AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಚಾಲಕನ ಸಮಯ ಪ್ರಜ್ಞೆ: ಗಜ ಪಡೆ ಬಚಾವು

ಕೊಲ್ಕತ್ತಾ: ಅರಣ್ಯ ಪ್ರದೇಶದಲ್ಲಿ ಹಾದುಹೋಗುವ ರೈಲ್ವೇ ಹಳಿಗಳನ್ನು ದಾಟಲು ಹೋಗಿ ಅದೆಷ್ಟೋ ವನ್ಯಜೀವಿಗಳು ರೈಲಿಗೆ ಸಿಲುಕಿ ಜೀವಬಿಡುವ ದಾರುಣ ಘಟನೆಗಳು ವರ್ಷಂಪ್ರತಿ ಮರುಕಳಿಸುತ್ತಲೇ ಇರುತ್ತವೆ. ಕಾಡಿನ ದೈತ್ಯ ಜೀವಿಯೆಂದೇ ಗುರುತಿಸಿಕೊಳ್ಳುವ ಆನೆಗಳು ಸಹ ಹಳಿ ದಾಟುವಾಗ ರೈಲಿಗೆ ಸಿಲುಕಿ ಜೀವಬಿಟ್ಟ ಹಲವು ಪ್ರಕರಣಗಳಿವೆ. ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳ ರಾಜ್ಯದ ಸಿವೋಕ್ – ಗುಲ್ಮಾ ಪ್ರದೇಶದಲ್ಲಿ ಇಂಥದ್ದೇ ಒಂದು ಪ್ರಕರಣ ದಾಖಲಾಗಬೇಕಿತ್ತು. ಮರಿಯಾನೆಯೊಂದಿಗೆ ಇನ್ನೆರೆಡು ದೊಡ್ಡ ಆನೆಗಳು ಹಳಿ ದಾಟುತ್ತಿರುವಾಗಲೇ ರೈಲು ಸ್ಥಳಕ್ಕಾಗಮಿಸಿದೆ. ಇನ್ನೇನು ರೈಲು ಆನೆಗಳಿಗೆ ಡಿಕ್ಕಿ […]

ರೈಲ್ವೆ ಚಾಲಕನ ಸಮಯ ಪ್ರಜ್ಞೆ: ಗಜ ಪಡೆ ಬಚಾವು
ಸಾಧು ಶ್ರೀನಾಥ್​
|

Updated on: Nov 13, 2020 | 5:26 PM

Share

ಕೊಲ್ಕತ್ತಾ: ಅರಣ್ಯ ಪ್ರದೇಶದಲ್ಲಿ ಹಾದುಹೋಗುವ ರೈಲ್ವೇ ಹಳಿಗಳನ್ನು ದಾಟಲು ಹೋಗಿ ಅದೆಷ್ಟೋ ವನ್ಯಜೀವಿಗಳು ರೈಲಿಗೆ ಸಿಲುಕಿ ಜೀವಬಿಡುವ ದಾರುಣ ಘಟನೆಗಳು ವರ್ಷಂಪ್ರತಿ ಮರುಕಳಿಸುತ್ತಲೇ ಇರುತ್ತವೆ. ಕಾಡಿನ ದೈತ್ಯ ಜೀವಿಯೆಂದೇ ಗುರುತಿಸಿಕೊಳ್ಳುವ ಆನೆಗಳು ಸಹ ಹಳಿ ದಾಟುವಾಗ ರೈಲಿಗೆ ಸಿಲುಕಿ ಜೀವಬಿಟ್ಟ ಹಲವು ಪ್ರಕರಣಗಳಿವೆ.

ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳ ರಾಜ್ಯದ ಸಿವೋಕ್ – ಗುಲ್ಮಾ ಪ್ರದೇಶದಲ್ಲಿ ಇಂಥದ್ದೇ ಒಂದು ಪ್ರಕರಣ ದಾಖಲಾಗಬೇಕಿತ್ತು. ಮರಿಯಾನೆಯೊಂದಿಗೆ ಇನ್ನೆರೆಡು ದೊಡ್ಡ ಆನೆಗಳು ಹಳಿ ದಾಟುತ್ತಿರುವಾಗಲೇ ರೈಲು ಸ್ಥಳಕ್ಕಾಗಮಿಸಿದೆ. ಇನ್ನೇನು ರೈಲು ಆನೆಗಳಿಗೆ ಡಿಕ್ಕಿ ಹೊಡೆಯಬೇಕು ಎನ್ನುವಷ್ಟರಲ್ಲಿ ಚಾಲಕ ತನ್ನ ಸಮಯ ಪ್ರಜ್ಞೆಯಿಂದ ರೈಲಿನ ವೇಗವನ್ನು ಹತೋಟಿಗೆ ತಂದು ಆನೆಗಳಿಂದ ಸ್ವಲ್ಪ ದೂರದಲ್ಲಿಯೇ ರೈಲನ್ನು ನಿಲ್ಲಿಸಿದ್ದಾನೆ!

ಜೊತೆಗೆ ಮರಿಯಾನೆ ಹಾಗೂ ದೊಡ್ಡ ಆನೆಗಳೆರೆಡೂ ಹಳಿ ದಾಟುವ ತನಕ ಕಾದು ನಂತರವೇ ಮುಂದೆ ಹೊರಟಿದ್ದಾನೆ. ಈ ಘಟನೆಯ ವಿಡಿಯೋ ಚಾಲಕನ ಮೊಬೈಲಿನಲ್ಲಿ ಸೆರೆಯಾಗಿದ್ದು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಚಾಲಕನ ಸಮಯ ಪ್ರಜ್ಞೆಗೆ ಭೇಷ್ ಅಂದಿದ್ದಾರೆ. ಈ ಹಿಂದೆ 2018ರಲ್ಲಿ ಕರ್ನಾಟಕದ ಸಕಲೇಶಪುರದ ಬಳಿಯ ಕಾಕನಮನೆ ಹಾಗೂ ಎಡಕುಮೇರಿ ಬಳಿ ಏಳು ತಿಂಗಳ ಅಂತರದಲ್ಲಿ ಮೂರು ಆನೆಗಳು ರೈಲ್ವೇ ಅಪಘಾತಕ್ಕೆ ಬಲಿಯಾಗಿದ್ನನ್ನು ಸ್ಮರಿಸಬಹುದು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ