AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 400 ಕೆಜಿ ತೂಕದ ಬೀಗ ಉಡುಗೊರೆ ನೀಡಲಿದ್ದಾರೆ ಅಲಿಗಢದ ಪ್ರಸಿದ್ಧ ಕುಶಲಕರ್ಮಿ ದಂಪತಿ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಅಲಿಗಢದ ಕುಶಲಕರ್ಮಿಯೊಬ್ಬರು 10 ಅಡಿ ಎತ್ತರದ 400 ಕೆಜಿ ತೂಕದ ಬೀಗ ಉಡುಗೊರೆಯಾಗಿ ನೀಡಲಿದ್ದಾರೆ.

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 400 ಕೆಜಿ ತೂಕದ ಬೀಗ ಉಡುಗೊರೆ ನೀಡಲಿದ್ದಾರೆ ಅಲಿಗಢದ ಪ್ರಸಿದ್ಧ ಕುಶಲಕರ್ಮಿ ದಂಪತಿ
ಬೀಗ
ನಯನಾ ರಾಜೀವ್
|

Updated on: Aug 07, 2023 | 12:05 PM

Share

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಅಲಿಗಢದ ಕುಶಲಕರ್ಮಿಯೊಬ್ಬರು 10 ಅಡಿ ಎತ್ತರದ 400 ಕೆಜಿ ತೂಕದ ಬೀಗ ಉಡುಗೊರೆಯಾಗಿ ನೀಡಲಿದ್ದಾರೆ. ಅಯೋಧ್ಯೆಯ ರಾಮಮಂದಿರ 2024ರ ಜನವರಿಯಲ್ಲಿ ಭಕ್ತರ ದರ್ಶನಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ವಿಶ್ವದ ಅತಿದೊಡ್ಡ ಬೀಗವನ್ನು ತಯಾರಿಸಿಲು ಕುಶಲಕರ್ಮಿ ಸತ್ಯ ಪ್ರಕಾಶ್ ಶರ್ಮಾ ತಿಂಗಳುಗಳಕಾಲ ಕಷ್ಟಪಟ್ಟಿದ್ದಾರೆ.

ತಮ್ಮ ಕುಟುಂಬವು ಸಾಕಷ್ಟು ವರ್ಷಗಳಿಂದ ಕೈಗಳಿಂದಲೇ ಬೀಗ ತಯಾರಿಸುವಲ್ಲಿ ಪ್ರಸಿದ್ಧವಾಗಿದೆ, ಈಗ ರಾಮ ಮಂದಿರವನ್ನು ಗಮನದಲ್ಲಿಟ್ಟುಕೊಂಡು ಅವರು 10 ಅಡಿ ಎತ್ತರ ಹಾಗೂ 4.5 ಅಡಿ ಅಗಲ ಹಾಗೂ 9.5 ಇಂಚು ದಪ್ಪವಿರುವ ಬೀಗವನ್ನು ತಯಾರಿಸಿದ್ದು ಅದಕ್ಕೆ ನಾಲ್ಕು ಅಡಿಯಷ್ಟು ದೊಡ್ಡ ಕೀಲಿ ಕೈಯನ್ನು ಕೂಡ ನಿರ್ಮಿಸಲಾಗಿದೆ.

ಮತ್ತಷ್ಟು ಓದಿ: ಅಯೋಧ್ಯೆಯಲ್ಲಿ ವೇಗ ಪಡೆದುಕೊಂಡ ರಾಮಮಂದಿರದ ಕೆಲಸ; ಕಾರ್ಮಿಕರ ಸಂಖ್ಯೆ ಹೆಚ್ಚಿಸಿದ ಟ್ರಸ್ಟ್

ಲಕ್ಷಾಂತರ ಭಕ್ತರಿಂದ ಕಾಣಿಕೆಗಳನ್ನು ಸ್ವೀಕರಿಸುತ್ತಿದ್ದೇವೆ ಮತ್ತು ಈ ಬೀಗವನ್ನು ಎಲ್ಲಿ ಬಳಸಬೇಕು ಎಂಬುದನ್ನು ನಂತರ ನಿರ್ಧರಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ನಿಯೊಂದಿಗೆ ಸೇರಿ ಈ ಬೀಗವನ್ನು ತಯಾರಿಸಿದ್ದೇನೆ ಎಂದು ಸತ್ಯ ಪ್ರಕಾಶ್ ಶರ್ಮಾ ಹೇಳಿದ್ದಾರೆ. ಈವರೆಗೆ ಒಂದೂವರೆ ಲಕ್ಷ ರೂ ಹಾಗೂ ಈಗ ಮೂರು ಲಕ್ಷ ರೂ. ಖರ್ಚಾಗಿದೆ. ಇಬ್ಬರೂ ಸೇರಿ 6 ತಿಂಗಳಲ್ಲಿ ಬೀಗ ಸಿದ್ಧಪಡಿಸಿದ್ದಾರೆ.

ಬೀಗವನ್ನು ಕಬ್ಬಿಣದಿಂದ ತಯಾರಿಸಲಾಗಿದೆ, ಆದರೆ ಅದರಲ್ಲಿ ಹಿತ್ತಾಳೆ, ಉಕ್ಕಿನ ಕೆಲಸವನ್ನೂ ಮಾಡಲು ಬಯಸುತ್ತೇವೆ. ಈಗ ನಮ್ಮ ಬಳಿ ಸಾಕಷ್ಟು ಹಣವಿಲ್ಲ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?