AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಮ್ ಕೋರ್ಟ್​ನಲ್ಲಿರುವ ಪೆಂಡಿಂಗ್ ಪ್ರಕರಣಗಳ ಹೊರೆ ತಗ್ಗಿಸಲು ಪ್ರತಿದಿನ ಹತ್ತತ್ತು ವೈವಾಹಿಕ ಕಲಹ ಮತ್ತು ಜಾಮೀನು ಮನವಿಗಳ ವಿಚಾರಣೆಗೆ ತೀರ್ಮಾನ

ವಿಚಾರಣೆಗೆ ಶೆಡ್ಯೂಲ್ ಅಗಿರುವ ಪೂರಕ ಪಟ್ಟಿಗೆ ಕೊನೆ ಕ್ಷಣಗಳಲ್ಲಿ ಸೇರಿಸಲಾಗುವ ಪ್ರಕರಣಗಳ ಸಂಖ್ಯೆಯಲ್ಲಿ ಸಹ ಕಡಿತಗೊಳಿಸಲಾಗುವುದು ಅಂತ ಮುಖ್ಯ ನ್ಯಾಯಾಧೀಶರು ಹೇಳಿದರು. ಹಾಗೆ ಮಾಡಿದಾಗಲೇ ನ್ಯಾಯಾಧೀಶರು ತಡರಾತ್ರಿಯವರೆಗೆ ವಿಚಾರಣೆ ನಡೆಸುವುದು ತಪ್ಪುತ್ತದೆ ಎಂದು ಅವರು ಹೇಳಿದರು.

ಸುಪ್ರೀಮ್ ಕೋರ್ಟ್​ನಲ್ಲಿರುವ ಪೆಂಡಿಂಗ್ ಪ್ರಕರಣಗಳ ಹೊರೆ ತಗ್ಗಿಸಲು ಪ್ರತಿದಿನ ಹತ್ತತ್ತು ವೈವಾಹಿಕ ಕಲಹ ಮತ್ತು ಜಾಮೀನು ಮನವಿಗಳ ವಿಚಾರಣೆಗೆ ತೀರ್ಮಾನ
ಸುಪ್ರೀಂಕೋರ್ಟ್
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Nov 18, 2022 | 6:31 PM

Share

ನವದೆಹಲಿ: ಸುಪ್ರೀಮ್ ಕೋರ್ಟ್ ನಲ್ಲಿ (The Supreme Court) ಇತ್ಯರ್ಥಗೊಳ್ಳದ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವ ನಿಟ್ಟಿನಲ್ಲಿ, ಸರ್ವೋಚ್ಛ ನ್ಯಾಯಾಲಯದ ಪ್ರತಿಯೊಂದು ಪೀಠವು ಪ್ರತಿದಿನ 10 ವೈವಾಹಿಕ ಕಲಹ ಮತ್ತು ಅಷ್ಟೇ ಸಂಖ್ಯೆಯ ಜಾಮೀನು ಅರ್ಜಿಗಳ ವಿಚಾರಣೆ ನಡೆಸಬೇಕೆಂಬ ತೀರ್ಮಾನಕ್ಕೆ ಬರಲಾಗಿದೆ. ಶುಕ್ರವಾರ ಬೆಳಗ್ಗೆ ದಿನದ ಕೋರ್ಟ್ ಕಲಾಪಗಳು (court proceedings) ಆರಂಭಿಸುವಾಗ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (Justice DY Chandrachud) ಅವರು ಸಮಗ್ರ ಕೋರ್ಟಿನ ನಿರ್ಣಯವನ್ನು ಪ್ರಕಟಿಸಿದರು. ಜಾಮೀನು ಅರ್ಜಿಗಳು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿರುವುದರಿಂದ ಅವುಗಳಿಗೆ ಪ್ರಾಶಸ್ತ್ಯ ನೀಡಲಾಗುವುದು ಎಂದು ನ್ಯಾಯಮೂರ್ತಿಗಳು ಹೇಳಿದರು.

ಶುಕ್ರವಾರ ಬೆಳಿಗ್ಗೆ ನಡೆದ ಸಮಗ್ರ ಕೋರ್ಟ್ ಸಭೆಯಲ್ಲಿ, ‘ಸುಪ್ರೀಮ್ ಕೋರ್ಟ್ ನಲ್ಲಿರುವ ಪೆಂಡಿಂಗ್ ಇರುವ ಸಾವಿರಾರು ಪ್ರಕರಣಗಳ ಹೊರೆ ಕಡಿಮೆ ಮಾಡಲು ಎಲ್ಲ 13 ಪೀಠಗಳು ವೈವಾಹಿಕ ಕಲಹಗಳಿಗೆ ಸಂಬಂಧಿಸಿದ ಹತ್ತು ಮನವಿ ಮತ್ತು ಜಾಮೀನು ಕೋರಿ ದಾಖಲಾಗಿರುವ ಮನವಿಗಳ ಪೈಕಿ ಹತ್ತು ಮನವಿಗಳ ವಿಚಾರಣೆ ನಡೆಸುವ ತೀರ್ಮಾನಕ್ಕೆ ಬರಲಾಗಿದೆ,’ ಎಂದು ನ್ಯಾಯಮರ್ತಿಗಳು ಹೇಳಿದರು. ‘ಪ್ರತಿದಿನ ಹತ್ತತ್ತು ವೈವಾಹಿಕ ಕಲಹ ಮತ್ತು ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನಂತರ ನಿಗದಿತ ಕೇಸುಗಳನ್ನು ಕೈಗೆತ್ತಿಕೊಳ್ಳಲಾಗುವುದು’ ಎಂದು ಹೇಳಿದ ಅವರು, ‘ಜಾಮೀನು ಅರ್ಜಿಗಳು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿರುವುದರಿಂದ ಅವುಗಳಿಗೆ ಆದ್ಯತೆ ನೀಡಲಾಗುವುದು,’ ಎಂದರು.

ವಿಚಾರಣೆಗೆ ಶೆಡ್ಯೂಲ್ ಅಗಿರುವ ಪೂರಕ ಪಟ್ಟಿಗೆ ಕೊನೆ ಕ್ಷಣಗಳಲ್ಲಿ ಸೇರಿಸಲಾಗುವ ಪ್ರಕರಣಗಳ ಸಂಖ್ಯೆಯಲ್ಲಿ ಸಹ ಕಡಿತಗೊಳಿಸಲಾಗುವುದು ಅಂತ ಮುಖ್ಯ ನ್ಯಾಯಾಧೀಶರು ಹೇಳಿದರು. ಹಾಗೆ ಮಾಡಿದಾಗಲೇ ನ್ಯಾಯಾಧೀಶರು ತಡರಾತ್ರಿಯವರೆಗೆ ವಿಚಾರಣೆ ನಡೆಸುವುದು ತಪ್ಪುತ್ತದೆ ಎಂದು ಅವರು ಹೇಳಿದರು.

‘ರಾತ್ರಿ 12 ಗಂಟೆ ಮತ್ತು ಬೆಳಗಿನ ಜಾವದವರಗೆ ವಿಚಾರಣೆಯನ್ನು ಮುಂದುವರೆಸುವ ಅನಿವಾರ್ಯತೆ ತಲೆದೋರರುತ್ತಿರುವದರಿಂದ ಹೆಚ್ಚುವರಿ ಪ್ರಕರಣಗಳ ವಿಚಾರಣೆಗಳ ನಿರ್ವಹಣೆ ಬೇಡ ಎಂದು ಎಲ್ಲ ಪೀಠಗಳ ನ್ಯಾಯಾಧೀಶರು ನನಗೆ ಮನವಿ ಮಾಡಿದರು. ಹಾಗಾಗೇ, ನಾನು ಸಪ್ಲಿಮೆಂಟರಿ ಬೋರ್ಡನ್ನು ತಗ್ಗಿಸುವ ಪ್ರಯತ್ನ ಮಾಡುತ್ತಿದ್ದೇನೆ,’ ಎಂದು ಮುಖ್ಯ ನ್ಯಾಯಾಧೀಶರು ಹೇಳಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರಿಗಿಂತ ಮೊದಲು ಭಾರತದ ಮುಖ್ಯ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಯುಯು ಲಲಿತ್ ಅವರು ಪೆಂಡಿಂಗ್ ಕೇಸುಗಳ ಹೊರೆಯನ್ನು ತಗ್ಗಿಸಲು ಹೊಸ ಲಿಸ್ಟಿಂಗ್ ಪದ್ಧತಿಯನ್ನು ಜಾರಿಗೊಳಿಸಿದ್ದರು. ಅದರಿಂದಾಗಿಯೇ ಆ 74-ದಿನಗಳ ಅವಧಿಯಲ್ಲಿ 10,000 ಕೇಸುಗಳ ಶೀಘ್ರ ವಿಲೇವಾರಿ ಸಾಧ್ಯವಾಗಿತ್ತು.

ಮತ್ತಷ್ಟು ದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ