AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿರೋಧಿ ವೆಬ್​ಸೈಟ್, ಯುಟ್ಯೂಬ್ ಚಾನೆಲ್​ಗಳ ನಿಷೇಧ: ಕೇಂದ್ರ ಸಚಿವ ಅನುರಾಗ್ ಠಾಕೂರ್

‘ವಿಶ್ವದ ಹಲವು ಪ್ರಮುಖ ದೇಶಗಳು ನಮ್ಮ ಕ್ರಮವನ್ನು ಗಮನಿಸಿವೆ. ಯುಟ್ಯೂಬ್ ಸಹ ಇಂಥ ಚಾನೆಲ್​ಗಳನ್ನು ನಿರ್ಬಂಧಿಸಲು ಮುಂದಾಗಿದೆ’ ಎಂದು ತಿಳಿಸಿದರು.

ಭಾರತ ವಿರೋಧಿ ವೆಬ್​ಸೈಟ್, ಯುಟ್ಯೂಬ್ ಚಾನೆಲ್​ಗಳ ನಿಷೇಧ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಕೇಂದ್ರ ಸಚಿವ ಅನುರಾಗ್ ಠಾಕೂರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jan 19, 2022 | 11:30 PM

Share

ದೆಹಲಿ: ಭಾರತ ವಿರೋಧಿ ವಿಚಾರಗಳನ್ನು ಪ್ರಚಾರ ಮಾಡಿದ್ದಕ್ಕಾಗಿ 20 ಯುಟ್ಯೂಬ್​ ಚಾನೆಲ್​ಗಳು ಮತ್ತು ಎರಡು ವೆಬ್​ಸೈಟ್​ಗಳನ್ನು ನಿರ್ಬಂಧಿಸಿದ ಕೆಲವೇ ದಿನಗಳ ಬಳಿಕ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್ ‘ಭಾರತದ ವಿರುದ್ಧ ಸಂಚು ನಡೆಸುವವರ ವಿರುದ್ಧ ಕೇಂದ್ರ ಸರ್ಕಾರವು ಇಂಥ ಕಠಿಣ ಕ್ರಮಗಳನ್ನು ಜರುಗಿಸುವುದನ್ನು ಮುಂದುವರಿಸಲಿದೆ’ ಎಂದು ಎಚ್ಚರಿಸಿದ್ದಾರೆ. ‘ಅಂಥವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಾನು ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ. ‘ವಿಶ್ವದ ಹಲವು ಪ್ರಮುಖ ದೇಶಗಳು ನಮ್ಮ ಕ್ರಮವನ್ನು ಗಮನಿಸಿವೆ. ಯುಟ್ಯೂಬ್ ಸಹ ಇಂಥ ಚಾನೆಲ್​ಗಳನ್ನು ನಿರ್ಬಂಧಿಸಲು ಮುಂದಾಗಿದೆ’ ಎಂದು ತಿಳಿಸಿದರು.

ಗುಪ್ತಚರ ಸಂಸ್ಥೆಗಳು ಸಂಘಟಿತ ಪ್ರಯತ್ನದಿಂದ ಒದಗಿಸಿದ ಪುರಾವೆಗಳನ್ನು ಆಧರಿಸಿ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಕಳೆದ ಡಿಸೆಂಬರ್​ನಲ್ಲಿ ಸುಳ್ಳುಸುದ್ದಿಗಳ ಮೂಲಕ ದೇಶವಿರೋಧಿ ಭಾವನೆಗಳನ್ನು ಹರಡುತ್ತಿದ್ದ 20 ಯುಟ್ಯೂಬ್​ ಚಾನೆಲ್ ಹಾಗೂ ಎರಡು ವೆಬ್​ಸೈಟ್​ಗಳನ್ನು ನಿರ್ಬಂಧಿಸಲು ಆದೇಶ ಹೊರಡಿಸಿತ್ತು ಎಂದು ನೆನಪಿಸಿಕೊಂಡರು. ಭಾರತದ ವಿರುದ್ಧ ಸಂಚು ಹೂಡುವ ಯಾವುದೇ ಪ್ರಯತ್ನವನ್ನು ನಿಷ್ಫಲಗೊಳಿಸಲಾಗುವುದು. ಸುಳ್ಳು ಸುದ್ದಿ ಪ್ರಸಾರ ಮಾಡಿ, ಸಮಾಜ ಒಡೆಯುವ ಹುನ್ನಾರಗಳಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಕಳೆದ ಡಿಸೆಂಬರ್ ತಿಂಗಳಲ್ಲಿ ಸಚಿವರು 20 ಯುಟ್ಯೂಬ್ ಚಾನೆಲ್ ಹಾಗೂ ಕೆಲ ವೆಬ್​​ಸೈಟ್​ಗಳನ್ನು ನಿರ್ಬಂಧಿಸಲು ಆದೇಶಿಸಿದ್ದರು. ಪಾಕಿಸ್ತಾನದಿಂದ ಕಾರ್ಯಾಚರಣೆ ನಡೆಸುತ್ತಿರುವ ಈ ವೆಬ್​ಸೈಟ್​ಗಳು ಭಾರತಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹರಡುತ್ತಿವೆ ಎಂದು ದೂರಲಾಗಿತ್ತು. ಕಾಶ್ಮೀರ, ಭಾರತೀಯ ಸೇನೆ, ಅಲ್ಪಸಂಖ್ಯಾತ ಸಮುದಾಯಗಳು, ರಾಮ ಮಂದಿರ, ಜನರಲ್ ಬಿಪಿನ್ ರಾವತ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಈ ಚಾನೆಲ್​ನಲ್ಲಿ ಸುಳ್ಳು ಮಾಹಿತಿ ಹರಡಲಾಗುತ್ತಿತ್ತು ಎಂದು ಮಾಹಿತಿ ಮತ್ತು ಪ್ರಸಾರ ಇಲಾಖೆಯ ಪತ್ರಿಕಾ ಹೇಳಿಕೆ ತಿಳಿಸಿತ್ತು.

ಇದನ್ನೂ ಓದಿ: ಮೋದಿಯವರ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪ ಬಗ್ಗೆ ಗೃಹ ಸಚಿವಾಲಯ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತದೆ: ಅನುರಾಗ್ ಠಾಕೂರ್ ಇದನ್ನೂ ಓದಿ: ಮಾಜಿ ಸಿಎಂನಿಂದ ಇದು ನಿರೀಕ್ಷಿಸಿರಲಿಲ್ಲ; ಮೋದಿ ಬಗ್ಗೆ ಅಖಿಲೇಶ್ ಯಾದವ್ ಟೀಕೆಗೆ ಅನುರಾಗ್ ಠಾಕೂರ್ ಪ್ರತಿಕ್ರಿಯೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ