AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲೇಶ್​ ಯಾದವ್​ ಪತ್ನಿ, ಪುತ್ರಿಗೆ ಕೊವಿಡ್ 19 ಸೋಂಕು; ಕರೆ ಮಾಡಿ ಆರೋಗ್ಯ ವಿಚಾರಿಸಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​

ಕಳೆದ ತಿಂಗಳು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಅಖಿಲೇಶ್ ಯಾದವ್​, ನಾನು ಕೊವಿಡ್​ 19 ಲಸಿಕೆ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ಮೋದಿಯವರ ಫೋಟೊ ತೆಗೆದರೆ ಮಾತ್ರ ನಾನು ಲಸಿಕೆ ಹಾಕಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು.

ಅಖಿಲೇಶ್​ ಯಾದವ್​ ಪತ್ನಿ, ಪುತ್ರಿಗೆ ಕೊವಿಡ್ 19 ಸೋಂಕು; ಕರೆ ಮಾಡಿ ಆರೋಗ್ಯ ವಿಚಾರಿಸಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​
ಅಖಿಲೇಶ್​ ಯಾದವ್ ಮತ್ತು ಡಿಂಪಲ್ ಯಾದವ್​
TV9 Web
| Edited By: |

Updated on: Dec 23, 2021 | 1:20 PM

Share

ಲಖನೌ: ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್ (Akhilesh Yadav)​ ಪತ್ನಿ, ಸಂಸದೆ ಡಿಂಪಲ್​ ಯಾದವ್​ ಮತ್ತು ಪುತ್ರಿ  ಕೊವಿಡ್​ 19 ಸೋಂಕಿಗೆ ಒಳಗಾಗಿದ್ದಾರೆ. ಇವರಿಬ್ಬರಲ್ಲೂ ಕೊವಿಡ್​ 19 (Covid 19) ದೃಢಪಟ್ಟ ಬೆನ್ನಲ್ಲೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Uttar Pradesh CM Yogi Adityanath)​, ಅಖಿಲೇಶ್ ಯಾದವ್​ಗೆ ಕರೆ ಮಾಡಿ, ಅವರ ಪತ್ನಿ, ಪುತ್ರಿಯ ಆರೋಗ್ಯ ವಿಚಾರಿಸಿದ್ದಾರೆ. ಅಷ್ಟೇ ಅಲ್ಲ, ಇಬ್ಬರೂ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆಂದು ಮುಖ್ಯಮಂತ್ರಿ ಕಾರ್ಯಾಲಯ ನಿನ್ನೆ ತಿಳಿಸಿದೆ. ಅಖಿಲೇಶ್ ಯಾದವ್​ ಕೂಡ ಕೊವಿಡ್​ 19 ತಪಾಸಣೆಗೆ ಒಳಗಾಗಿದ್ದು, ಅವರ ವರದಿ ನೆಗೆಟಿವ್ ಬಂದಿದೆ.

ಇನ್ನು ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಡಿಂಪಲ್​ ಯಾದವ್​, ನನಗೆ ಕೊವಿಡ್​ 19 ಸೋಂಕು ದೃಢಪಟ್ಟ ಬೆನ್ನಲ್ಲೇ, ಸ್ವತಃ ಐಸೋಲೇಟ್​ಗೆ ಒಳಗಾಗಿದ್ದೇನೆ. ನಾನು ಈಗಾಗಲೇ ಎರಡೂ ಡೋಸ್ ಕೊರೊನಾ ಲಸಿಕೆ ತೆಗೆದುಕೊಂಡಿದ್ದು, ಸದ್ಯ ಯಾವುದೇ ಲಕ್ಷಣಗಳೂ ಇಲ್ಲ. ಹಾಗಿದ್ದಾಗ್ಯೂ ಕೂಡ ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಒಮ್ಮೆ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.  ಅಖಿಲೇಶ್ ಯಾದವ್​ ಕೊವಿಡ್​ 19 ಲಸಿಕೆ ಪಡೆದಿದ್ದಾರೋ ಇಲ್ಲವೋ ಎಂಬುದು ಗೊತ್ತಾಗಿಲ್ಲ. ಸದ್ಯ ಅವರು ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಕಳೆದ ತಿಂಗಳು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಅವರು, ನಾನು ಕೊವಿಡ್​ 19 ಲಸಿಕೆ ಸರ್ಟಿಫಿಕೇಟ್​ನಲ್ಲಿ ಪ್ರಧಾನಿ ಮೋದಿಯವರ ಫೋಟೊ ತೆಗೆದರೆ ಮಾತ್ರ ನಾನು ಲಸಿಕೆ ಹಾಕಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ನನಗೆ ಒಂದು ಬಾರಿ ಕೊರೊನಾ ಬಂದು ಹೋಗಿದೆ. ಒಬ್ಬರಿಗೆ ಎರಡು ಸಲ ಕೊರೊನಾ ವೈರಸ್​ ತಗುಲುವುದಿಲ್ಲ ಎಂದು ಈಗಾಗಲೇ ಅಧ್ಯಯನಕಾರರು ಹೇಳಿದ್ದಾರೆ. ಹಾಗಾಗಿ ನಾನ್ಯಾಕೆ ಲಸಿಕೆ ಪಡೆಯಲಿ ಎಂದೂ ಪ್ರಶ್ನಿಸಿದ್ದರು. ಸರ್ಕಾರ ಸರ್ಟಿಫಿಕೇಟ್​ ಮೇಲೆ ಪ್ರಧಾನಿ ಮೋದಿಯವರ ಫೋಟೋ ತೆಗೆದು, ಆ ಜಾಗದಲ್ಲಿ ರಾಷ್ಟ್ರಧ್ವಜದ ಚಿತ್ರ ಹಾಕಿದರೆ ನಾನು ಲಸಿಕೆ ತೆಗೆದುಕೊಳ್ಳುತ್ತೇನೆ ಎಂದಿದ್ದರು. ನಂತರ ಅವರ ತಂದೆ ಮುಲಾಯಂ ಸಿಂಗ್​ ಯಾದವ್​ ಲಸಿಕೆ ಪಡೆಯುವುದಾಗಿ ಹೇಳಿದ ಬೆನ್ನಲ್ಲೇ ತಾವೂ ಕೊರೊನಾ ಲಸಿಕೆ ಪಡೆಯುತ್ತೇನೆ ಎಂದಿದ್ದರು.   2021ರ ಮಾರ್ಚ್​ನಲ್ಲಿಯೇ ಅಖಿಲೇಶ್ ಯಾದವ್ ಕೊರೊನಾ ಸೋಂಕಿಗೆ ಒಳಗಾಗಿದ್ದರು. ತಮಗೆ ಕೊರೊನಾ ವೈರಸ್ ತಗುಲಿದ್ದನ್ನು ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದರು. ಅವರೂ ಕೂಡ ಮನೆಯಲ್ಲೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆದಿದ್ದರು.

ಇದನ್ನೂ ಓದಿ: ಲಸಿಕೆ ಪಡೆದ ಬಳಿಕ ಕೊರೊನಾ ಸೋಂಕಿಗೆ ಒಳಗಾದ ಟೆಕ್ಕಿ ಸಾವನ್ನೆ ಗೆದ್ದು ಬಂದಿದ್ದು ಹೇಗೆ?

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು