AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ

Aligarh Muslim University teacher Rao Danish Ali shot dead: ಉತ್ತರಪ್ರದೇಶದ ಆಲಿಗಡ್ ಮುಸ್ಲಿಂ ಯೂನಿವರ್ಸಿಟಿಯ ಎಬಿಕೆ ಸ್ಕೂಲ್​ನ ಟೀಚರ್ ರಾವ್ ದಾನಿಶ್ ಅಲಿ ಅವರನ್ನು ಹತ್ಯೆಗೈಯಲಾಗಿದೆ. ಯೂನಿವರ್ಸಿಟಿ ಕ್ಯಾಂಪಸ್ ಪ್ರದೇಶದಲ್ಲೇ ಡಿಸೆಂಬರ್ 24ರಂದು ರಾತ್ರಿ 9ಗಂಟೆಗೆ ಈ ಘಟನೆ ನಡೆದಿದೆ. ರಾವ್ ಅವರು ವಾಕಿಂಗ್​ಗೆ ಹೋದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಕೊಂದಿದ್ದಾರೆ.

ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ
ಘಟನೆ ನಡೆದ ಯೂನಿವರ್ಸಿಟಿ ಕ್ಯಾಂಟೀನ್ ಸ್ಥಳ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 25, 2025 | 11:34 AM

Share

ಕಾನಪುರ್, ಡಿಸೆಂಬರ್ 9: ಆಲಿಗಡ್ ಮುಸ್ಲಿಂ ಯೂನಿವರ್ಸಿಟಿಯ (Aligarh Muslim University) ಬೋಧಕರೊಬ್ಬರನ್ನು ಕ್ಯಾಂಪಸ್​ನಲ್ಲೇ ಹತ್ಯೆ ಮಾಡಿದ ಘಟನೆ ನಡೆದಿದೆ. ವಿಶ್ವವಿದ್ಯಾಲಯದ ಎಬಿಕೆ ಸ್ಕೂಲ್​ನಲ್ಲಿ ಬೋಧಕರಾಗಿರುವ ರಾವ್ ದಾನಿಸ್ ಅಲಿಯನ್ನು ಗುಂಡಿಟ್ಟು ಸಾಯಿಸಲಾಗಿದೆ. ಆಲಿಗಡ್​ನಲ್ಲಿರುವ ಯೂನಿವರ್ಸಿಟಿ ಕ್ಯಾಂಪಸ್​ನ ಮೌಲಾನ ಆಜಾದ್ ಲೈಬ್ರರಿ ಪ್ರದೇಶದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದೆ.

ಈ ಹತ್ಯೆಗೈದ ಹಂತಕರು ಯಾರೆಂದು ಗೊತ್ತಾಗಿಲ್ಲ. ದಾನಿಶ್ ಅಲಿ ಅವರು ತಮ್ಮ ಇಬ್ಬರು ಸಹೋದ್ಯೋಗಿಗಳೊಂದಿಗೆ ಮೌಲಾನ ಆಜಾದ್ ಲೈಬ್ರರಿ ಸಮೀಪದ ಕ್ಯಾಂಟೀನ್​ಗೆ ವಾಕಿಂಗ್​ಗೆ ಹೋಗಿದ್ದರು. ಆಗ ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ, ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಘಟನೆಯ ನಂತರ ಮತ್ತೊಂದು ಭಯಾನಕ ಅಪಘಾತ: ಎರಡು ಕಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ಸು, 7 ಮಂದಿ ಸಾವು

ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು, ರಾವ್ ಅಲಿಯನ್ನು ಜವಾಹರಲಾಲ್ ನೆಹರೂ ಮೆಡಿಕಲ್ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ, ಗಂಭೀರವಾಗಿ ಗಾಯಗೊಂಡಿದ್ದರಿಂದ ಅವರ ಪ್ರಾಣ ಉಳಿಯಲಿಲ್ಲ. ಇಬ್ಬರು ಅಪರಿಚಿತ ವ್ಯಕ್ತಿಗಳು ಈ ಹತ್ಯೆಗೈದಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಅಲಿಗಡ್ ಪೊಲೀಸರ ಟ್ವೀಟ್

ಯಾವ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬುದು ಗೊತ್ತಾಗಿಲ್ಲ. ಸದ್ಯ ಪೊಲೀಸರು ತನಿಖೆ ನಡೆಸತೊಡಗಿದ್ದಾರೆ. ಸುತ್ತಮುತ್ತಲಿನ ಸ್ಥಳದ ಸಿಸಿಟಿವಿ ಫೂಟೇಜ್ ಅನ್ನು ಪರಿಶೀಲಿಸಲಾಗುತ್ತಿದ್ದು, ಹಂತಕರನ್ನು ಪತ್ತೆ ಮಾಡುವ ಪ್ರಯತ್ನವಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್