AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ

Aligarh Muslim University teacher Rao Danish Ali shot dead: ಉತ್ತರಪ್ರದೇಶದ ಆಲಿಗಡ್ ಮುಸ್ಲಿಂ ಯೂನಿವರ್ಸಿಟಿಯ ಎಬಿಕೆ ಸ್ಕೂಲ್​ನ ಟೀಚರ್ ರಾವ್ ದಾನಿಶ್ ಅಲಿ ಅವರನ್ನು ಹತ್ಯೆಗೈಯಲಾಗಿದೆ. ಯೂನಿವರ್ಸಿಟಿ ಕ್ಯಾಂಪಸ್ ಪ್ರದೇಶದಲ್ಲೇ ಡಿಸೆಂಬರ್ 24ರಂದು ರಾತ್ರಿ 9ಗಂಟೆಗೆ ಈ ಘಟನೆ ನಡೆದಿದೆ. ರಾವ್ ಅವರು ವಾಕಿಂಗ್​ಗೆ ಹೋದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಕೊಂದಿದ್ದಾರೆ.

ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ
ಘಟನೆ ನಡೆದ ಯೂನಿವರ್ಸಿಟಿ ಕ್ಯಾಂಟೀನ್ ಸ್ಥಳ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 25, 2025 | 11:34 AM

Share

ಕಾನಪುರ್, ಡಿಸೆಂಬರ್ 9: ಆಲಿಗಡ್ ಮುಸ್ಲಿಂ ಯೂನಿವರ್ಸಿಟಿಯ (Aligarh Muslim University) ಬೋಧಕರೊಬ್ಬರನ್ನು ಕ್ಯಾಂಪಸ್​ನಲ್ಲೇ ಹತ್ಯೆ ಮಾಡಿದ ಘಟನೆ ನಡೆದಿದೆ. ವಿಶ್ವವಿದ್ಯಾಲಯದ ಎಬಿಕೆ ಸ್ಕೂಲ್​ನಲ್ಲಿ ಬೋಧಕರಾಗಿರುವ ರಾವ್ ದಾನಿಸ್ ಅಲಿಯನ್ನು ಗುಂಡಿಟ್ಟು ಸಾಯಿಸಲಾಗಿದೆ. ಆಲಿಗಡ್​ನಲ್ಲಿರುವ ಯೂನಿವರ್ಸಿಟಿ ಕ್ಯಾಂಪಸ್​ನ ಮೌಲಾನ ಆಜಾದ್ ಲೈಬ್ರರಿ ಪ್ರದೇಶದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದೆ.

ಈ ಹತ್ಯೆಗೈದ ಹಂತಕರು ಯಾರೆಂದು ಗೊತ್ತಾಗಿಲ್ಲ. ದಾನಿಶ್ ಅಲಿ ಅವರು ತಮ್ಮ ಇಬ್ಬರು ಸಹೋದ್ಯೋಗಿಗಳೊಂದಿಗೆ ಮೌಲಾನ ಆಜಾದ್ ಲೈಬ್ರರಿ ಸಮೀಪದ ಕ್ಯಾಂಟೀನ್​ಗೆ ವಾಕಿಂಗ್​ಗೆ ಹೋಗಿದ್ದರು. ಆಗ ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ, ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಘಟನೆಯ ನಂತರ ಮತ್ತೊಂದು ಭಯಾನಕ ಅಪಘಾತ: ಎರಡು ಕಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ಸು, 7 ಮಂದಿ ಸಾವು

ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು, ರಾವ್ ಅಲಿಯನ್ನು ಜವಾಹರಲಾಲ್ ನೆಹರೂ ಮೆಡಿಕಲ್ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ, ಗಂಭೀರವಾಗಿ ಗಾಯಗೊಂಡಿದ್ದರಿಂದ ಅವರ ಪ್ರಾಣ ಉಳಿಯಲಿಲ್ಲ. ಇಬ್ಬರು ಅಪರಿಚಿತ ವ್ಯಕ್ತಿಗಳು ಈ ಹತ್ಯೆಗೈದಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಅಲಿಗಡ್ ಪೊಲೀಸರ ಟ್ವೀಟ್

ಯಾವ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬುದು ಗೊತ್ತಾಗಿಲ್ಲ. ಸದ್ಯ ಪೊಲೀಸರು ತನಿಖೆ ನಡೆಸತೊಡಗಿದ್ದಾರೆ. ಸುತ್ತಮುತ್ತಲಿನ ಸ್ಥಳದ ಸಿಸಿಟಿವಿ ಫೂಟೇಜ್ ಅನ್ನು ಪರಿಶೀಲಿಸಲಾಗುತ್ತಿದ್ದು, ಹಂತಕರನ್ನು ಪತ್ತೆ ಮಾಡುವ ಪ್ರಯತ್ನವಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ