AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿರೋಧಿ ವೆಬ್​ಸೈಟ್, ಯುಟ್ಯೂಬ್ ಚಾನೆಲ್​ಗಳ ನಿಷೇಧ: ಕೇಂದ್ರ ಸಚಿವ ಅನುರಾಗ್ ಠಾಕೂರ್

‘ವಿಶ್ವದ ಹಲವು ಪ್ರಮುಖ ದೇಶಗಳು ನಮ್ಮ ಕ್ರಮವನ್ನು ಗಮನಿಸಿವೆ. ಯುಟ್ಯೂಬ್ ಸಹ ಇಂಥ ಚಾನೆಲ್​ಗಳನ್ನು ನಿರ್ಬಂಧಿಸಲು ಮುಂದಾಗಿದೆ’ ಎಂದು ತಿಳಿಸಿದರು.

ಭಾರತ ವಿರೋಧಿ ವೆಬ್​ಸೈಟ್, ಯುಟ್ಯೂಬ್ ಚಾನೆಲ್​ಗಳ ನಿಷೇಧ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಕೇಂದ್ರ ಸಚಿವ ಅನುರಾಗ್ ಠಾಕೂರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jan 19, 2022 | 11:30 PM

Share

ದೆಹಲಿ: ಭಾರತ ವಿರೋಧಿ ವಿಚಾರಗಳನ್ನು ಪ್ರಚಾರ ಮಾಡಿದ್ದಕ್ಕಾಗಿ 20 ಯುಟ್ಯೂಬ್​ ಚಾನೆಲ್​ಗಳು ಮತ್ತು ಎರಡು ವೆಬ್​ಸೈಟ್​ಗಳನ್ನು ನಿರ್ಬಂಧಿಸಿದ ಕೆಲವೇ ದಿನಗಳ ಬಳಿಕ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್ ‘ಭಾರತದ ವಿರುದ್ಧ ಸಂಚು ನಡೆಸುವವರ ವಿರುದ್ಧ ಕೇಂದ್ರ ಸರ್ಕಾರವು ಇಂಥ ಕಠಿಣ ಕ್ರಮಗಳನ್ನು ಜರುಗಿಸುವುದನ್ನು ಮುಂದುವರಿಸಲಿದೆ’ ಎಂದು ಎಚ್ಚರಿಸಿದ್ದಾರೆ. ‘ಅಂಥವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಾನು ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ. ‘ವಿಶ್ವದ ಹಲವು ಪ್ರಮುಖ ದೇಶಗಳು ನಮ್ಮ ಕ್ರಮವನ್ನು ಗಮನಿಸಿವೆ. ಯುಟ್ಯೂಬ್ ಸಹ ಇಂಥ ಚಾನೆಲ್​ಗಳನ್ನು ನಿರ್ಬಂಧಿಸಲು ಮುಂದಾಗಿದೆ’ ಎಂದು ತಿಳಿಸಿದರು.

ಗುಪ್ತಚರ ಸಂಸ್ಥೆಗಳು ಸಂಘಟಿತ ಪ್ರಯತ್ನದಿಂದ ಒದಗಿಸಿದ ಪುರಾವೆಗಳನ್ನು ಆಧರಿಸಿ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಕಳೆದ ಡಿಸೆಂಬರ್​ನಲ್ಲಿ ಸುಳ್ಳುಸುದ್ದಿಗಳ ಮೂಲಕ ದೇಶವಿರೋಧಿ ಭಾವನೆಗಳನ್ನು ಹರಡುತ್ತಿದ್ದ 20 ಯುಟ್ಯೂಬ್​ ಚಾನೆಲ್ ಹಾಗೂ ಎರಡು ವೆಬ್​ಸೈಟ್​ಗಳನ್ನು ನಿರ್ಬಂಧಿಸಲು ಆದೇಶ ಹೊರಡಿಸಿತ್ತು ಎಂದು ನೆನಪಿಸಿಕೊಂಡರು. ಭಾರತದ ವಿರುದ್ಧ ಸಂಚು ಹೂಡುವ ಯಾವುದೇ ಪ್ರಯತ್ನವನ್ನು ನಿಷ್ಫಲಗೊಳಿಸಲಾಗುವುದು. ಸುಳ್ಳು ಸುದ್ದಿ ಪ್ರಸಾರ ಮಾಡಿ, ಸಮಾಜ ಒಡೆಯುವ ಹುನ್ನಾರಗಳಿಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಕಳೆದ ಡಿಸೆಂಬರ್ ತಿಂಗಳಲ್ಲಿ ಸಚಿವರು 20 ಯುಟ್ಯೂಬ್ ಚಾನೆಲ್ ಹಾಗೂ ಕೆಲ ವೆಬ್​​ಸೈಟ್​ಗಳನ್ನು ನಿರ್ಬಂಧಿಸಲು ಆದೇಶಿಸಿದ್ದರು. ಪಾಕಿಸ್ತಾನದಿಂದ ಕಾರ್ಯಾಚರಣೆ ನಡೆಸುತ್ತಿರುವ ಈ ವೆಬ್​ಸೈಟ್​ಗಳು ಭಾರತಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹರಡುತ್ತಿವೆ ಎಂದು ದೂರಲಾಗಿತ್ತು. ಕಾಶ್ಮೀರ, ಭಾರತೀಯ ಸೇನೆ, ಅಲ್ಪಸಂಖ್ಯಾತ ಸಮುದಾಯಗಳು, ರಾಮ ಮಂದಿರ, ಜನರಲ್ ಬಿಪಿನ್ ರಾವತ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಈ ಚಾನೆಲ್​ನಲ್ಲಿ ಸುಳ್ಳು ಮಾಹಿತಿ ಹರಡಲಾಗುತ್ತಿತ್ತು ಎಂದು ಮಾಹಿತಿ ಮತ್ತು ಪ್ರಸಾರ ಇಲಾಖೆಯ ಪತ್ರಿಕಾ ಹೇಳಿಕೆ ತಿಳಿಸಿತ್ತು.

ಇದನ್ನೂ ಓದಿ: ಮೋದಿಯವರ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪ ಬಗ್ಗೆ ಗೃಹ ಸಚಿವಾಲಯ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತದೆ: ಅನುರಾಗ್ ಠಾಕೂರ್ ಇದನ್ನೂ ಓದಿ: ಮಾಜಿ ಸಿಎಂನಿಂದ ಇದು ನಿರೀಕ್ಷಿಸಿರಲಿಲ್ಲ; ಮೋದಿ ಬಗ್ಗೆ ಅಖಿಲೇಶ್ ಯಾದವ್ ಟೀಕೆಗೆ ಅನುರಾಗ್ ಠಾಕೂರ್ ಪ್ರತಿಕ್ರಿಯೆ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ