AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ: ಗುಜರಾತ್ ಕೋರ್ಟ್

ಗೋವಿನ ಸಗಣಿಯಿಂದ ಮಾಡಿದ ಮನೆಗಳು ಪರಮಾಣು ವಿಕಿರಣದಿಂದ ಪ್ರಭಾವಿತವಾಗಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ. ಗೋಮೂತ್ರದ ಬಳಕೆಯು ಅನೇಕ ಗುಣಪಡಿಸಲಾಗದ ಕಾಯಿಲೆಗಳಿಗೆ ಪರಿಹಾರವಾಗಿದೆ ಎಂದ ನ್ಯಾಯಾಧೀಶರು ಗೋವಿನಿಂದ ಧರ್ಮ ಹುಟ್ಟುತ್ತದೆ ಎಂದಿದ್ದಾರೆ

ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ: ಗುಜರಾತ್ ಕೋರ್ಟ್
ಗೋವು
TV9 Web
| Edited By: |

Updated on:Jan 22, 2023 | 9:42 PM

Share

ದೆಹಲಿ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ (transporting cattle) ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ಗುಜರಾತ್‌ನ ನ್ಯಾಯಾಲಯವು (Gujarat Court) ಗೋಹತ್ಯೆಯ (cow slaughter) ಕುರಿತು ಕೆಲವು ಕುತೂಹಲಕಾರಿ ಅವಲೋಕನಗಳನ್ನು ಮಾಡಿದೆ. “ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ” ಎಂದು ತಾಪಿ ಜಿಲ್ಲಾ ನ್ಯಾಯಾಲಯದ ಪ್ರಿನ್ಸಿಪಲ್ ಡಿಸ್ಟ್ರಿಕ್ ಜಡ್ಜ್ ಸಮೀರ್ ವಿನೋದಚಂದ್ರ ವ್ಯಾಸ್ ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ. ಸಮೀರ್ ವಿನೋದಚಂದ್ರ ವ್ಯಾಸ್ ಅವರು “ಹಸುವಿನ ಸಗಣಿಯಿಂದ ಮಾಡಿದ ಮನೆಗಳು  ವಿಕಿರಣದಿಂದ ಪ್ರಭಾವಿತವಾಗುವುದಿಲ್ಲ” ಮತ್ತು ಗೋಮೂತ್ರ ಬಳಕೆಯು “ಅನೇಕ ಗುಣಪಡಿಸಲಾಗದ ರೋಗಗಳಿಗೆ ಚಿಕಿತ್ಸೆ” ಎಂದು ಹೇಳಿದರು. “ಗೋವಿನ ಸಗಣಿಯಿಂದ ಮಾಡಿದ ಮನೆಗಳು ಪರಮಾಣು ವಿಕಿರಣದಿಂದ ಪ್ರಭಾವಿತವಾಗಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ. ಗೋಮೂತ್ರದ ಬಳಕೆಯು ಅನೇಕ ಗುಣಪಡಿಸಲಾಗದ ಕಾಯಿಲೆಗಳಿಗೆ ಪರಿಹಾರವಾಗಿದೆ ಎಂದ ನ್ಯಾಯಾಧೀಶರು ಗೋವಿನಿಂದ ಧರ್ಮ ಹುಟ್ಟುತ್ತದೆ ಎಂದಿದ್ದಾರೆ.

ಅಂದಹಾಗೆ  ನ್ಯಾಯಾಧೀಶರ ಈ ಹೇಳಿಕೆಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ.

ನವೆಂಬರ್‌ನಲ್ಲಿ ಅಂಗೀಕರಿಸಿದ ಆದೇಶವು ಗೋಸಂರಕ್ಷಣೆಯ ಸುತ್ತಲಿನ ಎಲ್ಲಾ ಚರ್ಚೆಗಳನ್ನು ಕಾರ್ಯರೂಪಕ್ಕೆ ತರದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಗೋವು ಕೇವಲ ಪ್ರಾಣಿ ಮಾತ್ರವಲ್ಲ ತಾಯಿ. ಗೋವು 68 ಕೋಟಿ ಪವಿತ್ರ ಸ್ಥಳಗಳು ಮತ್ತು 33 ಕೋಟಿ ದೇವರುಗಳ ಜೀವಂತ ಗ್ರಹವಾಗಿದೆ. ಇಡೀ ಬ್ರಹ್ಮಾಂಡದ ಮೇಲೆ ಗೋವಿನ ಬಾಧ್ಯತೆ ವಿವರಣೆಯನ್ನು ನಿರಾಕರಿಸುತ್ತದೆ. ನ್ಯಾಯಾಲಯವು ವಿವಿಧ ಶ್ಲೋಕಗಳನ್ನು ಉಲ್ಲೇಖಿಸಿದ್ದು “ಗೋವುಗಳನ್ನು ಅತೃಪ್ತಿಗೊಳಿಸಿದರೆ ನಮ್ಮ ಸಂಪತ್ತು ಮತ್ತು ಆಸ್ತಿ ಕಣ್ಮರೆಯಾಗುತ್ತದೆ” ಎಂದು ಹೇಳಿದೆ.

ನ್ಯಾಯಾಧೀಶರು ಗೋಹತ್ಯೆಗೂ ಹವಾಮಾನ ಬದಲಾವಣೆಗೂ ಸಂಬಂಧ ಕಲ್ಪಿಸಿದ್ದಾರೆ. ಇಂದು ಅಸ್ತಿತ್ವದಲ್ಲಿರುವ ಸಮಸ್ಯೆಗಳು ಸಿಡುಕುತನ ಮತ್ತು ಕೋಪದ ಹೆಚ್ಚಳದಿಂದ ಉಂಟಾಗಿವೆ. ಹೆಚ್ಚಳಕ್ಕೆ ಏಕೈಕ ಕಾರಣವೆಂದರೆ ಗೋಹತ್ಯೆ. ಇದನ್ನು ಸಂಪೂರ್ಣವಾಗಿ ನಿಷೇಧಿಸುವವರೆಗೆ ಸಾತ್ವಿಕ ಹವಾಮಾನ ಬದಲಾವಣೆಯು ಅದರ ಪರಿಣಾಮವನ್ನು ಬೀರುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ 16 ಕ್ಕೂ ಹೆಚ್ಚು ಹಸುಗಳನ್ನು ಅಕ್ರಮವಾಗಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಈ ವ್ಯಕ್ತಿಗೆ ಜೀವಾವಧಿ ಶಿಕ್ಷೆಯ ಜೊತೆಗೆ ₹ 5 ಲಕ್ಷ ದಂಡವನ್ನೂ ವಿಧಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:37 pm, Sun, 22 January 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್