AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೆಂದೂ ಕಂಡಿರದ ಪರಿಸ್ಥಿತಿ ಶ್ರೀಲಂಕಾದಲ್ಲಿದೆ, ಭಾರತವನ್ನು ಇದಕ್ಕೆ ಹೋಲಿಸುವುದು ಸರಿಯಲ್ಲ: ವಿದೇಶಾಂಗ ವ್ಯವಹಾರಗಳ ಸಚಿವ

ನಮ್ಮ ನೆರೆಯ ದೇಶದಲ್ಲಿ  ಇಂಥಾ ಸಮಸ್ಯೆ ಎದ್ದಿರುವಾಗ ಅದರ ಪರಿಣಾಮಗಳ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅಲ್ಲಿನ  ಪರಿಸ್ಥಿತಿ ಗಂಭೀರವಾಗಿದೆ, ಭಾರತ ಅದರ ಬಗ್ಗೆ ಚಿಂತಿಸುತ್ತಿದೆ. ಆದರೆ ಭಾರತವನ್ನು ಅದರೊಂದಿಗೆ ಹೋಲಿಸುವುದು ಸರಿಯಲ್ಲ...

ಹಿಂದೆಂದೂ ಕಂಡಿರದ ಪರಿಸ್ಥಿತಿ ಶ್ರೀಲಂಕಾದಲ್ಲಿದೆ, ಭಾರತವನ್ನು ಇದಕ್ಕೆ ಹೋಲಿಸುವುದು ಸರಿಯಲ್ಲ: ವಿದೇಶಾಂಗ ವ್ಯವಹಾರಗಳ ಸಚಿವ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 19, 2022 | 7:12 PM

Share

ದೆಹಲಿ: ಶ್ರೀಲಂಕಾದಲ್ಲಿನ ಬಿಕ್ಕಟ್ಟು (Sri Lanka Crisis) ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಕರೆದಿರುವ ಸರ್ವಪಕ್ಷಗಳ ಸಭೆ (All-party meeting) ದೆಹಲಿಯಲ್ಲಿ ನಡೆದಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar), ನಮ್ಮ ನೆರೆಯ ದೇಶದಲ್ಲಿ  ಇಂಥಾ ಸಮಸ್ಯೆ ಎದ್ದಿರುವಾಗ ಅದರ ಪರಿಣಾಮಗಳ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅಲ್ಲಿನ  ಪರಿಸ್ಥಿತಿ ಗಂಭೀರವಾಗಿದೆ, ಭಾರತ ಅದರ ಬಗ್ಗೆ ಚಿಂತಿಸುತ್ತಿದೆ. ಆದರೆ ಭಾರತವನ್ನು ಅದರೊಂದಿಗೆ ಹೋಲಿಸುವುದು ಸರಿಯಲ್ಲ ಎಂದು  ಹೇಳಿದ್ದಾರೆ. ಶ್ರೀಲಂಕಾದಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಎರಡು ದಿನಗಳ ಹಿಂದೆಯೇ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಗೆ ಕರೆ ನೀಡಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್ ವಹಿಸಬೇಕಾಗಿತ್ತು. ಆದರೆ ಇಂದು ನಡೆದ ಸಭೆಗೆ ನಿರ್ಮಲಾ ಗೈರು ಹಾಜರಾಗಿದ್ದು, ಇದಕ್ಕೆ ಜೈಶಂಕರ್ ಸಭೆಯ ಕ್ಷಮೆ ಕೇಳಿದ್ದಾರೆ. ಶ್ರೀಲಂಕಾದಲ್ಲಿ ಪರಿಸ್ಥಿತಿ ಗಂಭೀರವಾಗಿದೆ, ಹಿಂದೆಂದೂ ಕಂಡಿರದ ಪರಿಸ್ಥಿತಿ ಅಲ್ಲಿದೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿಯೇ ನಾವು ಸರ್ವಪಕ್ಷಗಳ ಸಭೆ ಕರೆದಿರುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮೀನುಗಾರಿಕೆ ಸಚಿವಾಲಯದ ಸಚಿವರು ಇಲ್ಲೇ ಇದ್ದಾರೆ. ಶ್ರೀಲಂಕಾಕ್ಕೆ ಸಂಬಂಧಪಟ್ಟಂತೆ ಮೊದಲಿಗೆ ನಮ್ಮ ಮುಂದೆ ಬರುವ ಸಮಸ್ಯೆ ಮೀನುಗಾರಿಕೆಯದ್ದು ಎಂದು ಹೇಳಿದ್ದಾರೆ.

ಶ್ರೀಲಂಕಾ ಮತ್ತು ಭಾರತದ ಬಗ್ಗೆ ಹೋಲಿಕೆ ಮಾಡುವುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಶ್ರೀಲಂಕಾದ ಪರಿಸ್ಥಿತಿಯೇ ಭಾರತಕ್ಕೂ ಆಗಲಿದೆ ಎಂದು ಹೇಳುವುದನ್ನು ಕೇಳುತ್ತಿದ್ದೇವೆ. ಈ ಹೋಲಿಕೆ ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ಪಿ ಚಿದಂಬರಂ, ವೈಎಸ್ ಆರ್ ಸಿಪಿ, ವಿಜಯಸಾಯಿ ರೆಡ್ಡಿ, ಎಐಎಡಿಎಂಕೆಯ ಎಂ ತಂಬಿದೊರೈ, ನ್ಯಾಷನಲ್ ಕಾಂಗ್ರೆಸ್ ಸಂಸದ ಫರೂಕ್ ಅಬ್ದುಲ್ಲಾ, ಡಿಎಂಕೆಯ ಟಿಆರ್ ಬಾಲು, ಎಂಡಿಎಂಕೆಯ ವೈಕೊ, ಸಿಪಿಐಯ ಬಿನೋಯ್ ವಿಶ್ವಂ ಸೇರಿದಂತೆ ವಿವಿಧ ಪಕ್ಷಗಳ ಶಾಸಕ, ಸಂಸದರು ಸಭೆಯಲ್ಲಿ ಭಾಗಿಯಾಗಿದ್ದರು.

Published On - 6:44 pm, Tue, 19 July 22

IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್