AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಿಯಲ್ಲಿ ಸಿಲುಕಿರುವ ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ: ಕೇಂದ್ರ ಸರ್ಕಾರ

ಸುಮಿಯಿಂದ ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ಹೊರತರಲು ನಮಗೆ ಸಾಧ್ಯವಾಗಿದೆ ಎಂದು ತಿಳಿಸಲು ಸಂತೋಷವಾಗಿದೆ. ಅವರು ಪ್ರಸ್ತುತ ಪೋಲ್ಟವಾ ಮಾರ್ಗದಲ್ಲಿದ್ದಾರೆ, ಅಲ್ಲಿಂದ ಅವರು ಪಶ್ಚಿಮ ಉಕ್ರೇನ್‌ಗೆ ರೈಲುಗಳನ್ನು ಹತ್ತುತ್ತಾರೆ. ಅವರನ್ನು ಮನೆಗೆ ಕರೆತರಲು ಆಪರೇಷನ್ ಗಂಗಾ ಅಡಿಯಲ್ಲಿ ವಿಮಾನಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಸುಮಿಯಲ್ಲಿ ಸಿಲುಕಿರುವ ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ: ಕೇಂದ್ರ ಸರ್ಕಾರ
ಭಾರತೀಯ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Mar 08, 2022 | 8:08 PM

Share

ಉಕ್ರೇನ್‌ನ ಸುಮಿ (Sumy) ನಗರದಲ್ಲಿ ಸಿಲುಕಿದ್ದ ಎಲ್ಲ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (Ministry of External Affairs) ಮಂಗಳವಾರ ತಿಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ಸುಮಿಯಿಂದ ಹೊರಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಪೋಲ್ಟವಾಗೆ ಹೋಗುತ್ತಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ನಂತರ ಪಶ್ಚಿಮ ಉಕ್ರೇನ್‌ಗೆ ರೈಲುಗಳನ್ನು ಹತ್ತುತ್ತಾರೆ. ‘ಆಪರೇಷನ್ ಗಂಗಾ’ ಅಡಿಯಲ್ಲಿ ವಿಶೇಷ ವಿಮಾನಗಳಲ್ಲಿ ಅವರನ್ನು ಮನೆಗೆ ಕರೆತರಲಾಗುತ್ತದೆ ಎಂದು ಹೇಳಿದ್ದಾರೆ.  ಸುಮಿಯಿಂದ ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ಹೊರತರಲು ನಮಗೆ ಸಾಧ್ಯವಾಗಿದೆ ಎಂದು ತಿಳಿಸಲು ಸಂತೋಷವಾಗಿದೆ. ಅವರು ಪ್ರಸ್ತುತ ಪೋಲ್ಟವಾ ಮಾರ್ಗದಲ್ಲಿದ್ದಾರೆ, ಅಲ್ಲಿಂದ ಅವರು ಪಶ್ಚಿಮ ಉಕ್ರೇನ್‌ಗೆ ರೈಲುಗಳನ್ನು ಹತ್ತುತ್ತಾರೆ. ಅವರನ್ನು ಮನೆಗೆ ಕರೆತರಲು ಆಪರೇಷನ್ ಗಂಗಾ ಅಡಿಯಲ್ಲಿ ವಿಮಾನಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಬಾಗ್ಚಿ ಟ್ವೀಟ್ ಮಾಡಿದ್ದಾರೆ. ಏತನ್ಮಧ್ಯೆ, ಕೀವ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಮಂಗಳವಾರ ಮಾಸ್ಕೋ ಸಮಯ ಬೆಳಗ್ಗೆ 10 ಗಂಟೆಗೆ (ಮಧ್ಯಾಹ್ನ 12.30 IST) ರೈಲುಗಳ, ವಾಹನಗಳು ಅಥವಾ ಲಭ್ಯವಿರುವ ಯಾವುದೇ ಸಾರಿಗೆಯನ್ನು ಬಳಸಿಕೊಂಡು ದೇಶವನ್ನು ತೊರೆಯಲು ಭಾರತೀಯ ನಾಗರಿಕರಿಗೆ ಸಲಹೆ ನೀಡಿದೆ.

ಏತನ್ಮಧ್ಯೆ, ಕೀವ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಮಂಗಳವಾರ ಮಾಸ್ಕೋ ಸಮಯ ಬೆಳಗ್ಗೆ 10 ಗಂಟೆಗೆ (ಮಧ್ಯಾಹ್ನ 12.30 IST) ರೈಲುಗಳ, ವಾಹನಗಳು ಅಥವಾ ಲಭ್ಯವಿರುವ ಯಾವುದೇ ಸಾರಿಗೆಯನ್ನು ಬಳಸಿಕೊಂಡು ದೇಶವನ್ನು ತೊರೆಯಲು ಭಾರತೀಯ ನಾಗರಿಕರಿಗೆ ಸಲಹೆ ನೀಡಿದೆ.

ಹೊಸ ಸಲಹೆಯಲ್ಲಿ ಭಾರತೀಯ ರಾಯಭಾರ ಕಚೇರಿಯು, “ಸಿಲುಕಿರುವ ಜನರನ್ನು ಸ್ಥಳಾಂತರಿಸಲು ಮಾನವೀಯ ಕಾರಿಡಾರ್ ಅನ್ನು ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಮಾರ್ಚ್ 8, 2022 ರಂದು (ಸ್ಥಳೀಯ ಸಮಯ) 10.00 ಗಂಟೆಗಳಿಂದ ಘೋಷಿಸಲಾಗಿದೆ. ಭದ್ರತಾ ಪರಿಸ್ಥಿತಿಯನ್ನು ಪರಿಗಣಿಸಿ, ಮುಂದಿನ ಮಾನವೀಯತೆಯ ಸ್ಥಾಪನೆ ಕಾರಿಡಾರ್ ಅನಿಶ್ಚಿತವಾಗಿದೆ.” ಹಾಗಾಗಿ ಮುಂದಿನ ಮಾನವೀಯ ಕಾರಿಡಾರ್ ಬಗ್ಗೆ ಯಾವುದೇ ಖಚಿತತೆ ಇಲ್ಲದಿರುವುದರಿಂದ ರಾಯಭಾರ ಕಚೇರಿ ಜನರನ್ನು ತಕ್ಷಣವೇ ತೊರೆಯುವಂತೆ ಒತ್ತಾಯಿಸಿತ್ತು.

ಸುಮಿ ರಷ್ಯಾದ ಗಡಿಯ ಸಮೀಪದಲ್ಲಿದೆ ಮತ್ತು ಉಕ್ರೇನಿಯನ್ ರಾಜಧಾನಿ ಕೀವ್ ನಿಂದ ಪೂರ್ವಕ್ಕೆ 350 ಕಿಮೀ ದೂರದಲ್ಲಿದೆ. ಇಂದು ನಗರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.

ಹಲವು ದಿನಗಳಿಂದ ತೆರವಿಗೆ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಶನಿವಾರದಂದು, ಕೊರೆಯುವ ಚಳಿ, ಖಾಲಿಯಾಗುತ್ತಿರುವ ಆಹಾರ ಮತ್ತು ನೀರಿನ ಪೂರೈಕೆಯನ್ನು ನಿಭಾಯಿಸಲು ಸಾಧ್ಯವಾಗದೆ, ವಿದ್ಯಾರ್ಥಿಗಳು 50 ಕಿಮೀ ದೂರದಲ್ಲಿರುವ ರಷ್ಯಾದ ಗಡಿಗೆ ಅಪಾಯಕಾರಿ ಪ್ರಯಾಣವನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ ಎಂದು ವಿಡಿಯೊಗಳನ್ನು ಹಂಚಿಕೊಂಡಿದ್ದರು. ಈ ವೇಳೆ ಸರ್ಕಾರ ಅವರನ್ನು ಸಂಪರ್ಕಿಸಿ “ಅನಗತ್ಯ ಅಪಾಯಗಳನ್ನು ತಪ್ಪಿಸಿ” ಎಂದು ಕೇಳಿಕೊಂಡಿತು.

ರಷ್ಯಾ ಮತ್ತು ಬೆಲಾರಸ್‌ಗೆ ಮಾನವೀಯ ಕಾರಿಡಾರ್‌ಗಾಗಿ ರಷ್ಯಾದ ಯೋಜನೆಯನ್ನು ಉಕ್ರೇನ್ ತಿರಸ್ಕರಿಸಿದ್ದರಿಂದ ನಿನ್ನೆ ಅವರನ್ನು ಸ್ಥಳಾಂತರಿಸುವ ಯೋಜನೆಯು ವಿಫಲವಾಗಿತ್ತು.

ಇದನ್ನೂ ಓದಿ:Video: ಯುದ್ಧ ವಲಯ ಸುಮಿಯಿಂದ ಬಸ್​ ವ್ಯವಸ್ಥೆ ಮಾಡಿದ ಉಕ್ರೇನ್ ಸರ್ಕಾರ; 694 ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ಪ್ರಾರಂಭ

Published On - 7:25 pm, Tue, 8 March 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​