AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ; ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಜಾಮೀನು ನೀಡಿದ ಅಲಹಾಬಾದ್​ ಹೈಕೋರ್ಟ್​

ಆಶೀಶ್​ ಮಿಶ್ರಾ ತಮ್ಮ ವಿರುದ್ಧದ ಆರೋಪ ಅಲ್ಲಗಳೆದಿದ್ದರು. ನಾನು ಘಟನೆ ನಡೆದಾಗ ಬನ್ವೀರ್​ಪುರದಲ್ಲಿ ಇದ್ದೆ. ಉಪಮುಖ್ಯಮಂತ್ರಿಯನ್ನು ಕರೆದುಕೊಂಡು ಬರಲು ನಮ್ಮ ಮೂರು ವಾಹನಗಳು ಹೋಗಿದ್ದವು. ಆದರೆ ಅವುಗಳ ಮೇಲೆ ರೈತರು ಕಲ್ಲು ಎಸೆದು, ದಾಳಿ ಮಾಡಿದ್ದಾರೆ ಎಂದು ಹೇಳಿದ್ದರು.

ಲಖಿಂಪುರ ಖೇರಿ ಹಿಂಸಾಚಾರ; ಕೇಂದ್ರ ಸಚಿವರ ಪುತ್ರ ಆಶೀಶ್​ ಮಿಶ್ರಾಗೆ ಜಾಮೀನು ನೀಡಿದ ಅಲಹಾಬಾದ್​ ಹೈಕೋರ್ಟ್​
Follow us
TV9 Web
| Updated By: Lakshmi Hegde

Updated on:Feb 10, 2022 | 2:42 PM

ಲಖಿಂಪುರ ಖೇರಿ ಹಿಂಸಾಚಾರದ ಪ್ರಮುಖ ಆರೋಪಿಯಾಗಿರುವ ಆಶೀಶ್​ ಮಿಶ್ರಾ (ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಪುತ್ರ)ರಿಗೆ ಅಲಹಾಬಾದ್​ ಹೈಕೋರ್ಟ್​ನ ಲಖನೌ ಪೀಠ ಇಂದು ಜಾಮೀನು ನೀಡಿದೆ.  2021ರ ಅಕ್ಟೋಬರ್​ 3ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ, ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ (ಈಗ ರದ್ದಾಗಿವೆ) ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ವಾಹನ ಹರಿದಿತ್ತು. ಇದರಲ್ಲಿ ಒಬ್ಬ ರೈತ ಮೃತಪಟ್ಟಿದ್ದರೆ, ನಂತರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಮೃತಪಟ್ಟಿದ್ದರು. ಈ ವಾಹನ ಆಶೀಶ್ ಮಿಶ್ರಾರ ಬೆಂಗಾವಲು ವಾಹನ ಎಂಬುದು ವೈರಲ್​ ಆದ ವಿಡಿಯೋಗಳಿಂದ ಗೊತ್ತಾಗಿದ್ದು.  ಅಕ್ಟೋಬರ್​ 9ರಂದು ಆಶೀಶ್​ ಮಿಶ್ರಾ ಬಂಧನವಾಗಿತ್ತು.  ನಾಲ್ಕು ತಿಂಗಳ ನಂತರ ಅವರಿಗೆ ಜಾಮೀನು ಸಿಕ್ಕಿದೆ. 

ಅಕ್ಟೋಬರ್​ 3ರಂದು ಲಖಿಂಪುರ ಖೇರಿಗೆ ಬಿಜೆಪಿ ಉಪಮುಖ್ಯಮಂತ್ರಿ ಕೇಶವ್​ ಪ್ರಸಾದ್​ ಮೌರ್ಯ ಭೇಟಿಕೊಟ್ಟಿದ್ದರು. ಈ ವೇಳೆ ಮೌನವಾಗಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದಿತ್ತು. ಈ ಘಟನೆ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿತ್ತು. ಇದರಲ್ಲಿ ಪತ್ರಕರ್ತನೊಬ್ಬ, ನಾಲ್ವರು ರೈತರು, ಮೂವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದರು.  ರೈತರಿಗೆ ಡಿಕ್ಕಿ ಹೊಡೆದ ಕಾರಿನಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇದ್ದಿದ್ದನ್ನು ಕಣ್ಣಾರೆ ನೋಡಿದ್ದೇವೆ. ಇವರೆಲ್ಲ ಕಾರನ್ನು ಹರಿಸಿದ್ದಲ್ಲದೆ ಗುಂಡಿನ ದಾಳಿಯನ್ನೂ ನಡೆಸಿದ್ದಾರೆ ಎಂದು ಸ್ಥಳದಲ್ಲಿದ್ದ ರೈತರು ಹೇಳಿದ್ದರು.  ವೈರಲ್ ಆದ ವಿಡಿಯೋದಲ್ಲಿ ಒಬ್ಬರು ಕಾರಿನಿಂದ ಇಳಿದು ಓಡಿದ ದೃಶ್ಯ ಕಂಡುಬಂದಿತ್ತು. ಅದಯ ಆಶಿಶ್​ ಮಿಶ್ರಾ ಎಂದೇ ರೈತರು ಪ್ರತಿಪಾದಿಸಿದ್ದರು. ಬಳಿಕ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಎಸ್​ಐಟಿಯನ್ನೂ ರಚಿಸಿತ್ತು.

ಆಶೀಶ್​ ಮಿಶ್ರಾ ತಮ್ಮ ವಿರುದ್ಧದ ಆರೋಪ ಅಲ್ಲಗಳೆದಿದ್ದರು. ನಾನು ಘಟನೆ ನಡೆದಾಗ ಬನ್ವೀರ್​ಪುರದಲ್ಲಿ ಇದ್ದೆ. ಉಪಮುಖ್ಯಮಂತ್ರಿಯನ್ನು ಕರೆದುಕೊಂಡು ಬರಲು ನಮ್ಮ ಮೂರು ವಾಹನಗಳು ಹೋಗಿದ್ದವು. ಆದರೆ ಅವುಗಳ ಮೇಲೆ ರೈತರು ಕಲ್ಲು ಎಸೆದು, ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲ, ಕಾರಿಗೆ ಬೆಂಕಿಯನ್ನೂ ಹಚ್ಚಿದ್ದಾರೆ. ಮೂರ್ನಾಲ್ಕು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದೂ ಅವರು ಆರೋಪಿಸಿದ್ದರು.  ಆದರೆ ಆಶೀಶ್ ಮಿಶ್ರಾ ವಿರುದ್ಧ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದರು. ಆದರೆ ಅವರು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ಅರೆಸ್ಟ್ ಮಾಡಿದ್ದಾಗಿ ಸಹರಾನ್ಪುರ ಡಿಐಜಿ ಉಪೇಂದ್ರ ಅಗರ್​ವಾಲ್​ ತಿಳಿಸಿದ್ದರು.

ಈ ಮಧ್ಯೆ ಸುಪ್ರೀಂಕೋರ್ಟ್ ಈ ಪ್ರಕರಣವನ್ನು ಸುಮೊಟೊ ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆರೋಪಿಗಳನ್ನು ಬಂಧಿಸಿ ಶಿಕ್ಷೆ ಕೊಡಲು ತಡ ಮಾಡುತ್ತಿರುವುದು ಯಾಕೆ? ಒಬ್ಬ ಸಾಮಾನ್ಯ ವ್ಯಕ್ತಿಯ ವಿರುದ್ಧ ಕೊಲೆ ಆರೋಪ ದಾಖಲಾದರೆ ಇಷ್ಟೇ ವಿಳಂಬ ಮಾಡುತ್ತೀರಾ ಎನ್ನುವ ಮೂಲಕ, ಆಶೀಶ್​ ಮಿಶ್ರಾ ವಿರುದ್ಧ ಹತ್ಯೆ ದೂರು ದಾಖಲಾಗಿದ್ದರೂ, ಅವರನ್ಯಾಕೆ ಅರೆಸ್ಟ್ ಮಾಡುತ್ತಿಲ್ಲ ಎಂದು ಪ್ರಶ್ನಿಸಿತ್ತು. ಇಷ್ಟರ ಮಧ್ಯೆ ಅಕ್ಟೋಬರ್​ 3ರಂದು ರೈತರ ಮೇಲೆ ಗುಂಡು ಹಾರಿದ್ದು, ಅಂಕಿತ್ ದಾಸ್​ ಮತ್ತು ಆಶೀಶ್​ ಮಿಶ್ರಾರ ಬಂದೂಕುಗಳಿಂದ. ಪರವಾನಗಿ ಹೊಂದಿರುವ ಬಂದೂಕುಗಳು ಇವು ಎಂದು ನವೆಂಬರ್​ 9ರಂದು ವಿಧಿ ವಿಜ್ಞಾನ ಪ್ರಯೋಗಾಲಯ ದೃಢಪಡಿಸಿತ್ತು.

ಇದನ್ನೂ ಓದಿ: ದೇಶದ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧ; ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಭಾಷಣ

Published On - 2:00 pm, Thu, 10 February 22

Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ