AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಂಟಪದಲ್ಲೇ ಮದುಮಗನ ಬಂಧನ; ವರನ ತಮ್ಮನನ್ನು ವರಿಸಿದ ವಧು!

ವರನನ್ನು ಸ್ಥಳೀಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿಂದಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಆಗ ಆ ವಧುವಿನ ಮುಂದಿನ ಭವಿಷ್ಯ ಹಾಳಾಗಬಾರದು ಎಂದು ಆ ವರನ ತಮ್ಮ ಮುಂದೆ ಬಂದು, ತಾನೇ ಮದುವೆಯಾಗಲು ಸಿದ್ಧ ಎಂದಿದ್ದಾನೆ.

Viral News: ಮಂಟಪದಲ್ಲೇ ಮದುಮಗನ ಬಂಧನ; ವರನ ತಮ್ಮನನ್ನು ವರಿಸಿದ ವಧು!
ಮದುವೆImage Credit source: iStock
ಸುಷ್ಮಾ ಚಕ್ರೆ
|

Updated on: Sep 15, 2023 | 5:59 PM

Share

ಅಲಿಗಢ: ಮದುವೆ ಮಂಟಪದಲ್ಲಿ ಇನ್ನೇನು ಮದುವೆಗೆ ಮುಹೂರ್ತ ಸಮೀಪಿಸುತ್ತಿರುವಾಗಲೇ ಸಿನಿಮೀಯ ರೀತಿಯಲ್ಲಿ ಅಲ್ಲಿಗೆ ಬಂದ ಪೊಲೀಸರು ಕಳ್ಳತನದ ಆರೋಪದಲ್ಲಿ ವರನನ್ನು ಬಂಧಿಸಿದ್ದಾರೆ. ಇದರಿಂದ ಎರಡೂ ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಆದರೆ, ಕೊನೆಗೆ ಇದಕ್ಕೆ ಪರಿಹಾರ ಕಂಡುಕೊಂಡ ಕುಟುಂಬಸ್ಥರು ಆ ವರನ ತಮ್ಮನ ಜೊತೆಯಲ್ಲಿ ಅದೇ ಮಂಟಪದಲ್ಲಿ ವಧುವಿಗೆ ಮದುವೆ ಮಾಡಿಸಿದ್ದಾರೆ.

ಈ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿರುವ ಅಲಿಗಢದ ಒಂದು ಸಣ್ಣ ಪಟ್ಟಣದಲ್ಲಿ ನಡೆದಿದೆ. ಸಂತೋಷ ಮತ್ತು ಸಂಭ್ರಮದಿಂದ ತುಂಬಿರಬೇಕಿದ್ದ ಮದುವೆ ಮಂಟಪದಲ್ಲಿ ಆಶ್ಚರ್ಯ, ಗಾಬರಿ ತುಂಬಿತ್ತು. ವಿವಾಹ ಸಮಾರಂಭವು ಭರದಿಂದ ಸಾಗುತ್ತಿರುವಾಗ ಕಳ್ಳತನವೊಂದಕ್ಕೆ ಸಂಬಂಧಿಸಿದಂತೆ ವರನನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ವರನನ್ನು ಸ್ಥಳೀಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿಂದಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಆಗ ಆ ವಧುವಿನ ಮುಂದಿನ ಭವಿಷ್ಯ ಹಾಳಾಗಬಾರದು ಎಂದು ಆ ವರನ ತಮ್ಮ ಮುಂದೆ ಬಂದು, ತಾನೇ ಮದುವೆಯಾಗಲು ಸಿದ್ಧ ಎಂದಿದ್ದಾನೆ. ಆಗ ಹಿರಿಯರು ಈ ಮದುವೆಗೆ ಒಪ್ಪಿ, ಅದೇ ಮುಹೂರ್ತದಲ್ಲಿ ಮದುವೆ ಮಾಡಿಸಿದ್ದಾರೆ.

ಮದುವೆಯಾಗಬೇಕಿದ್ದ ವರ ಅಂಗಡಿಯೊಂದರಲ್ಲಿ ಮದ್ಯದ ಬಾಟಲಿಗಳು ಹಾಗೂ ಮೊಬೈಲ್​ಗಳನ್ನು ಕದ್ದ ಆರೋಪದಲ್ಲಿ ಸಿಕ್ಕಿಹಾಕಿಕೊಂಡಿದ್ದ. ಪೊಲೀಸರ ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?