AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gyanvapi Mosque: ಜ್ಞಾನವಾಪಿ ಮಸೀದಿಯೊಳಗಿರುವ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಹೈಕೋರ್ಟ್ ಆದೇಶ

ಜ್ಞಾನವಾಪಿ ಮಸೀದಿಯ ಅಧಿಕಾರಿಗಳು ಈ ರಚನೆಯನ್ನು ಶಿವಲಿಂಗ ಅಥವಾ ಭಗವಾನ್ ಶಿವನ ಅವಶೇಷ ಎಂದು ನಿರಾಕರಿಸಿದ್ದಾರೆ. ಈ ರಚನೆಯು ವುಝು ಖಾನಾದಲ್ಲಿನ ಕಾರಂಜಿಯ ಒಂದು ಭಾಗವಾಗಿದೆ ಎಂದು ಅವರು ಹೇಳಿದರು.

Gyanvapi Mosque: ಜ್ಞಾನವಾಪಿ ಮಸೀದಿಯೊಳಗಿರುವ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಹೈಕೋರ್ಟ್ ಆದೇಶ
ಜ್ಞಾನವಾಪಿ ಮಸೀದಿ
ರಶ್ಮಿ ಕಲ್ಲಕಟ್ಟ
|

Updated on: May 12, 2023 | 8:28 PM

Share

ಪ್ರಯಾಗರಾಜ್: ವಾರಣಾಸಿಯ ಜ್ಞಾನವಾಪಿ ಮಸೀದಿಯೊಳಗೆ (Gyanvapi Mosque) ಹಿಂದೂ ಅರ್ಜಿದಾರರು ಶಿವಲಿಂಗ ಎಂದು ಹೇಳುವ ರಚನೆಯ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುವಂತೆ ಅಲಹಾಬಾದ್ ಹೈಕೋರ್ಟ್ (Allahabad High Court)ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (Archaeological Survey of India) ನಿರ್ದೇಶನ ನೀಡಿದೆ. ವಾರಣಾಸಿ ಜಿಲ್ಲಾ ನ್ಯಾಯಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಮೀಕ್ಷೆಗಾಗಿ ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನು ನಿರಾಕರಿಸಿತ್ತು.ಇಂದಿನ ಆದೇಶದಲ್ಲಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ), ರಚನೆಯ ಸಮೀಕ್ಷೆಗೆ ವೈಜ್ಞಾನಿಕ ವಿಧಾನವನ್ನು ಬಳಸಬೇಕು ಮತ್ತು ಅದಕ್ಕೆ ಹಾನಿಯಾಗದಂತೆ ತಡೆಯಬೇಕು ಎಂದು ಹೈಕೋರ್ಟ್ ಹೇಳಿದೆ.

ಜ್ಞಾನವಾಪಿ ಮಸೀದಿಯ ಅಧಿಕಾರಿಗಳು ಈ ರಚನೆಯನ್ನು ಶಿವಲಿಂಗ ಅಥವಾ ಭಗವಾನ್ ಶಿವನ ಅವಶೇಷ ಎಂದು ನಿರಾಕರಿಸಿದ್ದಾರೆ. ಈ ರಚನೆಯು ವುಝು ಖಾನಾದಲ್ಲಿನ ಕಾರಂಜಿಯ ಒಂದು ಭಾಗವಾಗಿದೆ ಎಂದು ಅವರು ಹೇಳಿದರು. ನಮಾಜ್ ಮಾಡುವ ಮೊದಲು ಶುದ್ಧೀಕರಣವನ್ನು ಮಾಡುವ ಜಾಗಲೇ ವುಝು ಖಾನಾ.

ಮಸೀದಿ ಸಂಕೀರ್ಣದೊಳಗಿನ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಮಾಡಲು ಐದು ಹಿಂದೂ ಮಹಿಳೆಯರು ವಿನಂತಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕಳೆದ ವರ್ಷದ ಆರಂಭದಲ್ಲಿ ಕೆಳ ನ್ಯಾಯಾಲಯದ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ನಡೆಸಿದ ವಿಡಿಯೊ ಸಮೀಕ್ಷೆಯಲ್ಲಿ ಈ ರಚನೆಯು ಕಂಡುಬಂದಿದೆ.

ಇದನ್ನೂ ಓದಿ:  ನಿಮ್ಮ ಆಸಕ್ತಿಯ ಕ್ಷೇತ್ರಗಳನ್ನು ಕಂಡುಕೊಂಡರೆ ನೀವು ಅಲ್ಲಿ ಸಾಧನೆ ಮಾಡಬಲ್ಲಿರಿ: ವಿದ್ಯಾರ್ಥಿಗಳಿಗೆ ಮೋದಿ ಕಿವಿ ಮಾತು

ಐದು ಅರ್ಜಿದಾರರಲ್ಲಿ ನಾಲ್ವರು ಶಿವಲಿಂಗದ ವಯಸ್ಸು ಅರಿಯಲು ಕಾರ್ಬನ್ ಡೇಟಿಂಗ್ ಸೇರಿದಂತೆ ವೈಜ್ಞಾನಿಕ ತನಿಖೆಯನ್ನು ಕೋರಿದ್ದರು. ಹಿಂದೂ ದೇವತೆಗಳ ಪುರಾತನ ವಿಗ್ರಹಗಳು ಮಸೀದಿಯೊಳಗೆ ನೆಲೆಗೊಂಡಿವೆ ಎಂದು ಮಹಿಳೆಯರು ಹೇಳುತ್ತಾರೆ.

ಮಸೀದಿಯ ಹೊರ ಗೋಡೆಯ ಮೇಲೆ ಹಿಂದೂ ದೇವರುಗಳ ವಿಗ್ರಹಗಳಿಗೆ ದೈನಂದಿನ ಪೂಜೆಯನ್ನು ಕೋರುವ ವಿನಂತಿಯ ನಿರ್ವಹಣೆಯನ್ನು ಮಸೀದಿ ಸಮಿತಿ ಪ್ರಶ್ನಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ