AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಜ ದೋಷವಿರುವ ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲ್ಲ ಎಂದ ಆರೋಪಿ; ಹುಡುಗಿಯ ಜಾತಕ ಪರಿಶೀಲಿಸಲು ಸೂಚಿಸಿದ ಅಲಹಾಬಾದ್ ಹೈಕೋರ್ಟ್

ಲೈವ್ ಲಾ ವರದಿಯ ಪ್ರಕಾರ, ಆರೋಪಿಯು ಹುಡುಗಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ. ನಂತರ ಆಕೆಯ ಜಾತಕದಲ್ಲಿ ಕುಜ ದೋಷ ಇದೆ ಎಂದು ಹೇಳಿ ಮದುವೆಯಾಗಲು ನಿರಾಕರಿಸಿದನು. ಯುವತಿಯ ಜಾತಕದಲ್ಲಿ ಕುಜ ದೋಷವಿರುವ ಕಾರಣ ಆರೋಪಿ ಮತ್ತು ಸಂತ್ರಸ್ತೆಯ ನಡುವೆ ವಿವಾಹ ನೆರವೇರಿಸಲು ಸಾಧ್ಯವಿಲ್ಲ ಎಂದು ಆರೋಪಿ ಪರ ವಕೀಲರು ಹೈಕೋರ್ಟ್‌ಗೆ ಹೇಳಿದ್ದಾರೆ.

ಕುಜ ದೋಷವಿರುವ ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗಲ್ಲ ಎಂದ ಆರೋಪಿ; ಹುಡುಗಿಯ ಜಾತಕ ಪರಿಶೀಲಿಸಲು ಸೂಚಿಸಿದ ಅಲಹಾಬಾದ್ ಹೈಕೋರ್ಟ್
ಅಲಹಾಬಾದ್ ಹೈಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on: Jun 03, 2023 | 2:24 PM

ಅಲಹಾಬಾದ್: ಉತ್ತರಪ್ರದೇಶದಲ್ಲಿ (Uttar Pradesh) ತನ್ನಿಂದಲೇ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯನ್ನು ಮದುವೆಯಾಗಲ್ಲ, ಆಕೆಗೆ ಕುಜದೋಷವಿದೆ ಎಂದು ಹೇಳಿ ಆರೋಪಿ ಮದುವೆಗೆ ನಿರಾಕರಿಸಿದ್ದಾನೆ. ಇದೇ ವೇಳೆ ಆರೋಪಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ. ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್  ಹೈಕೋರ್ಟ್ (Allahabad HC) ಅತ್ಯಾಚಾರ ಸಂತ್ರಸ್ತೆಗೆ ಕುಜ ದೋಷ ಇದೆಯೇ ಎಂಬುದನ್ನು ನಿರ್ಧರಿಸಲು ಆಕೆಯ ಜಾತಕವನ್ನು ಲಕ್ನೋ ವಿಶ್ವವಿದ್ಯಾನಿಲಯದ (Lucknow University) ಜ್ಯೋತಿಷ್ಯ ವಿಭಾಗಕ್ಕೆ ಕಳುಹಿಸಲು ನಿರ್ದೇಶಿಸಿದೆ. ಸಂತ್ರಸ್ತೆಗೆ ಕುಜ ದೋಷ ಸಮಸ್ಯೆ ಇದೆಯೇ ಇಲ್ಲವೇ ಎಂಬುದನ್ನು ಹತ್ತು ದಿನಗಳಲ್ಲಿ ಹೇಳಬೇಕು ಎಂದು ಲಕ್ನೋ ವಿಶ್ವವಿದ್ಯಾನಿಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರಿಗೆ ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಆದೇಶಿಸಿದ್ದಾರೆ.

ನ್ಯಾಯಾಲಯದ ಆದೇಶದಂತೆ, ಸಂತ್ರಸ್ತ ಬಾಲಕಿ ಮತ್ತು ಆರೋಪಿ ಹುಡುಗ ಲಕ್ನೋ ವಿಶ್ವವಿದ್ಯಾಲಯದ ಜ್ಯೋತಿಷ್ಯ ವಿಭಾಗದ ಮುಖ್ಯಸ್ಥರ ಮುಂದೆ ಜಾತಕ ಹಾಜರುಪಡಿಸಲಿದ್ದು, ವಿಭಾಗದ ಮುಖ್ಯಸ್ಥರು ಸಮಸ್ಯೆಯನ್ನು ನಿರ್ಧರಿಸಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಲಿದ್ದಾರೆ.

ಲೈವ್ ಲಾ ವರದಿಯ ಪ್ರಕಾರ, ಆರೋಪಿಯು ಹುಡುಗಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ. ನಂತರ ಆಕೆಯ ಜಾತಕದಲ್ಲಿ ಕುಜ ದೋಷ ಇದೆ ಎಂದು ಹೇಳಿ ಮದುವೆಯಾಗಲು ನಿರಾಕರಿಸಿದನು. ಯುವತಿಯ ಜಾತಕದಲ್ಲಿ ಕುಜ ದೋಷವಿರುವ ಕಾರಣ ಆರೋಪಿ ಮತ್ತು ಸಂತ್ರಸ್ತೆಯ ನಡುವೆ ವಿವಾಹ ನೆರವೇರಿಸಲು ಸಾಧ್ಯವಿಲ್ಲ ಎಂದು ಆರೋಪಿ ಪರ ವಕೀಲರು ಹೈಕೋರ್ಟ್‌ಗೆ ಹೇಳಿದ್ದಾರೆ.

ಅತ್ಯಾಚಾರ ಸಂತ್ರಸ್ತೆಯ ಪರ ವಕೀಲರು ಆರೋಪಿಗಳ ಪರ ವಕೀಲರ ವಾದವನ್ನು ತಿರಸ್ಕರಿಸಿದ್ದು, ಯುವತಿಯ ಜಾತಕದಲ್ಲಿ ಕುಜ ದೋಷ ಇಲ್ಲ ಮತ್ತು ಆಕೆ ‘ಮಾಂಗಲಿಕ’ ಅಲ್ಲ ಎಂದಿದ್ದಾರೆ.

ಆರೋಪಿಯು ಮದುವೆಯ ಸುಳ್ಳು ಭರವಸೆಯ ಮೇಲೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಅವ ನನ್ನನ್ನು ಮದುವೆಯಾಗುವ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಸಂತ್ರಸ್ತೆ ವಾದಿಸಿದ್ದಾಳೆ.

ಇದನ್ನೂ ಓದಿ: Kavach System: ರೈಲುಗಳು ಡಿಕ್ಕಿ ಹೊಡೆದ ಒಡಿಶಾ ಮಾರ್ಗದಲ್ಲಿ ಎಟಿಪಿ ಸುರಕ್ಷತಾ ವ್ಯವಸ್ಥೆ ಇರಲಿಲ್ಲ, ಏನಿದು ಕವಚ್?

ಲಕ್ನೋ ವಿಶ್ವವಿದ್ಯಾಲಯದ ವಿಭಾಗದ ಮುಖ್ಯಸ್ಥರು (ಜ್ಯೋತಿಷ್ಯ ವಿಭಾಗ), ಹುಡುಗಿಗೆ ಕುಜ ದೋಷ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಬಹುದು. ಇಂದಿನಿಂದ ಹತ್ತು ದಿನಗಳಲ್ಲಿ ಲಕ್ನೋ ವಿಶ್ವವಿದ್ಯಾಲಯದ ವಿಭಾಗದ ಮುಖ್ಯಸ್ಥ (ಜ್ಯೋತಿಷ್ಯ ವಿಭಾಗ) ಮುಂದೆ ಕಕ್ಷಿದಾರರು ಜಾತಕವನ್ನು ಸಲ್ಲಿಸುತ್ತಾರೆ. ಲಕ್ನೋ ವಿಶ್ವವಿದ್ಯಾನಿಲಯದ ವಿಭಾಗದ ಮುಖ್ಯಸ್ಥ (ಜ್ಯೋತಿಷ್ಯ ವಿಭಾಗ) ಮೂರು ವಾರಗಳಲ್ಲಿ ಮುಚ್ಚಿದ ಕವರ್‌ನಲ್ಲಿ ವರದಿಯನ್ನು ಈ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೈಕೋರ್ಟ್ ಮೇ 23 ರ ತನ್ನ ಆದೇಶದಲ್ಲಿ ತಿಳಿಸಿದೆ. ಜೂನ್ 26 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು