AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಂಟಪದಲ್ಲೇ ಮದುಮಗನ ಬಂಧನ; ವರನ ತಮ್ಮನನ್ನು ವರಿಸಿದ ವಧು!

ವರನನ್ನು ಸ್ಥಳೀಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿಂದಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಆಗ ಆ ವಧುವಿನ ಮುಂದಿನ ಭವಿಷ್ಯ ಹಾಳಾಗಬಾರದು ಎಂದು ಆ ವರನ ತಮ್ಮ ಮುಂದೆ ಬಂದು, ತಾನೇ ಮದುವೆಯಾಗಲು ಸಿದ್ಧ ಎಂದಿದ್ದಾನೆ.

Viral News: ಮಂಟಪದಲ್ಲೇ ಮದುಮಗನ ಬಂಧನ; ವರನ ತಮ್ಮನನ್ನು ವರಿಸಿದ ವಧು!
ಮದುವೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Sep 15, 2023 | 5:59 PM

ಅಲಿಗಢ: ಮದುವೆ ಮಂಟಪದಲ್ಲಿ ಇನ್ನೇನು ಮದುವೆಗೆ ಮುಹೂರ್ತ ಸಮೀಪಿಸುತ್ತಿರುವಾಗಲೇ ಸಿನಿಮೀಯ ರೀತಿಯಲ್ಲಿ ಅಲ್ಲಿಗೆ ಬಂದ ಪೊಲೀಸರು ಕಳ್ಳತನದ ಆರೋಪದಲ್ಲಿ ವರನನ್ನು ಬಂಧಿಸಿದ್ದಾರೆ. ಇದರಿಂದ ಎರಡೂ ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಆದರೆ, ಕೊನೆಗೆ ಇದಕ್ಕೆ ಪರಿಹಾರ ಕಂಡುಕೊಂಡ ಕುಟುಂಬಸ್ಥರು ಆ ವರನ ತಮ್ಮನ ಜೊತೆಯಲ್ಲಿ ಅದೇ ಮಂಟಪದಲ್ಲಿ ವಧುವಿಗೆ ಮದುವೆ ಮಾಡಿಸಿದ್ದಾರೆ.

ಈ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿರುವ ಅಲಿಗಢದ ಒಂದು ಸಣ್ಣ ಪಟ್ಟಣದಲ್ಲಿ ನಡೆದಿದೆ. ಸಂತೋಷ ಮತ್ತು ಸಂಭ್ರಮದಿಂದ ತುಂಬಿರಬೇಕಿದ್ದ ಮದುವೆ ಮಂಟಪದಲ್ಲಿ ಆಶ್ಚರ್ಯ, ಗಾಬರಿ ತುಂಬಿತ್ತು. ವಿವಾಹ ಸಮಾರಂಭವು ಭರದಿಂದ ಸಾಗುತ್ತಿರುವಾಗ ಕಳ್ಳತನವೊಂದಕ್ಕೆ ಸಂಬಂಧಿಸಿದಂತೆ ವರನನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ವರನನ್ನು ಸ್ಥಳೀಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿಂದಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಆಗ ಆ ವಧುವಿನ ಮುಂದಿನ ಭವಿಷ್ಯ ಹಾಳಾಗಬಾರದು ಎಂದು ಆ ವರನ ತಮ್ಮ ಮುಂದೆ ಬಂದು, ತಾನೇ ಮದುವೆಯಾಗಲು ಸಿದ್ಧ ಎಂದಿದ್ದಾನೆ. ಆಗ ಹಿರಿಯರು ಈ ಮದುವೆಗೆ ಒಪ್ಪಿ, ಅದೇ ಮುಹೂರ್ತದಲ್ಲಿ ಮದುವೆ ಮಾಡಿಸಿದ್ದಾರೆ.

ಮದುವೆಯಾಗಬೇಕಿದ್ದ ವರ ಅಂಗಡಿಯೊಂದರಲ್ಲಿ ಮದ್ಯದ ಬಾಟಲಿಗಳು ಹಾಗೂ ಮೊಬೈಲ್​ಗಳನ್ನು ಕದ್ದ ಆರೋಪದಲ್ಲಿ ಸಿಕ್ಕಿಹಾಕಿಕೊಂಡಿದ್ದ. ಪೊಲೀಸರ ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್