AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೆಂದೂ ಕಂಡಿರದ ಪರಿಸ್ಥಿತಿ ಶ್ರೀಲಂಕಾದಲ್ಲಿದೆ, ಭಾರತವನ್ನು ಇದಕ್ಕೆ ಹೋಲಿಸುವುದು ಸರಿಯಲ್ಲ: ವಿದೇಶಾಂಗ ವ್ಯವಹಾರಗಳ ಸಚಿವ

ನಮ್ಮ ನೆರೆಯ ದೇಶದಲ್ಲಿ  ಇಂಥಾ ಸಮಸ್ಯೆ ಎದ್ದಿರುವಾಗ ಅದರ ಪರಿಣಾಮಗಳ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅಲ್ಲಿನ  ಪರಿಸ್ಥಿತಿ ಗಂಭೀರವಾಗಿದೆ, ಭಾರತ ಅದರ ಬಗ್ಗೆ ಚಿಂತಿಸುತ್ತಿದೆ. ಆದರೆ ಭಾರತವನ್ನು ಅದರೊಂದಿಗೆ ಹೋಲಿಸುವುದು ಸರಿಯಲ್ಲ...

ಹಿಂದೆಂದೂ ಕಂಡಿರದ ಪರಿಸ್ಥಿತಿ ಶ್ರೀಲಂಕಾದಲ್ಲಿದೆ, ಭಾರತವನ್ನು ಇದಕ್ಕೆ ಹೋಲಿಸುವುದು ಸರಿಯಲ್ಲ: ವಿದೇಶಾಂಗ ವ್ಯವಹಾರಗಳ ಸಚಿವ
TV9 Web
| Edited By: |

Updated on:Jul 19, 2022 | 7:12 PM

Share

ದೆಹಲಿ: ಶ್ರೀಲಂಕಾದಲ್ಲಿನ ಬಿಕ್ಕಟ್ಟು (Sri Lanka Crisis) ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಕರೆದಿರುವ ಸರ್ವಪಕ್ಷಗಳ ಸಭೆ (All-party meeting) ದೆಹಲಿಯಲ್ಲಿ ನಡೆದಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar), ನಮ್ಮ ನೆರೆಯ ದೇಶದಲ್ಲಿ  ಇಂಥಾ ಸಮಸ್ಯೆ ಎದ್ದಿರುವಾಗ ಅದರ ಪರಿಣಾಮಗಳ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅಲ್ಲಿನ  ಪರಿಸ್ಥಿತಿ ಗಂಭೀರವಾಗಿದೆ, ಭಾರತ ಅದರ ಬಗ್ಗೆ ಚಿಂತಿಸುತ್ತಿದೆ. ಆದರೆ ಭಾರತವನ್ನು ಅದರೊಂದಿಗೆ ಹೋಲಿಸುವುದು ಸರಿಯಲ್ಲ ಎಂದು  ಹೇಳಿದ್ದಾರೆ. ಶ್ರೀಲಂಕಾದಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಎರಡು ದಿನಗಳ ಹಿಂದೆಯೇ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಗೆ ಕರೆ ನೀಡಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್ ವಹಿಸಬೇಕಾಗಿತ್ತು. ಆದರೆ ಇಂದು ನಡೆದ ಸಭೆಗೆ ನಿರ್ಮಲಾ ಗೈರು ಹಾಜರಾಗಿದ್ದು, ಇದಕ್ಕೆ ಜೈಶಂಕರ್ ಸಭೆಯ ಕ್ಷಮೆ ಕೇಳಿದ್ದಾರೆ. ಶ್ರೀಲಂಕಾದಲ್ಲಿ ಪರಿಸ್ಥಿತಿ ಗಂಭೀರವಾಗಿದೆ, ಹಿಂದೆಂದೂ ಕಂಡಿರದ ಪರಿಸ್ಥಿತಿ ಅಲ್ಲಿದೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿಯೇ ನಾವು ಸರ್ವಪಕ್ಷಗಳ ಸಭೆ ಕರೆದಿರುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಮೀನುಗಾರಿಕೆ ಸಚಿವಾಲಯದ ಸಚಿವರು ಇಲ್ಲೇ ಇದ್ದಾರೆ. ಶ್ರೀಲಂಕಾಕ್ಕೆ ಸಂಬಂಧಪಟ್ಟಂತೆ ಮೊದಲಿಗೆ ನಮ್ಮ ಮುಂದೆ ಬರುವ ಸಮಸ್ಯೆ ಮೀನುಗಾರಿಕೆಯದ್ದು ಎಂದು ಹೇಳಿದ್ದಾರೆ.

ಶ್ರೀಲಂಕಾ ಮತ್ತು ಭಾರತದ ಬಗ್ಗೆ ಹೋಲಿಕೆ ಮಾಡುವುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಶ್ರೀಲಂಕಾದ ಪರಿಸ್ಥಿತಿಯೇ ಭಾರತಕ್ಕೂ ಆಗಲಿದೆ ಎಂದು ಹೇಳುವುದನ್ನು ಕೇಳುತ್ತಿದ್ದೇವೆ. ಈ ಹೋಲಿಕೆ ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ಪಿ ಚಿದಂಬರಂ, ವೈಎಸ್ ಆರ್ ಸಿಪಿ, ವಿಜಯಸಾಯಿ ರೆಡ್ಡಿ, ಎಐಎಡಿಎಂಕೆಯ ಎಂ ತಂಬಿದೊರೈ, ನ್ಯಾಷನಲ್ ಕಾಂಗ್ರೆಸ್ ಸಂಸದ ಫರೂಕ್ ಅಬ್ದುಲ್ಲಾ, ಡಿಎಂಕೆಯ ಟಿಆರ್ ಬಾಲು, ಎಂಡಿಎಂಕೆಯ ವೈಕೊ, ಸಿಪಿಐಯ ಬಿನೋಯ್ ವಿಶ್ವಂ ಸೇರಿದಂತೆ ವಿವಿಧ ಪಕ್ಷಗಳ ಶಾಸಕ, ಸಂಸದರು ಸಭೆಯಲ್ಲಿ ಭಾಗಿಯಾಗಿದ್ದರು.

Published On - 6:44 pm, Tue, 19 July 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ