AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಂಟಪದಲ್ಲೇ ಮದುಮಗನ ಬಂಧನ; ವರನ ತಮ್ಮನನ್ನು ವರಿಸಿದ ವಧು!

ವರನನ್ನು ಸ್ಥಳೀಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿಂದಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಆಗ ಆ ವಧುವಿನ ಮುಂದಿನ ಭವಿಷ್ಯ ಹಾಳಾಗಬಾರದು ಎಂದು ಆ ವರನ ತಮ್ಮ ಮುಂದೆ ಬಂದು, ತಾನೇ ಮದುವೆಯಾಗಲು ಸಿದ್ಧ ಎಂದಿದ್ದಾನೆ.

Viral News: ಮಂಟಪದಲ್ಲೇ ಮದುಮಗನ ಬಂಧನ; ವರನ ತಮ್ಮನನ್ನು ವರಿಸಿದ ವಧು!
ಮದುವೆImage Credit source: iStock
ಸುಷ್ಮಾ ಚಕ್ರೆ
|

Updated on: Sep 15, 2023 | 5:59 PM

Share

ಅಲಿಗಢ: ಮದುವೆ ಮಂಟಪದಲ್ಲಿ ಇನ್ನೇನು ಮದುವೆಗೆ ಮುಹೂರ್ತ ಸಮೀಪಿಸುತ್ತಿರುವಾಗಲೇ ಸಿನಿಮೀಯ ರೀತಿಯಲ್ಲಿ ಅಲ್ಲಿಗೆ ಬಂದ ಪೊಲೀಸರು ಕಳ್ಳತನದ ಆರೋಪದಲ್ಲಿ ವರನನ್ನು ಬಂಧಿಸಿದ್ದಾರೆ. ಇದರಿಂದ ಎರಡೂ ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಆದರೆ, ಕೊನೆಗೆ ಇದಕ್ಕೆ ಪರಿಹಾರ ಕಂಡುಕೊಂಡ ಕುಟುಂಬಸ್ಥರು ಆ ವರನ ತಮ್ಮನ ಜೊತೆಯಲ್ಲಿ ಅದೇ ಮಂಟಪದಲ್ಲಿ ವಧುವಿಗೆ ಮದುವೆ ಮಾಡಿಸಿದ್ದಾರೆ.

ಈ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿರುವ ಅಲಿಗಢದ ಒಂದು ಸಣ್ಣ ಪಟ್ಟಣದಲ್ಲಿ ನಡೆದಿದೆ. ಸಂತೋಷ ಮತ್ತು ಸಂಭ್ರಮದಿಂದ ತುಂಬಿರಬೇಕಿದ್ದ ಮದುವೆ ಮಂಟಪದಲ್ಲಿ ಆಶ್ಚರ್ಯ, ಗಾಬರಿ ತುಂಬಿತ್ತು. ವಿವಾಹ ಸಮಾರಂಭವು ಭರದಿಂದ ಸಾಗುತ್ತಿರುವಾಗ ಕಳ್ಳತನವೊಂದಕ್ಕೆ ಸಂಬಂಧಿಸಿದಂತೆ ವರನನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ವರನನ್ನು ಸ್ಥಳೀಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿಂದಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಆಗ ಆ ವಧುವಿನ ಮುಂದಿನ ಭವಿಷ್ಯ ಹಾಳಾಗಬಾರದು ಎಂದು ಆ ವರನ ತಮ್ಮ ಮುಂದೆ ಬಂದು, ತಾನೇ ಮದುವೆಯಾಗಲು ಸಿದ್ಧ ಎಂದಿದ್ದಾನೆ. ಆಗ ಹಿರಿಯರು ಈ ಮದುವೆಗೆ ಒಪ್ಪಿ, ಅದೇ ಮುಹೂರ್ತದಲ್ಲಿ ಮದುವೆ ಮಾಡಿಸಿದ್ದಾರೆ.

ಮದುವೆಯಾಗಬೇಕಿದ್ದ ವರ ಅಂಗಡಿಯೊಂದರಲ್ಲಿ ಮದ್ಯದ ಬಾಟಲಿಗಳು ಹಾಗೂ ಮೊಬೈಲ್​ಗಳನ್ನು ಕದ್ದ ಆರೋಪದಲ್ಲಿ ಸಿಕ್ಕಿಹಾಕಿಕೊಂಡಿದ್ದ. ಪೊಲೀಸರ ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು