AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಚಾಲಕನ ಸಮಯ ಪ್ರಜ್ಞೆ: ಗಜ ಪಡೆ ಬಚಾವು

ಕೊಲ್ಕತ್ತಾ: ಅರಣ್ಯ ಪ್ರದೇಶದಲ್ಲಿ ಹಾದುಹೋಗುವ ರೈಲ್ವೇ ಹಳಿಗಳನ್ನು ದಾಟಲು ಹೋಗಿ ಅದೆಷ್ಟೋ ವನ್ಯಜೀವಿಗಳು ರೈಲಿಗೆ ಸಿಲುಕಿ ಜೀವಬಿಡುವ ದಾರುಣ ಘಟನೆಗಳು ವರ್ಷಂಪ್ರತಿ ಮರುಕಳಿಸುತ್ತಲೇ ಇರುತ್ತವೆ. ಕಾಡಿನ ದೈತ್ಯ ಜೀವಿಯೆಂದೇ ಗುರುತಿಸಿಕೊಳ್ಳುವ ಆನೆಗಳು ಸಹ ಹಳಿ ದಾಟುವಾಗ ರೈಲಿಗೆ ಸಿಲುಕಿ ಜೀವಬಿಟ್ಟ ಹಲವು ಪ್ರಕರಣಗಳಿವೆ. ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳ ರಾಜ್ಯದ ಸಿವೋಕ್ – ಗುಲ್ಮಾ ಪ್ರದೇಶದಲ್ಲಿ ಇಂಥದ್ದೇ ಒಂದು ಪ್ರಕರಣ ದಾಖಲಾಗಬೇಕಿತ್ತು. ಮರಿಯಾನೆಯೊಂದಿಗೆ ಇನ್ನೆರೆಡು ದೊಡ್ಡ ಆನೆಗಳು ಹಳಿ ದಾಟುತ್ತಿರುವಾಗಲೇ ರೈಲು ಸ್ಥಳಕ್ಕಾಗಮಿಸಿದೆ. ಇನ್ನೇನು ರೈಲು ಆನೆಗಳಿಗೆ ಡಿಕ್ಕಿ […]

ರೈಲ್ವೆ ಚಾಲಕನ ಸಮಯ ಪ್ರಜ್ಞೆ: ಗಜ ಪಡೆ ಬಚಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 13, 2020 | 5:26 PM

Share

ಕೊಲ್ಕತ್ತಾ: ಅರಣ್ಯ ಪ್ರದೇಶದಲ್ಲಿ ಹಾದುಹೋಗುವ ರೈಲ್ವೇ ಹಳಿಗಳನ್ನು ದಾಟಲು ಹೋಗಿ ಅದೆಷ್ಟೋ ವನ್ಯಜೀವಿಗಳು ರೈಲಿಗೆ ಸಿಲುಕಿ ಜೀವಬಿಡುವ ದಾರುಣ ಘಟನೆಗಳು ವರ್ಷಂಪ್ರತಿ ಮರುಕಳಿಸುತ್ತಲೇ ಇರುತ್ತವೆ. ಕಾಡಿನ ದೈತ್ಯ ಜೀವಿಯೆಂದೇ ಗುರುತಿಸಿಕೊಳ್ಳುವ ಆನೆಗಳು ಸಹ ಹಳಿ ದಾಟುವಾಗ ರೈಲಿಗೆ ಸಿಲುಕಿ ಜೀವಬಿಟ್ಟ ಹಲವು ಪ್ರಕರಣಗಳಿವೆ.

ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳ ರಾಜ್ಯದ ಸಿವೋಕ್ – ಗುಲ್ಮಾ ಪ್ರದೇಶದಲ್ಲಿ ಇಂಥದ್ದೇ ಒಂದು ಪ್ರಕರಣ ದಾಖಲಾಗಬೇಕಿತ್ತು. ಮರಿಯಾನೆಯೊಂದಿಗೆ ಇನ್ನೆರೆಡು ದೊಡ್ಡ ಆನೆಗಳು ಹಳಿ ದಾಟುತ್ತಿರುವಾಗಲೇ ರೈಲು ಸ್ಥಳಕ್ಕಾಗಮಿಸಿದೆ. ಇನ್ನೇನು ರೈಲು ಆನೆಗಳಿಗೆ ಡಿಕ್ಕಿ ಹೊಡೆಯಬೇಕು ಎನ್ನುವಷ್ಟರಲ್ಲಿ ಚಾಲಕ ತನ್ನ ಸಮಯ ಪ್ರಜ್ಞೆಯಿಂದ ರೈಲಿನ ವೇಗವನ್ನು ಹತೋಟಿಗೆ ತಂದು ಆನೆಗಳಿಂದ ಸ್ವಲ್ಪ ದೂರದಲ್ಲಿಯೇ ರೈಲನ್ನು ನಿಲ್ಲಿಸಿದ್ದಾನೆ!

ಜೊತೆಗೆ ಮರಿಯಾನೆ ಹಾಗೂ ದೊಡ್ಡ ಆನೆಗಳೆರೆಡೂ ಹಳಿ ದಾಟುವ ತನಕ ಕಾದು ನಂತರವೇ ಮುಂದೆ ಹೊರಟಿದ್ದಾನೆ. ಈ ಘಟನೆಯ ವಿಡಿಯೋ ಚಾಲಕನ ಮೊಬೈಲಿನಲ್ಲಿ ಸೆರೆಯಾಗಿದ್ದು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಚಾಲಕನ ಸಮಯ ಪ್ರಜ್ಞೆಗೆ ಭೇಷ್ ಅಂದಿದ್ದಾರೆ. ಈ ಹಿಂದೆ 2018ರಲ್ಲಿ ಕರ್ನಾಟಕದ ಸಕಲೇಶಪುರದ ಬಳಿಯ ಕಾಕನಮನೆ ಹಾಗೂ ಎಡಕುಮೇರಿ ಬಳಿ ಏಳು ತಿಂಗಳ ಅಂತರದಲ್ಲಿ ಮೂರು ಆನೆಗಳು ರೈಲ್ವೇ ಅಪಘಾತಕ್ಕೆ ಬಲಿಯಾಗಿದ್ನನ್ನು ಸ್ಮರಿಸಬಹುದು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ