AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಾ ಈ ನಾಯಿಗಳು ಬೊಗಳುತ್ತವೆ ಸುಮ್ನೆ ಕಿರಿ ಕಿರಿ ಎಂದು 25 ನಾಯಿಗಳಿಗೆ ವಿಷ ಹಾಕಿ ಕೊಂದ ವ್ಯಕ್ತಿ

ಎಲ್ಲರಿಗೂ ಹೇಗೆ ಅವರವರ ಕೆಲಸವಿರುತ್ತದೆಯೋ ಹಾಗೆಯೇ ಬೊಗುಳುವುದು ನಾಯಿ ಕಾಯಕ, ಹಾಗೆಂದ ಮಾತ್ರಕ್ಕೆ ನಾಯಿಗಳನ್ನು ಕೊಲ್ಲಬೇಕೇ? ಹೀಗೊಂದು ಚರ್ಚೆ ಹುಟ್ಟಿಕೊಂಡಿದೆ. ಮಹಾರಾಷ್ಟ್ರದ ಅಕೋಲಾದಲ್ಲಿ ದಿನಾ ನಾಯಿಗಳು ಬೊಗುಳುತ್ತವೆ ಕಿರಿ ಕಿರಿ ಎಂದು ವ್ಯಕ್ತಿಯೊಬ್ಬ 25 ನಾಯಿಗಳಿಗೆ ವಿಷ ಹಾಕಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ವಿಷಪೂರಿತ ಆಹಾರವನ್ನು ಸೇವಿಸಿದ 24 ಗಂಟೆಗಳಲ್ಲಿ 25 ಕ್ಕೂ ಹೆಚ್ಚು ನಾಯಿಗಳು ಸಾವನ್ನಪ್ಪಿವೆ, ಆದರೆ ಕೆಲವು ಇನ್ನೂ ಗಂಭೀರ ಸ್ಥಿತಿಯಲ್ಲಿವೆ.

ದಿನಾ ಈ ನಾಯಿಗಳು ಬೊಗಳುತ್ತವೆ ಸುಮ್ನೆ ಕಿರಿ ಕಿರಿ ಎಂದು 25 ನಾಯಿಗಳಿಗೆ ವಿಷ ಹಾಕಿ ಕೊಂದ ವ್ಯಕ್ತಿ
ನಾಯಿಗಳು, ಸಾಂದರ್ಭಿಕ ಚಿತ್ರImage Credit source: Deccan Herald
Follow us
ನಯನಾ ರಾಜೀವ್
|

Updated on:Apr 04, 2025 | 2:39 PM

ಅಕೋಲಾ, ಏಪ್ರಿಲ್ 04: ಇದಕ್ಕಿಂತಾ ಕ್ರೂರತೆ ಬೇರೆ ಇದೆಯೇ, ನಾಯಿ(Dog) ಬೊಗಳುತ್ತವೆ ಕಿರಿ ಕಿರಿ ಎಂದು 25 ನಾಯಿಗಳಿಗೆ ವಿಷ ಹಾಕಿ ಕೊಂದಿರುವ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ. ಈ ಘಟನೆಯ ನಂತರ, ಪ್ರಾಣಿ ಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸತ್ತ ನಾಯಿಗಳಲ್ಲಿ ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳು ಸೇರಿವೆ.

25ಕ್ಕೂ ಹೆಚ್ಚು ನಾಯಿಗಳು ಸತ್ತಿವೆ

ಈ ಆಘಾತಕಾರಿ ಘಟನೆ ಅಕೋಲಾ ನಗರದ ಪಕ್ಕದಲ್ಲಿರುವ ಗುಡ್ಡಿ ಪ್ರದೇಶದಲ್ಲಿ ನಡೆದಿದೆ. ತಾವು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಬೀದಿ ನಾಯಿಗಳು ನಮ್ಮನ್ನು ನೋಡಿ ಬೊಗಳುತ್ತವೆ ಎನ್ನುವ ಈ ಕ್ಷುಲ್ಲಕ ಕಾರಣಕ್ಕಾಗಿ, ಅಪರಿಚಿತ ವ್ಯಕ್ತಿಯೊಬ್ಬ ಈ ಮೂಕ ಪ್ರಾಣಿಗಳಿಗೆ ವಿಷ ನೀಡಿ ಕೊಂದಿದ್ದಾನೆ. ವಿಷಪೂರಿತ ಆಹಾರವನ್ನು ಸೇವಿಸಿದ 24 ಗಂಟೆಗಳಲ್ಲಿ 25 ಕ್ಕೂ ಹೆಚ್ಚು ನಾಯಿಗಳು ಸಾವನ್ನಪ್ಪಿವೆ, ಹಾಗೆಯೇ ಕೆಲವು ಇನ್ನೂ ಗಂಭೀರ ಸ್ಥಿತಿಯಲ್ಲಿವೆ.

ಇದನ್ನೂ ಓದಿ
Image
ಹನುಮಾನ್ ಚಾಲೀಸಾಕ್ಕೆ ಪರವಶವಾದ ಶ್ವಾನ ರೈಗ್ನರ್
Image
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Image
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
Image
49 ಕೋಟಿ ಕೊಟ್ಟು ವಿಶ್ವದ ದುಬಾರಿ ನಾಯಿ ಖರೀದಿಸಿದ ಬೆಂಗಳೂರಿನ ಶ್ವಾನ ಪ್ರೇಮಿ

ಸಿಸಿಟಿವಿಯಲ್ಲಿ ಬಯಲಾದ ಕೃತ್ಯ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪ್ರದೇಶದ ನಿವಾಸಿಗಳು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಯ ನಂತರ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದರು. ಘಟನೆಯ ತನಿಖೆಗಾಗಿ ಸ್ಥಳೀಯರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಪೊಲೀಸರು ಪ್ರಸ್ತುತ ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ನಾಯಿಯನ್ನು ಮುದ್ದಾಡಲು ಹೋದ ವಾಚ್‌ಮ್ಯಾನ್‌ ಮೇಲೆ ಏಕಾಏಕಿ ದಾಳಿ ನಡೆಸಿದ ಮತ್ತೊಂದು ಶ್ವಾನ

ಉಮ್ರಿ ವಾರ್ಡ್ ನಿವಾಸಿ ಸಂದೀಪ್ ಗವಾಂಡೆ ಈ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ, ಈ ಕುರಿತು ಟಿವಿ9 ಮರಾಠಿಯೊಂದಿಗೆ ಮಾತನಾಡಿರುವ ಅವರು, ಇದು ಅತ್ಯಂತ ಖಂಡನೀಯ ಘಟನೆ. ಈ ರೀತಿ ಮುಗ್ಧ ಪ್ರಾಣಿಗಳನ್ನು ಕೊಲ್ಲುವುದು ಕ್ರೌರ್ಯದ ಸಂಕೇತ. ಆಡಳಿತವು ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಈ ಘಟನೆಯು ಅಕೋಲಾ ನಗರದಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಕೊಲೆಗಾರನ ಬಗ್ಗೆ ನಾಗರಿಕರಲ್ಲಿ ತೀವ್ರ ಕೋಪವೂ ಇದೆ. ಈ ಪ್ರಕರಣದಲ್ಲಿ ಪೊಲೀಸರು ಈಗ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದರ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:34 pm, Fri, 4 April 25

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ