Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಸ್ಥಾನದಿಂದ ಆಲಾಪನ್ ಬಂದೋಪಧ್ಯಾಯ್ ನಿವೃತ್ತಿ; ಮಮತಾ ಬ್ಯಾನರ್ಜಿಯ ಮುಖ್ಯ ಸಲಹೆಗಾರರಾಗಿ ನೇಮಕ

Alapan Bandyopadhyay: ಆಲಾಪನ್ ಬಂದೋಪಧ್ಯಾಯರನ್ನು ನಬಣ್ಣಾದಿಂದ ಹೊರಹೋಗಲು ನಾನು ಅನುಮತಿಸುವುದಿಲ್ಲ. ಈಗ ಅವರು ಮುಖ್ಯಮಂತ್ರಿಯವರ ಮುಖ್ಯ ಸಲಹೆಗಾರರಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದರು.

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಸ್ಥಾನದಿಂದ ಆಲಾಪನ್ ಬಂದೋಪಧ್ಯಾಯ್ ನಿವೃತ್ತಿ; ಮಮತಾ ಬ್ಯಾನರ್ಜಿಯ ಮುಖ್ಯ ಸಲಹೆಗಾರರಾಗಿ ನೇಮಕ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on: May 31, 2021 | 7:58 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಧ್ಯಾಯ್ ಅವರು ಮೇ 31 ರಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರು ದೆಹಲಿಗೆ ಹೋಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಆಲಾಪನ್ ಬಂದೋಪಧ್ಯಾಯರನ್ನು ನಬಣ್ಣಾದಿಂದ ಹೊರಹೋಗಲು ನಾನು ಅನುಮತಿಸುವುದಿಲ್ಲ. ಈಗ ಅವರು ಮುಖ್ಯಮಂತ್ರಿಯವರ ಮುಖ್ಯ ಸಲಹೆಗಾರರಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದರು.

ನಮ್ಮ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಧ್ಯಾಯ್ ಅವರು ಇಂದು ನಿವೃತ್ತರಾದರು. ಮುಂದಿನ ಮೂರು ವರ್ಷಗಳ ಕಾಲ ಅವರು ಮುಖ್ಯಮಂತ್ರಿಯವರ ಮುಖ್ಯ ಸಲಹೆಗಾರರಾಗಿ ಮುಂದುವರಿಯುತ್ತಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದರು. ಮಂಗಳವಾರ ಅವರನ್ನು ನಾರ್ತ್ ಬ್ಲಾಕ್‌ಗೆ ಬರುವಂತೆ ಕೇಂದ್ರವು ಹೇಳಿತ್ತು. ಆದರೆ ರಾಜ್ಯ ಆಡಳಿತದ ಅನುಮತಿಯಿಲ್ಲದೆ ಅಧಿಕಾರಿಯೊಬ್ಬರು ಸೇರಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಬ್ಯಾನರ್ಜಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಏತನ್ಮಧ್ಯೆ, ಸರ್ಕಾರಿ ಮೂಲಗಳ ಪ್ರಕಾರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ (ಡಿಒಪಿಟಿ) ವರದಿ ಸಲ್ಲಿಸಲು ವಿಫಲವಾದ ಕಾರಣ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಆಲಾಪನ್ ಅವರಿಗೆ ಶೋ-ಕಾಸ್ ನೋಟಿಸ್ ನೀಡಲಾಗುತ್ತಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಕೇಂದ್ರದ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು. ರಾಜ್ಯ ಸರ್ಕಾರವು ಆಲಾಪನ್ ಅವರನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಮತ್ತು ಈ ನಿರ್ಣಾಯಕ ಸಮಯದಲ್ಲಿ ತನ್ನ ಉನ್ನತ ಅಧಿಕಾರಿಗಳನ್ನು ಬಿಟ್ಟುಕೊಡುವುದಿಲ್ಲ ಎಂದು ಪ್ರತಿಪಾದಿಸಿದರು.

2021 ರ ಮೇ 28 ರಂದು ಭಾರತ ಸರ್ಕಾರವು ನಮಗೆ ಕಳುಹಿಸಿದ ಏಕಪಕ್ಷೀಯ ಆದೇಶದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ಬೆರಗಾಗಿದ್ದೇನೆ . ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಐಎಎಸ್ ಆಲಾಪನ್ ಬಂದೋಪಾಧ್ಯಾಯ್ ಅವರನ್ನು ಬಿಟ್ಟುಕೊಡುವಂತೆ ಸರ್ಕಾರ ಹೇಳಿದ್ದು 2021 ರ ಮೇ 31 ರಂದು ಅವರು ಕೇಂದ್ರದ ಕೆಲಸಕ್ಕೆ ಹಾಜರಾಗಬೇಕಿದೆ . ಪಶ್ಚಿಮ ಬಂಗಾಳ ಸರ್ಕಾರದೊಂದಿಗೆ ಯಾವುದೇ ಪೂರ್ವ ಸಮಾಲೋಚನೆ ಇಲ್ಲದೆ  ಏಕಪಕ್ಷೀಯ ‘ಆದೇಶ’ , ಅಧಿಕಾರಿಯ ಯಾವುದೇ ಇಚ್ಛೆ/ ಆಯ್ಕೆಯಿಲ್ಲದೆ, ಭಾರತೀಯ ಆಡಳಿತ ಸೇವೆ (ಕೇಡರ್) ನಿಯಮಗಳು, 1954, ಮತ್ತು ಇತರ ಅನ್ವಯವಾಗುವ ಯಾವುದೇ ಪೂರ್ವ ಷರತ್ತುಗಳನ್ನು ಪೂರೈಸದೆ ಬರುತ್ತದೆ. ಏಕಪಕ್ಷೀಯ ಆದೇಶ / ನಿರ್ದೇಶನವು ಕಾನೂನುಬದ್ಧವಾಗಿ ಸ್ವೀಕಾರಾರ್ಹವಲ್ಲ. ಇದು ಸಂಪೂರ್ಣವಾಗಿ ಅಸಂವಿಧಾನಿಕವಾಗಿದೆಎಂದು ಬ್ಯಾನರ್ಜಿ ಪತ್ರದಲ್ಲಿ ಬರೆದಿದ್ದಾರೆ.

“ಆದ್ದರಿಂದ ನಿಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳಲು, ವಾಪಸ್ ಪಡೆಯಲು, ಮರುಪರಿಶೀಲಿಸಲು ಮತ್ತು  ಸಾರ್ವಜನಿಕ ಹಿತದೃಷ್ಟಿಯಿಂದ ಇತ್ತೀಚಿನ ಆದೇಶವನ್ನು ರದ್ದುಗೊಳಿಸಲು ನಾನು ವಿನಮ್ರವಾಗಿ ವಿನಂತಿಸುತ್ತೇನೆ. ಅನ್ವಯವಾಗುವ ಕಾನೂನುಗಳಿಗೆ ಅನುಸಾರವಾಗಿ ಕಾನೂನುಬದ್ಧ ಸಮಾಲೋಚನೆಯ ನಂತರ ಹೊರಡಿಸಲಾದ ವಿಸ್ತರಣೆಯ ಹಿಂದಿನ ಆದೇಶವು ಕಾರ್ಯಕಾರಿ ಮತ್ತು ಮಾನ್ಯವಾಗಿ ಉಳಿದಿದೆ ಎಂಬ ನಮ್ಮ ತಿಳುವಳಿಕೆಯ ಆಧಾರದ ಮೇಲೆ ಪಶ್ಚಿಮ ಬಂಗಾಳ ಸರ್ಕಾರವು ಈ ನಿರ್ಣಾಯಕ ಗಳಿಗೆಯಲ್ಲಿ ಅದರ ಮುಖ್ಯ ಕಾರ್ಯದರ್ಶಿಯನ್ನು  ಬಿಟ್ಟುಕೊಡಲು ಸಾಧ್ಯವಿಲ್ಲ. ಇತ್ತೀಚಿನ ಆದೇಶವು ಅನ್ವಯವಾಗುವ ಕಾನೂನುಗಳ ಉಲ್ಲಂಘನೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ: ಇದು ಯಾವುದೇ ಸಂದರ್ಭದಲ್ಲಿ ಅನೂರ್ಜಿತವಾಗಿದೆ ಎಂದಿದ್ದಾರೆ ಮಮತಾ.

ಯಾಸ್ ಚಂಡಮಾರುತದಿಂದ ಹಾನಿಗೆ ಒಳಗಾಗಿದ್ದ ಪಶ್ಚಿಮ ಬಂಗಾಳದ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಡೆಸಿದ್ದರು. ಆನಂತರ ಮೋದಿ ಅವರು ನಡೆಸಿದ ಪರಿಶೀಲನಾ ಸಭೆಗೆ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಗೈರು ಹಾಜರಾಗಿದ್ದರು.ಈ ಬೆಳವಣಿಗೆಯ ಕೆಲವೇ ಗಂಟೆಗಳಲ್ಲಿ ರಾಜ್ಯದ ಮುಖ್ಯಕಾರ್ಯದರ್ಶಿಯನ್ನು ಕೇಂದ್ರ ಸರ್ಕಾರವು ಕೇಂದ್ರ ಸೇವೆಗೆ ಕರೆಸಿಕೊಂಡಿರುವ ಬಗ್ಗೆ ಆದೇಶ ಹೊರಡಿಸಿತ್ತು. ಕೇಂದ್ರ ಸರ್ಕಾರದ ಆದೇಶದ ಅನ್ವಯ, ಮೇ 31ರ ಸೋಮವಾರ ಆಲಾಪನ್ ಅವರು ವರು ಕೇಂದ್ರ ಸೇವೆಗೆ ಹೋಗಬೇಕಿದೆ. ಸೋಮವಾರ ಅವರು ನಿವೃತ್ತಿಯೂ ಆಗಲಿದ್ದಾರೆ. ಇತ್ತ ಆಲಾಪನ್ ಅವರ ಅವರ ಅಧಿಕಾರಾವಧಿಯನ್ನು ಆಗಸ್ಟ್ 31 ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸುವ ಪ್ರಸ್ತಾವನೆಯನ್ನು ಕೇಂದ್ರವು ಮೇ 24 ರಂದು ಅಂಗೀಕರಿಸಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಏಕಪಕ್ಷೀಯ ಆದೇಶ ನೋಡಿ ಆಘಾತವಾಗಿದೆ, ಮುಖ್ಯ ಕಾರ್ಯದರ್ಶಿಯನ್ನು ಬಿಟ್ಟುಕೊಡುವುದಿಲ್ಲ: ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ