AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ: ಗುಜರಾತ್ ಕೋರ್ಟ್

ಗೋವಿನ ಸಗಣಿಯಿಂದ ಮಾಡಿದ ಮನೆಗಳು ಪರಮಾಣು ವಿಕಿರಣದಿಂದ ಪ್ರಭಾವಿತವಾಗಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ. ಗೋಮೂತ್ರದ ಬಳಕೆಯು ಅನೇಕ ಗುಣಪಡಿಸಲಾಗದ ಕಾಯಿಲೆಗಳಿಗೆ ಪರಿಹಾರವಾಗಿದೆ ಎಂದ ನ್ಯಾಯಾಧೀಶರು ಗೋವಿನಿಂದ ಧರ್ಮ ಹುಟ್ಟುತ್ತದೆ ಎಂದಿದ್ದಾರೆ

ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ: ಗುಜರಾತ್ ಕೋರ್ಟ್
ಗೋವು
TV9 Web
| Edited By: |

Updated on:Jan 22, 2023 | 9:42 PM

Share

ದೆಹಲಿ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ (transporting cattle) ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ಗುಜರಾತ್‌ನ ನ್ಯಾಯಾಲಯವು (Gujarat Court) ಗೋಹತ್ಯೆಯ (cow slaughter) ಕುರಿತು ಕೆಲವು ಕುತೂಹಲಕಾರಿ ಅವಲೋಕನಗಳನ್ನು ಮಾಡಿದೆ. “ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ” ಎಂದು ತಾಪಿ ಜಿಲ್ಲಾ ನ್ಯಾಯಾಲಯದ ಪ್ರಿನ್ಸಿಪಲ್ ಡಿಸ್ಟ್ರಿಕ್ ಜಡ್ಜ್ ಸಮೀರ್ ವಿನೋದಚಂದ್ರ ವ್ಯಾಸ್ ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ. ಸಮೀರ್ ವಿನೋದಚಂದ್ರ ವ್ಯಾಸ್ ಅವರು “ಹಸುವಿನ ಸಗಣಿಯಿಂದ ಮಾಡಿದ ಮನೆಗಳು  ವಿಕಿರಣದಿಂದ ಪ್ರಭಾವಿತವಾಗುವುದಿಲ್ಲ” ಮತ್ತು ಗೋಮೂತ್ರ ಬಳಕೆಯು “ಅನೇಕ ಗುಣಪಡಿಸಲಾಗದ ರೋಗಗಳಿಗೆ ಚಿಕಿತ್ಸೆ” ಎಂದು ಹೇಳಿದರು. “ಗೋವಿನ ಸಗಣಿಯಿಂದ ಮಾಡಿದ ಮನೆಗಳು ಪರಮಾಣು ವಿಕಿರಣದಿಂದ ಪ್ರಭಾವಿತವಾಗಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ. ಗೋಮೂತ್ರದ ಬಳಕೆಯು ಅನೇಕ ಗುಣಪಡಿಸಲಾಗದ ಕಾಯಿಲೆಗಳಿಗೆ ಪರಿಹಾರವಾಗಿದೆ ಎಂದ ನ್ಯಾಯಾಧೀಶರು ಗೋವಿನಿಂದ ಧರ್ಮ ಹುಟ್ಟುತ್ತದೆ ಎಂದಿದ್ದಾರೆ.

ಅಂದಹಾಗೆ  ನ್ಯಾಯಾಧೀಶರ ಈ ಹೇಳಿಕೆಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ.

ನವೆಂಬರ್‌ನಲ್ಲಿ ಅಂಗೀಕರಿಸಿದ ಆದೇಶವು ಗೋಸಂರಕ್ಷಣೆಯ ಸುತ್ತಲಿನ ಎಲ್ಲಾ ಚರ್ಚೆಗಳನ್ನು ಕಾರ್ಯರೂಪಕ್ಕೆ ತರದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಗೋವು ಕೇವಲ ಪ್ರಾಣಿ ಮಾತ್ರವಲ್ಲ ತಾಯಿ. ಗೋವು 68 ಕೋಟಿ ಪವಿತ್ರ ಸ್ಥಳಗಳು ಮತ್ತು 33 ಕೋಟಿ ದೇವರುಗಳ ಜೀವಂತ ಗ್ರಹವಾಗಿದೆ. ಇಡೀ ಬ್ರಹ್ಮಾಂಡದ ಮೇಲೆ ಗೋವಿನ ಬಾಧ್ಯತೆ ವಿವರಣೆಯನ್ನು ನಿರಾಕರಿಸುತ್ತದೆ. ನ್ಯಾಯಾಲಯವು ವಿವಿಧ ಶ್ಲೋಕಗಳನ್ನು ಉಲ್ಲೇಖಿಸಿದ್ದು “ಗೋವುಗಳನ್ನು ಅತೃಪ್ತಿಗೊಳಿಸಿದರೆ ನಮ್ಮ ಸಂಪತ್ತು ಮತ್ತು ಆಸ್ತಿ ಕಣ್ಮರೆಯಾಗುತ್ತದೆ” ಎಂದು ಹೇಳಿದೆ.

ನ್ಯಾಯಾಧೀಶರು ಗೋಹತ್ಯೆಗೂ ಹವಾಮಾನ ಬದಲಾವಣೆಗೂ ಸಂಬಂಧ ಕಲ್ಪಿಸಿದ್ದಾರೆ. ಇಂದು ಅಸ್ತಿತ್ವದಲ್ಲಿರುವ ಸಮಸ್ಯೆಗಳು ಸಿಡುಕುತನ ಮತ್ತು ಕೋಪದ ಹೆಚ್ಚಳದಿಂದ ಉಂಟಾಗಿವೆ. ಹೆಚ್ಚಳಕ್ಕೆ ಏಕೈಕ ಕಾರಣವೆಂದರೆ ಗೋಹತ್ಯೆ. ಇದನ್ನು ಸಂಪೂರ್ಣವಾಗಿ ನಿಷೇಧಿಸುವವರೆಗೆ ಸಾತ್ವಿಕ ಹವಾಮಾನ ಬದಲಾವಣೆಯು ಅದರ ಪರಿಣಾಮವನ್ನು ಬೀರುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ 16 ಕ್ಕೂ ಹೆಚ್ಚು ಹಸುಗಳನ್ನು ಅಕ್ರಮವಾಗಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಈ ವ್ಯಕ್ತಿಗೆ ಜೀವಾವಧಿ ಶಿಕ್ಷೆಯ ಜೊತೆಗೆ ₹ 5 ಲಕ್ಷ ದಂಡವನ್ನೂ ವಿಧಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:37 pm, Sun, 22 January 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!