AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಂಟಪದಲ್ಲೇ ಮದುಮಗನ ಬಂಧನ; ವರನ ತಮ್ಮನನ್ನು ವರಿಸಿದ ವಧು!

ವರನನ್ನು ಸ್ಥಳೀಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿಂದಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಆಗ ಆ ವಧುವಿನ ಮುಂದಿನ ಭವಿಷ್ಯ ಹಾಳಾಗಬಾರದು ಎಂದು ಆ ವರನ ತಮ್ಮ ಮುಂದೆ ಬಂದು, ತಾನೇ ಮದುವೆಯಾಗಲು ಸಿದ್ಧ ಎಂದಿದ್ದಾನೆ.

Viral News: ಮಂಟಪದಲ್ಲೇ ಮದುಮಗನ ಬಂಧನ; ವರನ ತಮ್ಮನನ್ನು ವರಿಸಿದ ವಧು!
ಮದುವೆImage Credit source: iStock
ಸುಷ್ಮಾ ಚಕ್ರೆ
|

Updated on: Sep 15, 2023 | 5:59 PM

Share

ಅಲಿಗಢ: ಮದುವೆ ಮಂಟಪದಲ್ಲಿ ಇನ್ನೇನು ಮದುವೆಗೆ ಮುಹೂರ್ತ ಸಮೀಪಿಸುತ್ತಿರುವಾಗಲೇ ಸಿನಿಮೀಯ ರೀತಿಯಲ್ಲಿ ಅಲ್ಲಿಗೆ ಬಂದ ಪೊಲೀಸರು ಕಳ್ಳತನದ ಆರೋಪದಲ್ಲಿ ವರನನ್ನು ಬಂಧಿಸಿದ್ದಾರೆ. ಇದರಿಂದ ಎರಡೂ ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಆದರೆ, ಕೊನೆಗೆ ಇದಕ್ಕೆ ಪರಿಹಾರ ಕಂಡುಕೊಂಡ ಕುಟುಂಬಸ್ಥರು ಆ ವರನ ತಮ್ಮನ ಜೊತೆಯಲ್ಲಿ ಅದೇ ಮಂಟಪದಲ್ಲಿ ವಧುವಿಗೆ ಮದುವೆ ಮಾಡಿಸಿದ್ದಾರೆ.

ಈ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿರುವ ಅಲಿಗಢದ ಒಂದು ಸಣ್ಣ ಪಟ್ಟಣದಲ್ಲಿ ನಡೆದಿದೆ. ಸಂತೋಷ ಮತ್ತು ಸಂಭ್ರಮದಿಂದ ತುಂಬಿರಬೇಕಿದ್ದ ಮದುವೆ ಮಂಟಪದಲ್ಲಿ ಆಶ್ಚರ್ಯ, ಗಾಬರಿ ತುಂಬಿತ್ತು. ವಿವಾಹ ಸಮಾರಂಭವು ಭರದಿಂದ ಸಾಗುತ್ತಿರುವಾಗ ಕಳ್ಳತನವೊಂದಕ್ಕೆ ಸಂಬಂಧಿಸಿದಂತೆ ವರನನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಮುತ್ತು ಕೊಡಲು ಬಂದ ಯುವಕನ ತುಟಿ ಕಚ್ಚಿದ ನಾಗರಹಾವು!

ವರನನ್ನು ಸ್ಥಳೀಯ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿಂದಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಆಗ ಆ ವಧುವಿನ ಮುಂದಿನ ಭವಿಷ್ಯ ಹಾಳಾಗಬಾರದು ಎಂದು ಆ ವರನ ತಮ್ಮ ಮುಂದೆ ಬಂದು, ತಾನೇ ಮದುವೆಯಾಗಲು ಸಿದ್ಧ ಎಂದಿದ್ದಾನೆ. ಆಗ ಹಿರಿಯರು ಈ ಮದುವೆಗೆ ಒಪ್ಪಿ, ಅದೇ ಮುಹೂರ್ತದಲ್ಲಿ ಮದುವೆ ಮಾಡಿಸಿದ್ದಾರೆ.

ಮದುವೆಯಾಗಬೇಕಿದ್ದ ವರ ಅಂಗಡಿಯೊಂದರಲ್ಲಿ ಮದ್ಯದ ಬಾಟಲಿಗಳು ಹಾಗೂ ಮೊಬೈಲ್​ಗಳನ್ನು ಕದ್ದ ಆರೋಪದಲ್ಲಿ ಸಿಕ್ಕಿಹಾಕಿಕೊಂಡಿದ್ದ. ಪೊಲೀಸರ ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ