿ ಯಾವುದೇ ಲಾಜಿಕ್ ಇಲ್ಲ: ಪ್ರಶಾಂತ್ ಕಿಶೋರ್ 

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ನಿರ್ಧರಿಸುವಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದು ಸಮಾಜವಾದಿ ಪಕ್ಷದ ನಾಯಕ ಮತ್ತು ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಹೇಳಿದ್ದಾರೆ. ಇದೊಂದು ಮಹತ್ವದ ಚುನಾವಣೆ, ಸಂವಿಧಾನ ಉಳಿಸುವ ಚುನಾವಣೆ ಇದಾಗಿದ್ದು, ಇನ್ನು ವಿಳಂಬ ಮಾಡಬಾರದು ಎಂದಿದ್ದಾರೆ ಅವರು.

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಜನವರಿಯಲ್ಲಿ ಘೋಷಿಸಿದ್ದರೂ ಚುನಾವಣೋತ್ತರ ಮೈತ್ರಿಯನ್ನು ತಳ್ಳಿಹಾಕಲಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:45 pm, Sat, 3 February 24

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್