AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿವ್-ಇನ್ ರಿಲೇಶನ್​ಶಿಪ್ ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ: ಅಲಹಾಬಾದ್ ಹೈಕೋರ್ಟ್

ಲಿವ್-ಇನ್ ಸಂಬಂಧದ ಕುರಿತು ಅಲಹಾಬಾದ್ ಹೈಕೋರ್ಟ್​ ಅಭಿಪ್ರಾಯ ತಿಳಿಸಿದೆ. ಲಿವ್-ಇನ್ ಸಂಬಂಧ(Live-in Relationship)ವೆಂಬುದು ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಮದುವೆಯ ಭರವಸೆ ನೀಡಿ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿರುವ ಆರೋಪಿಗೆ ಹೈಕೋರ್ಟ್​ ಜಾಮೀನು ನೀಡಿದೆ. ಈ ತೀರ್ಪು ನೀಡುವಾಗ, ಲಿವ್ ಇನ್ ಸಂಬಂಧ ಮಧ್ಯಮ ವರ್ಗದ ಸಮಾಜದಲ್ಲಿ ಸ್ಥಾಪಿತವಾಗಿರುವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಲಿವ್-ಇನ್ ರಿಲೇಶನ್​ಶಿಪ್ ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ: ಅಲಹಾಬಾದ್ ಹೈಕೋರ್ಟ್
ಲಿವ್-ಇನ್ ಸಂಬಂಧImage Credit source: Indiafilings
ನಯನಾ ರಾಜೀವ್
|

Updated on: Jun 27, 2025 | 12:15 PM

Share

ಅಲಹಾಬಾದ್, ಜೂನ್ 27: ಲಿವ್-ಇನ್ ಸಂಬಂಧ(Live-in Relationship)ವೆಂಬುದು ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಮದುವೆಯ ಭರವಸೆ ನೀಡಿ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿರುವ ಆರೋಪಿಗೆ ಹೈಕೋರ್ಟ್​ ಜಾಮೀನು ನೀಡಿದೆ. ಈ ತೀರ್ಪು ನೀಡುವಾಗ, ಲಿವ್ ಇನ್ ಸಂಬಂಧ ಮಧ್ಯಮ ವರ್ಗದ ಸಮಾಜದಲ್ಲಿ ಸ್ಥಾಪಿತವಾಗಿರುವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಶೇನ್ ಆಲಂ ಎಂಬುವವರು ಹೈಕೋರ್ಟ್​ಗೆ ಅರ್ಜಿಯನ್ನು ಸಲ್ಲಿಸಿದ್ದರು. ಹೆಚ್ಚುತ್ತಿರುವ ಇಂತಹ ಪ್ರಕರಣಗಳ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ ಲಿವ್-ಇನ್ ಸಂಬಂಧಗಳನ್ನು ಕಾನೂನುಬದ್ಧಗೊಳಿಸಿದ ನಂತರ, ನ್ಯಾಯಾಲಯವು ಇಂತಹ ಪ್ರಕರಣಗಳಿಂದ ಬೇಸತ್ತಿದೆ ಎಂದು ಹೈಕೋರ್ಟ್ ಹೇಳಿದೆ.

ಲಿವ್-ಇನ್-ರಿಲೇಷನ್‌ಶಿಪ್ ಪರಿಕಲ್ಪನೆಯು ಭಾರತೀಯ ಮಧ್ಯಮ ವರ್ಗದ ಸಮಾಜದಲ್ಲಿ ಸ್ಥಾಪಿತವಾದ ಕಾನೂನಿಗೆ ವಿರುದ್ಧವಾಗಿರುವುದರಿಂದ ಇಂತಹ ಪ್ರಕರಣಗಳು ನ್ಯಾಯಾಲಯಕ್ಕೆ ಬರುತ್ತಿವೆ. ಆರೋಪಿಯು ಫೆಬ್ರವರಿ 25 ರಿಂದ ಜೈಲಿನಲ್ಲಿದ್ದ, ಯಾವುದೇ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿಲ್ಲ ಎಂದು ನ್ಯಾಯಾಲಯ ಕಂಡುಕೊಂಡಿದೆ.

ಮತ್ತಷ್ಟು ಓದಿ: ಪತಿಯ ವಿರುದ್ಧ ಸೇಡು ತೀರಿಸಿಕೊಳ್ಳಲು ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದ ಖ್ಯಾತ ನಟಿ

ನ್ಯಾಯಮೂರ್ತಿ ಸಿದ್ಧಾರ್ಥ್ ಅವರಿದ್ದ ಏಕಸದಸ್ಯ ಪೀಠವು ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಿದೆ. ಅರ್ಜಿದಾರರಾದ ಶೇನ್ ಆಲಂ ವಿರುದ್ಧ ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರು ಮದುವೆಯ ಸುಳ್ಳು ಭರವಸೆ ನೀಡುವ ಮೂಲಕ ಸಂತ್ರಸ್ತೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು, ಆದರೆ ನಂತರ ಅವರನ್ನು ಮದುವೆಯಾಗಲು ನಿರಾಕರಿಸಿದರು ಎಂದು ಆರೋಪಿಸಲಾಗಿದೆ.

ಲಿವ್-ಇನ್ ಸಂಬಂಧದ ಪರಿಕಲ್ಪನೆಯು ಯುವ ಪೀಳಿಗೆಯನ್ನು ಬಹಳಷ್ಟು ಆಕರ್ಷಿಸಿದೆ. ಇದೇ ಕಾರಣಕ್ಕೆ ಇಂತಹ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ. ಅದರ ದುಷ್ಪರಿಣಾಮಗಳು ಸಹ ಮುನ್ನೆಲೆಗೆ ಬರುತ್ತಿವೆ ಎಂದು ನ್ಯಾಯಾಲಯ ಹೇಳಿದೆ.

ಅಲಹಾಬಾದ್ ಹೈಕೋರ್ಟ್​ ಮಾತ್ರವಲ್ಲ , ದೆಹಲಿ ಸೇರಿದಂತೆ ಹಲವು ಹೈಕೋರ್ಟ್​ಗಳು ಲಿವ್ ಇನ್ ಸಂಬಂಧದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿವೆ. ಇಬ್ಬರೂ ಮೊದಲು ಒಪ್ಪಿಗೆ ಪಡೆದೇ ಜತೆಗಿರುತ್ತಾರೆ. ಆದರೆ ಮದುವೆಗೆ ಸಂಬಂಧಿಸಿದ ವಿವಾದಗಳು ಉಂಟಾದಾಗ, ಪೊಲೀಸ್, ನ್ಯಾಯಾಲಯದ ಸಹಾಯ ಕೇಳಿಕೊಂಡು ಬರುತ್ತಾರೆ, ಇದು ತಪ್ಪು ಎಂದು ನ್ಯಾಯಾಲಯಗಳು ಹೇಳಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ