AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗಾತಿ ಸಹರಿಸದಿದ್ದರೆ ದೈಹಿಕ ವಾಂಛೆ ತೀರಿಸಲು ಎಲ್ಲಿಗೆ ಹೋಗಬೇಕು?: ಎಫ್‌ಐಆರ್ ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್

ಪ್ರಕರಣದ ಪ್ರಾಥಮಿಕ ಆರೋಪಗಳು ದಂಪತಿಗಳ ಲೈಂಗಿಕ ಸಂಬಂಧ ಮತ್ತು ಕೆಲವು ಲೈಂಗಿಕ ಕ್ರಿಯೆಗಳಿಗೆ ಪತ್ನಿಯ ನಿರಾಕರಣೆಯ ಸುತ್ತ ಕೇಂದ್ರೀಕೃತವಾಗಿವೆ. ಈ ಆರೋಪಗಳು ವರದಕ್ಷಿಣೆ ಕಿರುಕುಳವನ್ನು ಸೂಚಿಸುವುದಿಲ್ಲ. ದಂಪತಿಗಳ ನಡುವಿನ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಹೆಚ್ಚು ಸೂಚಿಸುತ್ತವೆ ಎಂದು ಹೈಕೋರ್ಟ್ ಹೇಳಿದೆ.

ಸಂಗಾತಿ ಸಹರಿಸದಿದ್ದರೆ ದೈಹಿಕ ವಾಂಛೆ ತೀರಿಸಲು ಎಲ್ಲಿಗೆ ಹೋಗಬೇಕು?: ಎಫ್‌ಐಆರ್ ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್
ಅಲಹಾಬಾದ್ ಹೈಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Oct 12, 2024 | 5:00 PM

Share

ದೆಹಲಿ ಅಕ್ಟೋಬರ್ 12: ವ್ಯಕ್ತಿಯೊಬ್ಬರ ವಿರುದ್ಧದ ವರದಕ್ಷಿಣೆ ಆರೋಪಗಳನ್ನು ರದ್ದುಗೊಳಿದ ಅಲಹಾಬಾದ್ ಹೈಕೋರ್ಟ್ (Allahabad HC) ಈ ಆರೋಪಗಳು ವೈಯಕ್ತಿಕ ವಿವಾದಗಳಿಂದ ಪ್ರೇರೇಪಿಸಲ್ಪಟ್ಟಿರಬಹುದು ಎಂದು ತೀರ್ಪು ನೀಡಿತು. “ನೈತಿಕವಾಗಿ ಸುಸಂಸ್ಕೃತ ಸಮಾಜದಲ್ಲಿ  ಸಂಗಾತಿ ಸಹಕರಿಸದೇ ಇದ್ದರೆ ದೈಹಿಕ ವಾಂಛೆ ತೀರಿಸಲು ಒಬ್ಬರು ಎಲ್ಲಿಗೆ ಹೋಗುತ್ತಾರೆ” ಎಂದು ನ್ಯಾಯಾಲಯ ಕೇಳಿದೆ. ನ್ಯಾಯಮೂರ್ತಿ ಅನೀಶ್ ಕುಮಾರ್ ಗುಪ್ತಾ ಅವರು ಪ್ರಾಂಜಲ್ ಶುಕ್ಲಾ ಮತ್ತು ಇತರ ಇಬ್ಬರ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದರು. ಎಫ್‌ಐಆರ್‌ನಲ್ಲಿ ಪ್ರಸ್ತುತಪಡಿಸಿದ ಸಾಕ್ಷ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಗಳು ವರದಕ್ಷಿಣೆ ಕಿರುಕುಳದ ಆರೋಪಗಳನ್ನು ಬೆಂಬಲಿಸುವುದಿಲ್ಲ ಎಂದು ಕಂಡುಕೊಂಡರು.

ಪ್ರಕರಣದ ಪ್ರಾಥಮಿಕ ಆರೋಪಗಳು ದಂಪತಿಗಳ ಲೈಂಗಿಕ ಸಂಬಂಧ ಮತ್ತು ಕೆಲವು ಲೈಂಗಿಕ ಕ್ರಿಯೆಗಳಿಗೆ ಪತ್ನಿಯ ನಿರಾಕರಣೆಯ ಸುತ್ತ ಕೇಂದ್ರೀಕೃತವಾಗಿವೆ. ಈ ಆರೋಪಗಳು ವರದಕ್ಷಿಣೆ ಕಿರುಕುಳವನ್ನು ಸೂಚಿಸುವುದಿಲ್ಲ. ದಂಪತಿಗಳ ನಡುವಿನ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಹೆಚ್ಚು ಸೂಚಿಸುತ್ತವೆ ಎಂದು ಹೈಕೋರ್ಟ್ ಹೇಳಿದೆ.

“ಕಕ್ಷಿದಾರರ ನಡುವಿನ ವಿವಾದವು ಕಕ್ಷಿದಾರರ ಲೈಂಗಿಕ ವೈಮನಸ್ಸಿಗೆ ಸಂಬಂಧಿಸಿದಂತೆ ವಿವಾದವಾಗಿದೆ ಎಂಬುದು ಸ್ಪಷ್ಟವಾಗಿದೆ. ಈ ವಿವಾದದ ಕಾರಣದಿಂದಾಗಿ ವರದಕ್ಷಿಣೆಯ ಬೇಡಿಕೆಗೆ ಸಂಬಂಧಿಸಿದಂತೆ ಮಹಿಳೆ ಸುಳ್ಳು ಮತ್ತು ಸಂಯೋಜಿತ ಆರೋಪಗಳನ್ನು ಮಾಡಿದ್ದು ತ್ವರಿತ ಎಫ್ಐಆರ್ ಅನ್ನು ದಾಖಲಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

“ಒಬ್ಬ ಪುರುಷನು ತನ್ನ ಹೆಂಡತಿಯ ದೇಹ ಸಂಪರ್ಕಕ್ಕೆ ಬಯಸಿದರೆ ಅಥವಾ ಅದೇ ರೀತಿ ಆಕೆ ಬಯಸಿದಾಗ ಅದು ನಿರಾಕರಿಸಲ್ಪಟ್ಟರೆ, ನೈತಿಕವಾಗಿ ಸುಸಂಸ್ಕೃತ ಸಮಾಜದಲ್ಲಿ ಅವರು ತಮ್ಮ ದೈಹಿಕ ವಾಂಛೆ ಪೂರೈಸಲು ಎಲ್ಲಿಗೆ ಹೋಗುತ್ತಾರೆ?” ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಅರ್ಜಿದಾರರಾದ ಮೀನಾ ಶುಕ್ಲಾ ಅವರು ತಮ್ಮ ಪತಿ ಪ್ರಾಂಜಲ್ ಶುಕ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ತನ್ನ ಪತಿ ಅಸ್ವಾಭಾವಿಕ ಲೈಂಗಿಕತೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ಅಶ್ಲೀಲ ಚಿತ್ರಗಳನ್ನು ವೀಕ್ಷಿಸಲು ಬಲವಂತವಾಗಿ ಮಾಡುತ್ತಿದ್ದರು ಎಂದು ಆಕೆ ಆರೋಪಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ಪ್ರಾಂಜಲ್ ಅಶ್ಲೀಲ ಚಿತ್ರಗಳನ್ನು ನೋಡುತ್ತಿದ್ದರು. ತನ್ನ ಹೆಂಡತಿಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯಿಸುತ್ತಿದ್ದರು. ಆಕೆ ಇದನ್ನು ಆಕ್ಷೇಪಿಸಿದಾಗ, ಅವನು ಅವಳ ಆಕ್ಷೇಪಣೆಗಳಿಗೆ ಯಾವುದೇ ಗಮನ ನೀಡಲಿಲ್ಲ ಎಂದು ಆರೋಪಿಸಿದ್ದು ಅರ್ಜಿದಾರರು ಪತ್ನಿಯನ್ನು ಬಿಟ್ಟು ಒಂಟಿಯಾಗಿ ಸಿಂಗಾಪುರಕ್ಕೆ ಹೋಗಿದ್ದಾರೆ ಎಂದೂ ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ವರದಕ್ಷಿಣೆ ಕಿರುಕುಳದ ಆರೋಪದಲ್ಲಿ ಮೀಶಾ ತನ್ನ ಅತ್ತೆಯಂದಿರಾದ ಮಧು ಶರ್ಮಾ ಮತ್ತು ಪುಣ್ಯ ಶೀಲ್ ಶರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಮದುವೆಗೂ ಮುನ್ನ ವರದಕ್ಷಿಣೆಗೆ ಬೇಡಿಕೆ ಇರಲಿಲ್ಲ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ತಮಿಳುನಾಡು ರೈಲು ಅಪಘಾತಕ್ಕೆ ಕಾರಣವೇನು? ರೈಲ್ವೆ ಅಧಿಕಾರಿ ಹೀಗಂತಾರೆ…

ಪ್ರಾಂಜಲ್ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸಿದ ನ್ಯಾಯಾಲಯ, “ಈ ನ್ಯಾಯಾಲಯದ ಪರಿಗಣಿಸಿದ ಅಭಿಪ್ರಾಯದಲ್ಲಿ, ತ್ವರಿತ ಎಫ್‌ಐಆರ್ ಇಲ್ಲಿ ಅರ್ಜಿದಾರರ ವಿರುದ್ಧ ಸಾಮಾನ್ಯ ಮತ್ತು ಅಸ್ಪಷ್ಟ ಆರೋಪಗಳನ್ನು ಮಾಡುವ ಮೂಲಕ ವರದಕ್ಷಿಣೆ ಬೇಡಿಕೆ ಎಂಬುದು ಕಟ್ಟುಕತೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು