AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ ಬದ್ರ್​ ಉಗ್ರ ನೆಲೆ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಗಳು; ನಾಲ್ವರು ಭಯೋತ್ಪಾದಕರು ಅರೆಸ್ಟ್, ಶಸ್ತ್ರಾಸ್ತ್ರ ವಶ

ಬಂಧಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದಾಗ, ಸದ್ಯ ತಾವು ಪಾಕಿಸ್ತಾನದ ಯೂಸುಫ್​ ಬಾಲೌಸಿ ಮತ್ತು ಖುರ್ಶೀದ್​ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ.

ಅಲ್ ಬದ್ರ್​ ಉಗ್ರ ನೆಲೆ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಗಳು; ನಾಲ್ವರು ಭಯೋತ್ಪಾದಕರು ಅರೆಸ್ಟ್, ಶಸ್ತ್ರಾಸ್ತ್ರ ವಶ
ಇಂದು ಉಗ್ರರಿಂದ ವಶ ಪಡಿಸಿಕೊಳ್ಳಲಾದ ವಸ್ತುಗಳು
TV9 Web
| Edited By: |

Updated on: Feb 12, 2022 | 6:52 PM

Share

ಸೋಪೋರ್​: ನಿಷೇಧಿತ ಉಗ್ರ ಸಂಘಟನೆ ಅಲ್​ ಬದ್ರ್​​ ನೆಲೆಯ (Al-Badr Outfit) ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಈ ಸಂಘಟನೆಯ ನಾಲ್ವರು ಭಯೋತ್ಪಾದಕರು (Terrorists) ಮತ್ತು ಅವರ ಮೂವರು ಸಹಾಯಕರನ್ನು ಬಂಧಿಸಿವೆ. ಈ ಬಗ್ಗೆ ಸೋಪೋರ್​ ಪೊಲೀಸರು ಮಾಹಿತಿ ನೀಡಿದ್ದಾರೆ.  ಸೋಪೋರ್​​ನ(Sopore) ವಿವಿಧ ಪ್ರದೇಶಗಳಲ್ಲಿರುವ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಈ ಅಲ್​ ಬದ್ರ್​​ ಉಗ್ರರು ಯೋಜನೆ ರೂಪಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು. ನಾಲ್ವರು ಉಗ್ರರು ಮತ್ತು ಅವರ ಮೂವರು ಸಹಾಯಕರನ್ನು ಬಂಧಿಸಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ಯುದ್ಧದಲ್ಲಿ ಬಳಸಬಹುದಾದ ಶಸ್ತ್ರಾಸ್ತ್ರಗಳೂ ಈ ಉಗ್ರರ ಘಟಕದಲ್ಲಿ ಸಿಕ್ಕಿವೆ. ಇವರೆಲ್ಲರೂ ಕೂಡ ಪಾಕಿಸ್ತಾನ ಮೂಲದ ಉಗ್ರರ ಮಾರ್ಗದರ್ಶನದಂತೆ ಕೆಲಸ ಮಾಡುತ್ತಿದ್ದರು ಎಂಬುದು ಮೊದಲ ಹಂತದ ತನಿಖೆಯಲ್ಲೇ ಸ್ಪಷ್ಟವಾಗಿದೆ ಎಂದು ಉತ್ತರ ಕಾಶ್ಮೀರದ ಡಿಐಜಿ ಉದಯ್​ ಭಾಸ್ಕರ್​ ತಿಳಿಸಿದ್ದಾರೆ. ಬರೀ ಶಸ್ತ್ರಾಸ್ತ್ರಗಳಷ್ಟೇ ಅಲ್ಲ, ಅಪಾರ ಮೊತ್ತದ ನಗದು ಕೂಡ ಸಿಕ್ಕಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ.

ಬಂಧಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದಾಗ, ಸದ್ಯ ತಾವು ಪಾಕಿಸ್ತಾನದ ಯೂಸುಫ್​ ಬಾಲೌಸಿ ಮತ್ತು ಖುರ್ಶೀದ್​ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ. ಸೋಪೋರ್​ನಲ್ಲಿ ಭಯೋತ್ಪಾದನೆಯನ್ನು ಪುನಃ ಪ್ರಾರಂಭಿಸುವ ಕೆಲಸ ಮಾಡುತ್ತಿದ್ದೆವು. ಹೀಗಾಗಿ ಇಲ್ಲಿನ ಯುವಕರನ್ನು ಉಗ್ರ ಸಂಘಟನೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದೆವು. ಅಗತ್ಯ ಇರುವವರಿಗೆ ವಾಹನ, ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದೆವು ಎಂಬ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎಂದೂ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬೇಕಾದಷ್ಟು ಅಧಿಕಾರ ಅನುಭವಿಸಿದ್ದಾರೆ, ಇನ್ನೂ ಯಾಕೆ ಅದರ ಲಾಲಸೆಯೋ? ಸಚಿವ ವಿ ಸೋಮಣ್ಣ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್