AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ ಬದ್ರ್​ ಉಗ್ರ ನೆಲೆ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಗಳು; ನಾಲ್ವರು ಭಯೋತ್ಪಾದಕರು ಅರೆಸ್ಟ್, ಶಸ್ತ್ರಾಸ್ತ್ರ ವಶ

ಬಂಧಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದಾಗ, ಸದ್ಯ ತಾವು ಪಾಕಿಸ್ತಾನದ ಯೂಸುಫ್​ ಬಾಲೌಸಿ ಮತ್ತು ಖುರ್ಶೀದ್​ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ.

ಅಲ್ ಬದ್ರ್​ ಉಗ್ರ ನೆಲೆ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಗಳು; ನಾಲ್ವರು ಭಯೋತ್ಪಾದಕರು ಅರೆಸ್ಟ್, ಶಸ್ತ್ರಾಸ್ತ್ರ ವಶ
ಇಂದು ಉಗ್ರರಿಂದ ವಶ ಪಡಿಸಿಕೊಳ್ಳಲಾದ ವಸ್ತುಗಳು
TV9 Web
| Edited By: |

Updated on: Feb 12, 2022 | 6:52 PM

Share

ಸೋಪೋರ್​: ನಿಷೇಧಿತ ಉಗ್ರ ಸಂಘಟನೆ ಅಲ್​ ಬದ್ರ್​​ ನೆಲೆಯ (Al-Badr Outfit) ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಈ ಸಂಘಟನೆಯ ನಾಲ್ವರು ಭಯೋತ್ಪಾದಕರು (Terrorists) ಮತ್ತು ಅವರ ಮೂವರು ಸಹಾಯಕರನ್ನು ಬಂಧಿಸಿವೆ. ಈ ಬಗ್ಗೆ ಸೋಪೋರ್​ ಪೊಲೀಸರು ಮಾಹಿತಿ ನೀಡಿದ್ದಾರೆ.  ಸೋಪೋರ್​​ನ(Sopore) ವಿವಿಧ ಪ್ರದೇಶಗಳಲ್ಲಿರುವ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಈ ಅಲ್​ ಬದ್ರ್​​ ಉಗ್ರರು ಯೋಜನೆ ರೂಪಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು. ನಾಲ್ವರು ಉಗ್ರರು ಮತ್ತು ಅವರ ಮೂವರು ಸಹಾಯಕರನ್ನು ಬಂಧಿಸಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ಯುದ್ಧದಲ್ಲಿ ಬಳಸಬಹುದಾದ ಶಸ್ತ್ರಾಸ್ತ್ರಗಳೂ ಈ ಉಗ್ರರ ಘಟಕದಲ್ಲಿ ಸಿಕ್ಕಿವೆ. ಇವರೆಲ್ಲರೂ ಕೂಡ ಪಾಕಿಸ್ತಾನ ಮೂಲದ ಉಗ್ರರ ಮಾರ್ಗದರ್ಶನದಂತೆ ಕೆಲಸ ಮಾಡುತ್ತಿದ್ದರು ಎಂಬುದು ಮೊದಲ ಹಂತದ ತನಿಖೆಯಲ್ಲೇ ಸ್ಪಷ್ಟವಾಗಿದೆ ಎಂದು ಉತ್ತರ ಕಾಶ್ಮೀರದ ಡಿಐಜಿ ಉದಯ್​ ಭಾಸ್ಕರ್​ ತಿಳಿಸಿದ್ದಾರೆ. ಬರೀ ಶಸ್ತ್ರಾಸ್ತ್ರಗಳಷ್ಟೇ ಅಲ್ಲ, ಅಪಾರ ಮೊತ್ತದ ನಗದು ಕೂಡ ಸಿಕ್ಕಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ.

ಬಂಧಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದಾಗ, ಸದ್ಯ ತಾವು ಪಾಕಿಸ್ತಾನದ ಯೂಸುಫ್​ ಬಾಲೌಸಿ ಮತ್ತು ಖುರ್ಶೀದ್​ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ. ಸೋಪೋರ್​ನಲ್ಲಿ ಭಯೋತ್ಪಾದನೆಯನ್ನು ಪುನಃ ಪ್ರಾರಂಭಿಸುವ ಕೆಲಸ ಮಾಡುತ್ತಿದ್ದೆವು. ಹೀಗಾಗಿ ಇಲ್ಲಿನ ಯುವಕರನ್ನು ಉಗ್ರ ಸಂಘಟನೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದೆವು. ಅಗತ್ಯ ಇರುವವರಿಗೆ ವಾಹನ, ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದೆವು ಎಂಬ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎಂದೂ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬೇಕಾದಷ್ಟು ಅಧಿಕಾರ ಅನುಭವಿಸಿದ್ದಾರೆ, ಇನ್ನೂ ಯಾಕೆ ಅದರ ಲಾಲಸೆಯೋ? ಸಚಿವ ವಿ ಸೋಮಣ್ಣ

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು