AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೆಂದೂ ಕಂಡಿರದ ಪರಿಸ್ಥಿತಿ ಶ್ರೀಲಂಕಾದಲ್ಲಿದೆ, ಭಾರತವನ್ನು ಇದಕ್ಕೆ ಹೋಲಿಸುವುದು ಸರಿಯಲ್ಲ: ವಿದೇಶಾಂಗ ವ್ಯವಹಾರಗಳ ಸಚಿವ

ನಮ್ಮ ನೆರೆಯ ದೇಶದಲ್ಲಿ  ಇಂಥಾ ಸಮಸ್ಯೆ ಎದ್ದಿರುವಾಗ ಅದರ ಪರಿಣಾಮಗಳ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅಲ್ಲಿನ  ಪರಿಸ್ಥಿತಿ ಗಂಭೀರವಾಗಿದೆ, ಭಾರತ ಅದರ ಬಗ್ಗೆ ಚಿಂತಿಸುತ್ತಿದೆ. ಆದರೆ ಭಾರತವನ್ನು ಅದರೊಂದಿಗೆ ಹೋಲಿಸುವುದು ಸರಿಯಲ್ಲ...

ಹಿಂದೆಂದೂ ಕಂಡಿರದ ಪರಿಸ್ಥಿತಿ ಶ್ರೀಲಂಕಾದಲ್ಲಿದೆ, ಭಾರತವನ್ನು ಇದಕ್ಕೆ ಹೋಲಿಸುವುದು ಸರಿಯಲ್ಲ: ವಿದೇಶಾಂಗ ವ್ಯವಹಾರಗಳ ಸಚಿವ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 19, 2022 | 7:12 PM

Share

ದೆಹಲಿ: ಶ್ರೀಲಂಕಾದಲ್ಲಿನ ಬಿಕ್ಕಟ್ಟು (Sri Lanka Crisis) ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಕರೆದಿರುವ ಸರ್ವಪಕ್ಷಗಳ ಸಭೆ (All-party meeting) ದೆಹಲಿಯಲ್ಲಿ ನಡೆದಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar), ನಮ್ಮ ನೆರೆಯ ದೇಶದಲ್ಲಿ  ಇಂಥಾ ಸಮಸ್ಯೆ ಎದ್ದಿರುವಾಗ ಅದರ ಪರಿಣಾಮಗಳ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅಲ್ಲಿನ  ಪರಿಸ್ಥಿತಿ ಗಂಭೀರವಾಗಿದೆ, ಭಾರತ ಅದರ ಬಗ್ಗೆ ಚಿಂತಿಸುತ್ತಿದೆ. ಆದರೆ ಭಾರತವನ್ನು ಅದರೊಂದಿಗೆ ಹೋಲಿಸುವುದು ಸರಿಯಲ್ಲ ಎಂದು  ಹೇಳಿದ್ದಾರೆ. ಶ್ರೀಲಂಕಾದಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಎರಡು ದಿನಗಳ ಹಿಂದೆಯೇ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಗೆ ಕರೆ ನೀಡಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್ ವಹಿಸಬೇಕಾಗಿತ್ತು. ಆದರೆ ಇಂದು ನಡೆದ ಸಭೆಗೆ ನಿರ್ಮಲಾ ಗೈರು ಹಾಜರಾಗಿದ್ದು, ಇದಕ್ಕೆ ಜೈಶಂಕರ್ ಸಭೆಯ ಕ್ಷಮೆ ಕೇಳಿದ್ದಾರೆ. ಶ್ರೀಲಂಕಾದಲ್ಲಿ ಪರಿಸ್ಥಿತಿ ಗಂಭೀರವಾಗಿದೆ, ಹಿಂದೆಂದೂ ಕಂಡಿರದ ಪರಿಸ್ಥಿತಿ ಅಲ್ಲಿದೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿಯೇ ನಾವು ಸರ್ವಪಕ್ಷಗಳ ಸಭೆ ಕರೆದಿರುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮೀನುಗಾರಿಕೆ ಸಚಿವಾಲಯದ ಸಚಿವರು ಇಲ್ಲೇ ಇದ್ದಾರೆ. ಶ್ರೀಲಂಕಾಕ್ಕೆ ಸಂಬಂಧಪಟ್ಟಂತೆ ಮೊದಲಿಗೆ ನಮ್ಮ ಮುಂದೆ ಬರುವ ಸಮಸ್ಯೆ ಮೀನುಗಾರಿಕೆಯದ್ದು ಎಂದು ಹೇಳಿದ್ದಾರೆ.

ಶ್ರೀಲಂಕಾ ಮತ್ತು ಭಾರತದ ಬಗ್ಗೆ ಹೋಲಿಕೆ ಮಾಡುವುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಶ್ರೀಲಂಕಾದ ಪರಿಸ್ಥಿತಿಯೇ ಭಾರತಕ್ಕೂ ಆಗಲಿದೆ ಎಂದು ಹೇಳುವುದನ್ನು ಕೇಳುತ್ತಿದ್ದೇವೆ. ಈ ಹೋಲಿಕೆ ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ಪಿ ಚಿದಂಬರಂ, ವೈಎಸ್ ಆರ್ ಸಿಪಿ, ವಿಜಯಸಾಯಿ ರೆಡ್ಡಿ, ಎಐಎಡಿಎಂಕೆಯ ಎಂ ತಂಬಿದೊರೈ, ನ್ಯಾಷನಲ್ ಕಾಂಗ್ರೆಸ್ ಸಂಸದ ಫರೂಕ್ ಅಬ್ದುಲ್ಲಾ, ಡಿಎಂಕೆಯ ಟಿಆರ್ ಬಾಲು, ಎಂಡಿಎಂಕೆಯ ವೈಕೊ, ಸಿಪಿಐಯ ಬಿನೋಯ್ ವಿಶ್ವಂ ಸೇರಿದಂತೆ ವಿವಿಧ ಪಕ್ಷಗಳ ಶಾಸಕ, ಸಂಸದರು ಸಭೆಯಲ್ಲಿ ಭಾಗಿಯಾಗಿದ್ದರು.

Published On - 6:44 pm, Tue, 19 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ