AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ ಬದ್ರ್​ ಉಗ್ರ ನೆಲೆ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಗಳು; ನಾಲ್ವರು ಭಯೋತ್ಪಾದಕರು ಅರೆಸ್ಟ್, ಶಸ್ತ್ರಾಸ್ತ್ರ ವಶ

ಬಂಧಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದಾಗ, ಸದ್ಯ ತಾವು ಪಾಕಿಸ್ತಾನದ ಯೂಸುಫ್​ ಬಾಲೌಸಿ ಮತ್ತು ಖುರ್ಶೀದ್​ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ.

ಅಲ್ ಬದ್ರ್​ ಉಗ್ರ ನೆಲೆ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಗಳು; ನಾಲ್ವರು ಭಯೋತ್ಪಾದಕರು ಅರೆಸ್ಟ್, ಶಸ್ತ್ರಾಸ್ತ್ರ ವಶ
ಇಂದು ಉಗ್ರರಿಂದ ವಶ ಪಡಿಸಿಕೊಳ್ಳಲಾದ ವಸ್ತುಗಳು
TV9 Web
| Edited By: |

Updated on: Feb 12, 2022 | 6:52 PM

Share

ಸೋಪೋರ್​: ನಿಷೇಧಿತ ಉಗ್ರ ಸಂಘಟನೆ ಅಲ್​ ಬದ್ರ್​​ ನೆಲೆಯ (Al-Badr Outfit) ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಈ ಸಂಘಟನೆಯ ನಾಲ್ವರು ಭಯೋತ್ಪಾದಕರು (Terrorists) ಮತ್ತು ಅವರ ಮೂವರು ಸಹಾಯಕರನ್ನು ಬಂಧಿಸಿವೆ. ಈ ಬಗ್ಗೆ ಸೋಪೋರ್​ ಪೊಲೀಸರು ಮಾಹಿತಿ ನೀಡಿದ್ದಾರೆ.  ಸೋಪೋರ್​​ನ(Sopore) ವಿವಿಧ ಪ್ರದೇಶಗಳಲ್ಲಿರುವ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಈ ಅಲ್​ ಬದ್ರ್​​ ಉಗ್ರರು ಯೋಜನೆ ರೂಪಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು. ನಾಲ್ವರು ಉಗ್ರರು ಮತ್ತು ಅವರ ಮೂವರು ಸಹಾಯಕರನ್ನು ಬಂಧಿಸಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ಯುದ್ಧದಲ್ಲಿ ಬಳಸಬಹುದಾದ ಶಸ್ತ್ರಾಸ್ತ್ರಗಳೂ ಈ ಉಗ್ರರ ಘಟಕದಲ್ಲಿ ಸಿಕ್ಕಿವೆ. ಇವರೆಲ್ಲರೂ ಕೂಡ ಪಾಕಿಸ್ತಾನ ಮೂಲದ ಉಗ್ರರ ಮಾರ್ಗದರ್ಶನದಂತೆ ಕೆಲಸ ಮಾಡುತ್ತಿದ್ದರು ಎಂಬುದು ಮೊದಲ ಹಂತದ ತನಿಖೆಯಲ್ಲೇ ಸ್ಪಷ್ಟವಾಗಿದೆ ಎಂದು ಉತ್ತರ ಕಾಶ್ಮೀರದ ಡಿಐಜಿ ಉದಯ್​ ಭಾಸ್ಕರ್​ ತಿಳಿಸಿದ್ದಾರೆ. ಬರೀ ಶಸ್ತ್ರಾಸ್ತ್ರಗಳಷ್ಟೇ ಅಲ್ಲ, ಅಪಾರ ಮೊತ್ತದ ನಗದು ಕೂಡ ಸಿಕ್ಕಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ.

ಬಂಧಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದಾಗ, ಸದ್ಯ ತಾವು ಪಾಕಿಸ್ತಾನದ ಯೂಸುಫ್​ ಬಾಲೌಸಿ ಮತ್ತು ಖುರ್ಶೀದ್​ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ. ಸೋಪೋರ್​ನಲ್ಲಿ ಭಯೋತ್ಪಾದನೆಯನ್ನು ಪುನಃ ಪ್ರಾರಂಭಿಸುವ ಕೆಲಸ ಮಾಡುತ್ತಿದ್ದೆವು. ಹೀಗಾಗಿ ಇಲ್ಲಿನ ಯುವಕರನ್ನು ಉಗ್ರ ಸಂಘಟನೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದೆವು. ಅಗತ್ಯ ಇರುವವರಿಗೆ ವಾಹನ, ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದೆವು ಎಂಬ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎಂದೂ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬೇಕಾದಷ್ಟು ಅಧಿಕಾರ ಅನುಭವಿಸಿದ್ದಾರೆ, ಇನ್ನೂ ಯಾಕೆ ಅದರ ಲಾಲಸೆಯೋ? ಸಚಿವ ವಿ ಸೋಮಣ್ಣ

Follow Us
Web contact
Web contact

TV9 Kannada

Read More
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ