ಜುಲೈ 27ರವರೆಗೆ ಜ್ಞಾನವಾಪಿ ಮಸೀದಿಯ ಎಎಸ್ಐ ಸಮೀಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಸಂಕೀರ್ಣದ ಸರ್ವೆ ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿತ್ತು

ಜುಲೈ 27ರವರೆಗೆ ಜ್ಞಾನವಾಪಿ ಮಸೀದಿಯ ಎಎಸ್ಐ ಸಮೀಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್
ಜ್ಞಾನವಾಪಿ ಮಸೀದಿ
Follow us
|

Updated on: Jul 26, 2023 | 7:16 PM

ದೆಹಲಿ ಜುಲೈ 26: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನಡೆಸಿದ ಜ್ಞಾನವಾಪಿ ಮಸೀದಿ (Gyanvapi mosque) ಆವರಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಗುರುವಾರ (ಜುಲೈ 27) ವರೆಗೆ ತಡೆಯಾಜ್ಞೆ ನೀಡಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ  ಬುಧವಾರ ಮತ್ತೆ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಗುರುವಾರ ಮಧ್ಯಾಹ್ನ ಪ್ರಕರಣದ ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಜ್ಞಾನವಾಪಿ ಮಸೀದಿ ಸಂಕೀರ್ಣದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ಎಫ್‌ಎ ನಖ್ವಿ, ಮಸೀದಿಗೆ ಯಾವುದೇ ಹಾನಿಯಾಗದಂತೆ ಕಾನೂನು ಪ್ರಕಾರ ಸರ್ವೆ ಮಾಡಲಾಗುವುದು ಎಂದು ಎಎಸ್‌ಐ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದು, ನಾವು ಉತ್ತರ ನೀಡುತ್ತೇವೆ. ನಾಳೆ ಮಧ್ಯಾಹ್ನ 3.30 ಕ್ಕೆ ನ್ಯಾಯಾಲಯವು ಮತ್ತೆ ವಿಚಾರಣೆ ನಡೆಸಲಿದೆ. ಸದ್ಯಕ್ಕೆ ಜಿಲ್ಲಾ ನ್ಯಾಯಾಲಯದ ಆದೇಶದ ಸಮೀಕ್ಷೆಗೆ ತಡೆ ನೀಡಲಾಗಿದೆ. ಮುಸ್ಲಿಂ ಕಕ್ಷಿದಾರರಿಗೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಲು ಕಾಲಾವಕಾಶ ನೀಡುವುದಕ್ಕಾಗಿ ವಿವಾದಿತ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಜುಲೈ 26 ರಂದು ಸಂಜೆ 5 ಗಂಟೆಯವರೆಗೆ ಜಾರಿಗೊಳಿಸಬಾರದು ಎಂದು ಸುಪ್ರೀಂಕೋರ್ಟ್ ಜುಲೈ 24 ರಂದು ಆದೇಶಿಸಿದೆ.

ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಸಂಕೀರ್ಣದ ಸರ್ವೆ ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಆಗ್ರಾ ಮತ್ತು ಲಕ್ನೋದ ಸುಮಾರು 20 ಅಧಿಕಾರಿಗಳನ್ನು ಒಳಗೊಂಡ ಎಎಸ್‌ಐ ತಂಡವು ಆಡಳಿತ ಅಧಿಕಾರಿಗಳ ಸಹಾಯದೊಂದಿಗೆ ಸೋಮವಾರ ಬೆಳಿಗ್ಗೆ ವೈಜ್ಞಾನಿಕ ಸಮೀಕ್ಷೆಯನ್ನು ಕೈಗೊಳ್ಳಲು ಅಗತ್ಯವಾದ ಸಲಕರಣೆಗಳೊಂದಿಗೆ ಆವರಣವನ್ನು ಪ್ರವೇಶಿಸಿತು. ಅದೇ ವೇಳೆ ಫಿರ್ಯಾದಿಯನ್ನು ಪ್ರತಿನಿಧಿಸುವ ವಕೀಲರಿಗೂ ಆವರಣದೊಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು. ಬೆಳಗ್ಗೆ ಮುಸ್ಲಿಂ ಕಡೆಯಿಂದ ಯಾವ ವಕೀಲರೂ ಬರಲಿಲ್ಲ.

ಜುಲೈ 21 ರಂದು, ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ಜ್ಞಾನವಾಪಿ ಮಸೀದಿ ಆವರಣದ “ವೈಜ್ಞಾನಿಕ ತನಿಖೆ, ಸಮೀಕ್ಷೆ / ಉತ್ಖನನಕ್ಕೆ ನಿರ್ದೇಶನಗಳನ್ನು ನೀಡಿದ್ದು ಈಗಿನ ಕಟ್ಟಡವನ್ನು ಈ ಹಿಂದೆ ಅಲ್ಲಿದ್ದ ಹಿಂದೂ ದೇವಾಲಯದ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ಶೋಧಿಸಲು ಹೇಳಿದೆ.

ಇದನ್ನೂ ಓದಿ: Gyanvapi Case: ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ: ವಾರಣಾಸಿ ಕೋರ್ಟ್

ನಾಲ್ವರು ಹಿಂದೂ ಮಹಿಳಾ ಅರ್ಜಿದಾರರ ಅರ್ಜಿಯನ್ನು ಅನುಮತಿಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಾ ಅಜಯ ಕೃಷ್ಣ ವಿಶ್ವೇಶ ಅವರು ತಮ್ಮ ಆದೇಶದಲ್ಲಿ, ವಿವಾದಿತ ಕಟ್ಟಡದ 3 ಗುಮ್ಮಟಗಳ ಕೆಳಗೆ ಗ್ರೌಂಡ್ ಪೆನೆಟ್ರೀಟಿಂಗ್ ರಾಡಾರ್ (GPR) ಸಮೀಕ್ಷೆಯನ್ನು ನಡೆಸುವಂತೆ ಮತ್ತು ಅಗತ್ಯವಿದ್ದರೆ ಉತ್ಖನನವನ್ನು ನಡೆಸುವಂತೆ ಎಎಸ್‌ಐಗೆ ಸೂಚಿಸಿದ್ದಾರೆ. ಮಹಿಳಾ ಅರ್ಜಿದಾರರು ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದ ಹೊರ ಗೋಡೆಯ ಮೇಲೆ ಮಾ ಶೃಂಗಾರ್ ಗೌರಿಯನ್ನು ಪೂಜಿಸುವ ಹಕ್ಕನ್ನು ಕೋರಿ ಮೊಕದ್ದಮೆ ಹೂಡಿದ್ದರು.

ಮೂಲ ಕಾಶಿ ವಿಶ್ವನಾಥ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ಔರಂಗಜೇಬ್ ನಿರ್ಮಿಸಿದ 17 ನೇ ಶತಮಾನದ ಮಸೀದಿಯ ಸುತ್ತ ದಶಕಗಳಷ್ಟು ಹಳೆಯದಾದ ವ್ಯಾಜ್ಯವು ಕಳೆದ ಒಂದು ವರ್ಷದಿಂದ ವೇಗ ಪಡೆದುಕೊಂಡಿದೆ. ಐದು ಹಿಂದೂ ಮಹಿಳೆಯರು ಮಸೀದಿಯ ಹೊರ ಗೋಡೆಯ ಮೇಲೆ ಮಾ ಶ್ರೀನಗರ ಗೌರಿಯನ್ನು ಪೂಜಿಸುವ ಹಕ್ಕನ್ನು ಕೋರಿ ಅರ್ಜಿ ಸಲ್ಲಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ