AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದ ಐಪಿಎಸ್ ಅಧಿಕಾರಿ ಹೇಮಂತ್ ಲೋಹಿಯಾ ಹತ್ಯೆಯ ಹಿಂದೆ ಟಿಆರ್​ಎಫ್ ಉಗ್ರ ಸಂಘಟನೆ ಕೈವಾಡ?

ಕೇಂದ್ರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ನಂತರ 2019ರಲ್ಲಿ ಟಿಆರ್‌ಎಫ್ ಸಂಘಟನೆಯನ್ನು ಪ್ರಾರಂಭಿಸಲಾಯಿತು. ಈ ಟಿಆರ್‌ಎಫ್‌ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ರಚಿಸಿದೆ.

ಜಮ್ಮು ಕಾಶ್ಮೀರದ ಐಪಿಎಸ್ ಅಧಿಕಾರಿ ಹೇಮಂತ್ ಲೋಹಿಯಾ ಹತ್ಯೆಯ ಹಿಂದೆ ಟಿಆರ್​ಎಫ್ ಉಗ್ರ ಸಂಘಟನೆ ಕೈವಾಡ?
ಹೇಮಂತ್ ಲೋಹಿಯಾ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 04, 2022 | 10:30 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ಲೋಹಿಯಾ (IPS Officer Hemant Lohia) ಅವರನ್ನು ಅವರ ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮವಾರ ತಡರಾತ್ರಿ ಜಮ್ಮುವಿನ ಉದಯವಾಲಾ ಪ್ರದೇಶದಲ್ಲಿನ ಅವರ ಮನೆಯೊಳಗೆ ಹೇಮಂತ್ ಲೋಹಿಯಾ ಅವರ ಮೃತದೇಹ ಪತ್ತೆಯಾಗಿದೆ. ಉಸಿರುಗಟ್ಟಿಸಿ ಕೊಲೆ ಮಾಡಲಾಗಿದ್ದು, ನಂತರ ಅವರ ಕತ್ತು ಸೀಳಲಾಗಿದೆ. ಬಳಿಕ ಅವರ ದೇಹವನ್ನು ಅರೆಬರೆ ಸುಡಲಾಗಿದೆ. ಹೇಮಂತ್ ಲೋಹಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯಾಸಿರ್ ಎಂಬಾತ ನಾಪತ್ತೆಯಾಗಿದ್ದು, ಆತನೇ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಈ ನಡುವೆ ಟಿಆರ್​ಎಫ್ ಉಗ್ರ ಸಂಘಟನೆ ಈ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದೆ. ಜಮ್ಮು ಕಾಶ್ಮೀರದ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಸಿ ಮುಟ್ಟಿಸಲು ಹಿರಿಯ ಐಪಿಎಸ್ ಅಧಿಕಾರಿಯನ್ನು ಕೊಲೆ ಮಾಡಿದ್ದೇವೆ. ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯಾಸಿರ್ ತಮ್ಮದೇ ಸಂಘಟನೆಗೆ ಸೇರಿದವನು ಎಂದು ಟಿಆರ್​ಎಫ್ ಸಂಘಟನೆಗೆ ಸೇರಿದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಐಪಿಎಸ್ ಅಧಿಕಾರಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಆದರೆ, ಅವರ ಸಾವಿನ ವಿವರಗಳನ್ನು ಇನ್ನೂ ಸಾರ್ವಜನಿಕರಿಗೆ ಬಹಿರಂಗಪಡಿಸಲಾಗಿಲ್ಲ. ಆರಂಭಿಕ ವರದಿಗಳ ಪ್ರಕಾರ, ಮುರಿದ ಕೆಚಪ್ ಬಾಟಲಿಯನ್ನು ಬಳಸಿ ತಡರಾತ್ರಿಯಲ್ಲಿ ಹೇಮಂತ್ ಲೋಹಿಯಾ ಅವರ ಕತ್ತು ಸೀಳಲಾಗಿದೆ. ಅವರ ಮರಣದ ಕೆಲವೇ ಗಂಟೆಗಳ ನಂತರ, ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್​ಎಫ್) ಎಂಬ ಭಯೋತ್ಪಾದಕ ಸಂಘಟನೆಯು ಐಪಿಎಸ್ ಅಧಿಕಾರಿಯ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ. ಆದರೆ, ಪೊಲೀಸರು ಈ ಬಗ್ಗೆ ಯಾವುದೇ ಖಚಿತ ಮಾಹಿತಿ ನೀಡಿಲ್ಲ. ಲೋಹಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ವರದಿಗಳ ಪ್ರಕಾರ, ಹೇಮಂತ್ ಲೋಹಿಯಾ ಹತ್ಯೆಯಾದ ಕೆಲವೇ ಗಂಟೆಗಳ ನಂತರ ಟಿಆರ್‌ಎಫ್ ಸದಸ್ಯರು ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ತಾವೇ ಈ ಕೊಲೆ ಮಾಡಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಹಾಗಾದರೆ, ಈ ರೆಸಿಸ್ಟೆನ್ಸ್ ಫ್ರಂಟ್ ಸಂಘಟನೆ ಯಾವುದು? ಇಲ್ಲಿದೆ ಮಾಹಿತಿ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಕತ್ತು ಸೀಳಿ ಹಿರಿಯ ಐಪಿಎಸ್​ ಅಧಿಕಾರಿಯ ಬರ್ಬರ ಹತ್ಯೆ; ಮನೆ ಕೆಲಸದವನು ನಾಪತ್ತೆ

ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಭಯೋತ್ಪಾದಕ ಸಂಘಟನೆಯಾಗಿದ್ದು, ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತದೆ. ಕೇಂದ್ರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ನಂತರ 2019ರಲ್ಲಿ ಈ ಭಯೋತ್ಪಾದಕ ಸಂಘಟನೆಯನ್ನು ಪ್ರಾರಂಭಿಸಲಾಯಿತು. ಈ ಟಿಆರ್‌ಎಫ್‌ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ರಚಿಸಿದೆ. ಕಾಶ್ಮೀರದ ಕಣಿವೆಯಲ್ಲಿ ನಡೆದ ಅನೇಕ ಭಯೋತ್ಪಾದಕ ದಾಳಿಗಳ ಹೊಣೆಯನ್ನು ಈ ಸಂಘಟನೆಯು ವಹಿಸಿಕೊಂಡಿದೆ. ಪ್ರಮುಖವಾಗಿ, 2020ರಲ್ಲಿ ಕಾಶ್ಮೀರದಲ್ಲಿ ಐವರು ಭಾರತೀಯ ಸೇನೆಯ ಪ್ಯಾರಾ ಕಮಾಂಡೋಗಳ ಸಾವು ಸೇರಿದಂತೆ ಅನೇಕ ದಾಳಿಯ ಹೊಣೆಯನ್ನು TRF ಸಂಘಟನೆ ವಹಿಸಿಕೊಂಡಿದೆ.

ಆದರೆ, ಭಾರತೀಯ ಸೇನೆಯು ದಿ ರೆಸಿಸ್ಟೆನ್ಸ್ ಫ್ರಂಟ್ ಅಸ್ತಿತ್ವವನ್ನು ವಜಾಗೊಳಿಸಿದೆ. TRF ವಾಸ್ತವವಾಗಿ ಅಸ್ತಿತ್ವದಲ್ಲಿಯೇ ಇಲ್ಲ. ಇದು ಕೇವಲ ಸಾಮಾಜಿಕ ಮಾಧ್ಯಮ ಘಟಕವಾಗಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ. ಭದ್ರತಾ ಪಡೆಗಳನ್ನು ದಾರಿತಪ್ಪಿಸಲು ಕೊಲೆ ಮತ್ತು ದಾಳಿಯ ಹೊಣೆಗಾರಿಕೆಯನ್ನು ಈ ಸಂಘಟನೆ ವಹಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Amit Shah: ಜಮ್ಮು ಕಾಶ್ಮೀರಕ್ಕೆ ಅಮಿತ್ ಶಾ ಭೇಟಿ; ಇಂದು ಪಹಾರಿ ಸಮುದಾಯದ ಜೊತೆ ಸಂವಾದ

ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರ ಸ್ವಂತ ಮನೆ ನವೀಕರಣಗೊಳ್ಳುತ್ತಿರುವುದರಿಂದ ತಮ್ಮ ಕುಟುಂಬದೊಂದಿಗೆ ತಮ್ಮ ಸ್ನೇಹಿತ ರಾಜೀವ್ ಖಜುರಿಯಾ ಅವರ ಮನೆಯಲ್ಲಿ ವಾಸವಾಗಿದ್ದರು. ಅದೇ ಮನೆಯಲ್ಲಿ ನಿನ್ನೆ ರಾತ್ರಿ ಕೊಲೆ ನಡೆದಿದೆ. ಅವರ ಮನೆಯ ಕೆಲಸದಾಳು ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಶುರುವಾಗಿದೆ. ತಮಗೆ ಸಹಾಯವಾಗಲೆಂದು ತಮ್ಮ ಮನೆಯ ಕೆಲಸ ವ್ಯಕ್ತಿಯಾಗಿದ್ದ ಯಾಸಿರ್​​ನನ್ನು ಕೂಡ ತಮ್ಮ ಗೆಳೆಯನ ಮನೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಆತ ಈಗ ನಾಪತ್ತೆಯಾಗಿದ್ದಾನೆ.

ಡಿಜಿಪಿ ಹೇಮಂತ್ ಅವರ ಮನೆಯ ಕೆಲಸದಾಳುವನ್ನು ಮೂಲತಃ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಗೆ ಸೇರಿದ ಯಾಸಿರ್ ಎಂದು ಗುರುತಿಸಲಾಗಿದೆ. ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. 1992ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ 57 ವರ್ಷದ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ಲೋಹಿಯಾ ಅಸ್ಸಾಂ ಮೂಲದವರಾಗಿದ್ದರು. ಅವರನ್ನು ಆಗಸ್ಟ್‌ನಲ್ಲಿ ಡಿಜಿಪಿ ಕಾರಾಗೃಹಕ್ಕೆ ನಿಯೋಜಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Tue, 4 October 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ