AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ: ಕೇಬಲ್ ಕಾರಿನಲ್ಲಿ ಮೂರು ಗಂಟೆಗಳಿಗಿಂತಲೂ ಹೆಚ್ಚು ಕಾಲ ಸಿಲುಕಿದ್ದ ಎಲ್ಲ ಪ್ರಯಾಣಿಕರ ರಕ್ಷಣೆ

ಎಲ್ಲಾ 11 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ರಕ್ಷಣಾ ತಂಡಗಳು ತೊಂದರೆ ಎದುರಿಸಬೇಕಾಯಿತು. ಎನ್‌ಡಿಆರ್‌ಎಫ್ ತಂಡವನ್ನು ಆದಷ್ಟು ಬೇಗ ಸ್ಥಳಕ್ಕೆ ಕೊಂಡೊಯ್ದಿದ್ದಕ್ಕಾಗಿ ಮತ್ತು ಸಿಕ್ಕಿಬಿದ್ದ ಜನರ ರಕ್ಷಣೆಗಾಗಿ...

ಹಿಮಾಚಲ ಪ್ರದೇಶ: ಕೇಬಲ್ ಕಾರಿನಲ್ಲಿ ಮೂರು ಗಂಟೆಗಳಿಗಿಂತಲೂ ಹೆಚ್ಚು ಕಾಲ ಸಿಲುಕಿದ್ದ ಎಲ್ಲ ಪ್ರಯಾಣಿಕರ ರಕ್ಷಣೆ
ಹಿಮಾಚಲ ಪ್ರದೇಶದಲ್ಲಿ ಸಿಲುಕಿದ ಕೇಬಲ್ ಕಾರ್
TV9 Web
| Edited By: |

Updated on: Jun 20, 2022 | 8:24 PM

Share

ಪರ್ವಾನೂ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ (Himachal Pradesh) ಪರ್ವಾನೂ (Parwanoo) ಎಂಬಲ್ಲಿ ಸೋಮವಾರ ಮಧ್ಯಾಹ್ನ ಕೇಬಲ್ ಕಾರಿನಲ್ಲಿ(cable car) ಮೂರು ಗಂಟೆಗೂ ಹೆಚ್ಚು ಕಾಲ ಸಿಲುಕಿದ್ದ 11 ಮಂದಿಯನ್ನು ರಕ್ಷಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್, “ಎಲ್ಲಿ ದೋಷ ಸಂಭವಿಸಿದ್ದು ಎಂಬುದರ ಕುರಿತು ನಾನು ವರದಿಯನ್ನು ಕೇಳುತ್ತೇನೆ” ಎಂದು ಹೇಳಿದರು. ಪ್ರಯಾಣಿಕರನ್ನು ಹೊರತರಲು ಕೇಬಲ್‌ನಲ್ಲಿ ರಕ್ಷಣಾ ಟ್ರಾಲಿಯನ್ನು ನಿಯೋಜಿಸಲಾಗಿದೆ. ಅವುಗಳನ್ನು ಕೆಳಗಿನ ಕೌಶಲ್ಯ ನದಿ ಕಣಿವೆಯ ಬೆಟ್ಟದ ಮೇಲೆ ಒಂದೊಂದಾಗಿ ಇಳಿಸಲಾಯಿತು ಎಂದು ಸೋಲನ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ವೀರೇಂದ್ರ ಶರ್ಮಾ ಹೇಳಿದ್ದಾರೆ. ಕೇಬಲ್ ಕಾರ್ ಟಿಂಬರ್ ಟ್ರಯಲ್ ಖಾಸಗಿ ರೆಸಾರ್ಟ್‌ನ ಜನಪ್ರಿಯ ವೈಶಿಷ್ಟ್ಯವಾಗಿದೆ. ಇದು ಚಂಡೀಗಢದಿಂದ ಕಸೌಲಿ ಮತ್ತು ಶಿಮ್ಲಾ ಮಾರ್ಗದಲ್ಲಿ ಸುಮಾರು 35 ಕಿಲೋಮೀಟರ್ ದೂರದಲ್ಲಿದೆ. ಪರ್ವಾನೂ ಹರ್ಯಾಣ, ಪಂಜಾಬ್ ಮತ್ತು ಚಂಡೀಗಢಗಳೊಂದಿಗೆ ಹಿಮಾಚಲ ಪ್ರದೇಶದ ತುದಿಯಲ್ಲಿರುವ ಕಾರಣ ಈ ಪ್ರದೇಶದಾದ್ಯಂತ ಜನರು ಇಲ್ಲಿ ಆಗಾಗ್ಗೆ ಭೇಟಿ ನೀಡುತ್ತಾರೆ.

ಟಿಂಬರ್ ಟ್ರಯಲ್ ಆಪರೇಟರ್‌ನ ತಾಂತ್ರಿಕ ತಂಡವನ್ನು ನಿಯೋಜಿಸಲಾಗಿದೆ ಮತ್ತು ಪೊಲೀಸ್ ತಂಡವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಎನ್‌ಐಗೆ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡವೂ ಸ್ಥಳದಲ್ಲಿತ್ತು.

ಇದನ್ನೂ ಓದಿ
Image
ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ; ವಿಪಕ್ಷಗಳ ಮನವಿ ನಿರಾಕರಿಸಿದ ಗೋಪಾಲಕೃಷ್ಣ ಗಾಂಧಿ
Image
ಹಿಮಾಚಲ ಪ್ರದೇಶ: ರೋಪ್​ ವೇಯಲ್ಲಿ ತಾಂತ್ರಿಕ ದೋಷ, ಅತಂತ್ರ ಸ್ಥಿತಿಯಲ್ಲಿ ಸಹಾಯ ಬೇಡುತ್ತಿರುವ ಪ್ರವಾಸಿಗರು
Image
Justice MR Shah: ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಎಂಆರ್​ ಶಾ ಅವರಿಗೆ ಹೃದಯಾಘಾತ; ದೆಹಲಿಗೆ ಏರ್​ಲಿಫ್ಟ್​

ಕೇಬಲ್ ಕಾರ್ ಸಿಕ್ಕಿಹಾಕಿಕೊಂಡ ನಂತರ, ಸಿಕ್ಕಿಬಿದ್ದವರಲ್ಲಿ ಕೆಲವು ಹಿರಿಯ ಪ್ರವಾಸಿಗರು ಅವರ ಕಷ್ಟಗಳ ಬಗ್ಗೆ ವಿವರಿಸುವ ವಿಡಿಯೊವನ್ನೂ ಹಾಕಿದ್ದಾರೆ. “ನಾನು ಮಧುಮೇಹ ಮತ್ತು ಕಿಡ್ನಿ ರೋಗಿ ಎಂದು ಹಿರಿಯ ವ್ಯಕ್ತಿಯೊಬ್ಬರು ವಿಡಿಯೊದಲ್ಲಿ ಮತ್ತೆ ಮತ್ತೆ ಹೇಳುತ್ತಿರುವುದು ವಿಡಿಯೊದಲ್ಲಿದೆ.

ಎಲ್ಲರೂ ಸುರಕ್ಷಿತರಾಗಿದ್ದಾರೆ: ಹಿಮಾಚಲ ಸಿಎಂ

ಎಲ್ಲಾ 11 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ರಕ್ಷಣಾ ತಂಡಗಳು ತೊಂದರೆ ಎದುರಿಸಬೇಕಾಯಿತು. ಎನ್‌ಡಿಆರ್‌ಎಫ್ ತಂಡವನ್ನು ಆದಷ್ಟು ಬೇಗ ಸ್ಥಳಕ್ಕೆ ಕೊಂಡೊಯ್ದಿದ್ದಕ್ಕಾಗಿ ಮತ್ತು ಸಿಕ್ಕಿಬಿದ್ದ ಜನರ ರಕ್ಷಣೆಗಾಗಿ ವಾಯುಪಡೆಯನ್ನು ತಂದಿದ್ದಕ್ಕಾಗಿ  ನಾನು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ  ಸಿಎಂ ಜೈರಾಮ್ ಠಾಕೂರ್ ಹೇಳಿದ್ದಾರೆ.

ಈ ರಕ್ಷಣಾ ಕಾರ್ಯಾಚರಣೆಯಲ್ಲಿ ನಾವು ಎದುರಿಸಿದ ದೊಡ್ಡ ಅಡಚಣೆಯೆಂದರೆ ಸಿಕ್ಕಿಬಿದ್ದ ಪ್ರವಾಸಿಗರನ್ನು ನಾವು ಸುರಕ್ಷಿತವಾಗಿ ರಕ್ಷಿಸಬಹುದೆಂದು ಮನವರಿಕೆ ಮಾಡುವುದು. ಸಂಪೂರ್ಣ ರಕ್ಷಣಾ ಕಾರ್ಯಗಳಿಗೆ  ಸುಮಾರು 3-4 ಗಂಟೆಗಳನ್ನು ತೆಗೆದುಕೊಂಡಿತು. ಇದಲ್ಲದೆ, ನಾವು ಇತ್ತೀಚೆಗೆ ರೋಪ್‌ವೇಗಳನ್ನು ಸಮೀಕ್ಷೆ ಮಾಡುತ್ತಿದ್ದೇವೆ ಎಂದು  ಎನ್​​ ಡಿಆರ್​​ಎಫ್ ಅಧಿಕಾರಿ  ಬಲ್ಜಿಂದರ್ ಸಿಂಗ್ ಹೇಳಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ