AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ತುರ್ತು ಬಳಕೆಗೆ ಅನುಮತಿ ನಿರ್ಧಾರ ಮರುಪರಿಶೀಲಿಸಲು AIDAN ಆಗ್ರಹ

ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ಗೆ, ವೈದ್ಯಕೀಯ ಪ್ರಯೋಗ ಹಂತದಲ್ಲಿ ಹಾಗೂ ರೂಪಾಂತರಿ ಕೊರೊನಾ ವೈರಾಣು ಹರಡುತ್ತಿರುವ ಸಂದರ್ಭದಲ್ಲಿ REU ಅನುಮತಿ ನೀಡಿರುವುದು ಆಘಾತವಾಗಿದೆ ಎಂದು ಆಲ್ ಇಂಡಿಯಾ ಡ್ರಗ್ ಆಕ್ಷನ್ ನೆಟ್​ವರ್ಕ್ ಹೇಳಿದೆ.

ಕೊರೊನಾ ಲಸಿಕೆ ತುರ್ತು ಬಳಕೆಗೆ ಅನುಮತಿ ನಿರ್ಧಾರ ಮರುಪರಿಶೀಲಿಸಲು AIDAN ಆಗ್ರಹ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 06, 2022 | 11:04 PM

Share

ದೆಹಲಿ: ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿರುವ ವಿಷಯ ತಜ್ಞರ ಸಮಿತಿಯ ಕ್ರಮವನ್ನು ಮರುಪರಿಶೀಲನೆಗೆ ಒಳಪಡಿಸುವಂತೆ ಆಲ್ ಇಂಡಿಯಾ ಡ್ರಗ್ ಆಕ್ಷನ್ ನೆಟ್​ವರ್ಕ್ (AIDAN), ಔಷಧ ನಿಯಂತ್ರಕರಿಗೆ ಮನವಿ ಮಾಡಿದೆ.

ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ಗೆ, ವೈದ್ಯಕೀಯ ಪ್ರಯೋಗ ಹಂತದಲ್ಲಿ ಹಾಗೂ ರೂಪಾಂತರಿ ಕೊರೊನಾ ವೈರಾಣು ಹರಡುತ್ತಿರುವ ಸಂದರ್ಭದಲ್ಲಿ ವಿಷಯ ತಜ್ಞರ ಸಮಿತಿಯು ಅನುಮತಿ ನೀಡಿರುವುದು ಆಘಾತಕಾರಿ ಕ್ರಮವಾಗಿದೆ ಎಂದು ಆಲ್ ಇಂಡಿಯಾ ಡ್ರಗ್ ಆಕ್ಷನ್ ನೆಟ್​ವರ್ಕ್ ಹೇಳಿದೆ.

ಲಸಿಕೆಯ ಪರಿಣಾಮ ಹಾಗೂ ಪ್ರಭಾವದ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಲಸಿಕೆ ಪಡೆದ ವ್ಯಕ್ತಿಯ ನಿಯಂತ್ರಣದ ಕುರಿತಾಗಿಯೂ ವಿವರಗಳು ಇಲ್ಲ. ಕೊರೊನಾ ಲಸಿಕೆ ಪ್ರಯೋಗದ ಬಗ್ಗೆ ಪಾರದರ್ಶಕತೆ ಇಲ್ಲ. ಹೀಗಾಗಿ, ಸರಿಯಾಗಿ ಪರೀಕ್ಷೆಗೆ ಒಳಪಡದ ಕೊವಿಡ್-19 ಲಸಿಕೆಯನ್ನು ಸಾರ್ವಜನಿಕರಿಗೆ ನೀಡುವ ಬಗ್ಗೆ DCGI ಮರುಪರಿಶೀಲನೆ ನಡೆಸಬೇಕು ಎಂದು AIDAN ಹೇಳಿದೆ. ಭಾರತ್ ಬಯೋಟೆಕ್ ಹಾಗೂ ICMRನ ಮೂರನೇ ಹಂತದ ಲಸಿಕೆ ಪ್ರಯೋಗದಿಂದ, ಲಸಿಕೆ ಪಡೆದ ವ್ಯಕ್ತಿಯಲ್ಲಿ ಲಸಿಕೆಯು ಉಂಟು ಮಾಡರುವ ಪರಿಣಾಮಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದೂ AIDAN ತಿಳಿಸಿದೆ.

ಮೊದಲ ಮತ್ತು ಎರಡನೇ ಹಂತದ, 755 ಸ್ವಯಂಸೇವಕರ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗದ ಬಗ್ಗೆ ಮಾತ್ರ ಮಾಹಿತಿ ಲಭ್ಯವಿದೆ. ಮೂರನೇ ಹಂತದ ಲಸಿಕೆ ಪ್ರಯೋಗದ ಕುರಿತು ಮಾಹಿತಿಗಳು ಸಿಕ್ಕಿಲ್ಲ. ಲಸಿಕೆ ವಿಚಾರದಲ್ಲಿ ಪಾರದರ್ಶಕತೆ ಉಳಿಸಿಕೊಳ್ಳುವ ಉದ್ದೇಶದಿಂದ, ಯಾವ ಆಧಾರದ ಮೇಲೆ ಲಸಿಕೆಗೆ ಅನುಮತಿ ನೀಡಲಾಯಿತು ಎಂದು ವಿಷಯ ತಜ್ಞರ ಸಮಿತಿ ಕೂಡಲೇ ವಿಷಯ ಬಹಿರಂಗಪಡಿಸಬೇಕು ಎಂದು AIDAN ಆಗ್ರಹಿಸಿದೆ. ಯಾವ ವಿಚಾರಗಳನ್ನು ಆಧರಿಸಿ, ಪ್ರಯೋಗದ ಹಂತದಲ್ಲಿರುವ ಲಸಿಕೆಗೆ ಸಮಿತಿಯು ಅನುಮತಿ ನೀಡಿದೆ ಎಂದು ಆಲ್ ಇಂಡಿಯಾ ಡ್ರಗ್ ಆಕ್ಷನ್ ನೆಟ್​ವರ್ಕ್ ಪ್ರಶ್ನೆ ಮಾಡಿದೆ.

ಮೂರನೇ ಹಂತದಲ್ಲಿ ಕೊರೊನಾ ಲಸಿಕೆಯ ವೈದ್ಯಕೀಯ ಪ್ರಯೋಗವು ನವೆಂಬರ್ ಮಧ್ಯಭಾಗದಿಂದ ಆರಂಭವಾಗಿತ್ತು. ದೇಶದಾದ್ಯಂತ ಒಟ್ಟು 26,000 ಸ್ವಯಂಸೇವಕರನ್ನು ಲಸಿಕೆ ಪ್ರಯೋಗಕ್ಕೆ ಒಳಪಡಿಸಲು ತೀರ್ಮಾನಿಸಲಾಗಿತ್ತು. ಇದು ಕೊವಿಡ್-19 ವಿರುದ್ಧ, ದೇಶದಲ್ಲಿ ನಡೆಯುತ್ತಿರುವ ಮೊದಲ ಹಾಗೂ ಏಕೈಕ ಮೂರನೇ ಹಂತದ ಲಸಿಕೆ ಪ್ರಯೋಗ ಎಂದು ಹೈದರಾಬಾದ್ ಮೂಲದ ಕಂಪೆನಿ ಹೇಳಿಕೊಂಡಿತ್ತು. ಇಷ್ಟು ದೊಡ್ಡಮಟ್ಟದಲ್ಲಿ ಮೂರನೇ ಹಂತದ ಲಸಿಕೆಯ ಪ್ರಯೋಗವು ಭಾರತದಲ್ಲಿ ಇದುವರೆಗೆ ನಡೆದಿಲ್ಲ ಎಂದೂ ಕಂಪೆನಿ ಹೇಳಿಕೆ ನೀಡಿತ್ತು.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

Published On - 3:55 pm, Sun, 3 January 21

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?