AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ ಬದ್ರ್​ ಉಗ್ರ ನೆಲೆ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಗಳು; ನಾಲ್ವರು ಭಯೋತ್ಪಾದಕರು ಅರೆಸ್ಟ್, ಶಸ್ತ್ರಾಸ್ತ್ರ ವಶ

ಬಂಧಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದಾಗ, ಸದ್ಯ ತಾವು ಪಾಕಿಸ್ತಾನದ ಯೂಸುಫ್​ ಬಾಲೌಸಿ ಮತ್ತು ಖುರ್ಶೀದ್​ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ.

ಅಲ್ ಬದ್ರ್​ ಉಗ್ರ ನೆಲೆ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಗಳು; ನಾಲ್ವರು ಭಯೋತ್ಪಾದಕರು ಅರೆಸ್ಟ್, ಶಸ್ತ್ರಾಸ್ತ್ರ ವಶ
ಇಂದು ಉಗ್ರರಿಂದ ವಶ ಪಡಿಸಿಕೊಳ್ಳಲಾದ ವಸ್ತುಗಳು
TV9 Web
| Edited By: |

Updated on: Feb 12, 2022 | 6:52 PM

Share

ಸೋಪೋರ್​: ನಿಷೇಧಿತ ಉಗ್ರ ಸಂಘಟನೆ ಅಲ್​ ಬದ್ರ್​​ ನೆಲೆಯ (Al-Badr Outfit) ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಈ ಸಂಘಟನೆಯ ನಾಲ್ವರು ಭಯೋತ್ಪಾದಕರು (Terrorists) ಮತ್ತು ಅವರ ಮೂವರು ಸಹಾಯಕರನ್ನು ಬಂಧಿಸಿವೆ. ಈ ಬಗ್ಗೆ ಸೋಪೋರ್​ ಪೊಲೀಸರು ಮಾಹಿತಿ ನೀಡಿದ್ದಾರೆ.  ಸೋಪೋರ್​​ನ(Sopore) ವಿವಿಧ ಪ್ರದೇಶಗಳಲ್ಲಿರುವ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಈ ಅಲ್​ ಬದ್ರ್​​ ಉಗ್ರರು ಯೋಜನೆ ರೂಪಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು. ನಾಲ್ವರು ಉಗ್ರರು ಮತ್ತು ಅವರ ಮೂವರು ಸಹಾಯಕರನ್ನು ಬಂಧಿಸಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ಯುದ್ಧದಲ್ಲಿ ಬಳಸಬಹುದಾದ ಶಸ್ತ್ರಾಸ್ತ್ರಗಳೂ ಈ ಉಗ್ರರ ಘಟಕದಲ್ಲಿ ಸಿಕ್ಕಿವೆ. ಇವರೆಲ್ಲರೂ ಕೂಡ ಪಾಕಿಸ್ತಾನ ಮೂಲದ ಉಗ್ರರ ಮಾರ್ಗದರ್ಶನದಂತೆ ಕೆಲಸ ಮಾಡುತ್ತಿದ್ದರು ಎಂಬುದು ಮೊದಲ ಹಂತದ ತನಿಖೆಯಲ್ಲೇ ಸ್ಪಷ್ಟವಾಗಿದೆ ಎಂದು ಉತ್ತರ ಕಾಶ್ಮೀರದ ಡಿಐಜಿ ಉದಯ್​ ಭಾಸ್ಕರ್​ ತಿಳಿಸಿದ್ದಾರೆ. ಬರೀ ಶಸ್ತ್ರಾಸ್ತ್ರಗಳಷ್ಟೇ ಅಲ್ಲ, ಅಪಾರ ಮೊತ್ತದ ನಗದು ಕೂಡ ಸಿಕ್ಕಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ.

ಬಂಧಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದಾಗ, ಸದ್ಯ ತಾವು ಪಾಕಿಸ್ತಾನದ ಯೂಸುಫ್​ ಬಾಲೌಸಿ ಮತ್ತು ಖುರ್ಶೀದ್​ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ. ಸೋಪೋರ್​ನಲ್ಲಿ ಭಯೋತ್ಪಾದನೆಯನ್ನು ಪುನಃ ಪ್ರಾರಂಭಿಸುವ ಕೆಲಸ ಮಾಡುತ್ತಿದ್ದೆವು. ಹೀಗಾಗಿ ಇಲ್ಲಿನ ಯುವಕರನ್ನು ಉಗ್ರ ಸಂಘಟನೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದೆವು. ಅಗತ್ಯ ಇರುವವರಿಗೆ ವಾಹನ, ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದೆವು ಎಂಬ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎಂದೂ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಬೇಕಾದಷ್ಟು ಅಧಿಕಾರ ಅನುಭವಿಸಿದ್ದಾರೆ, ಇನ್ನೂ ಯಾಕೆ ಅದರ ಲಾಲಸೆಯೋ? ಸಚಿವ ವಿ ಸೋಮಣ್ಣ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ