Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿವ್-ಇನ್ ಸಂಬಂಧದಲ್ಲಿ ಇಬ್ಬರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೂ ಸಂಬಂಧ ಮಾನ್ಯವೆಂದು ಪರಿಗಣಿಸಲಾಗುವುದಿಲ್ಲ: ನ್ಯಾಯಾಲಯ

ಲಿವ್​-ಇನ್​ ಸಂಬಂಧದಲ್ಲಿ ಇಬ್ಬರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೆ ಆ ಸಂಬಂಧವನ್ನು ಮಾನ್ಯವೆಂದು ಪರಿಗಣಿಸುವುದಿಲ್ಲ ಅಥವಾ ಅದು ಕಾನೂನು ರಕ್ಷಣೆಗೆ ಒಳಪಡುವುದಿಲ್ಲ ಎಂದು ಪ್ರಕರಣವೊಂದರ ವಿಚಾರಣೆ ವೇಳೆ ಅಲಹಾಬಾದ್ ಹೈಕೋರ್ಟ್​ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಲಿವ್-ಇನ್ ಸಂಬಂಧದಲ್ಲಿ ಇಬ್ಬರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೂ ಸಂಬಂಧ ಮಾನ್ಯವೆಂದು ಪರಿಗಣಿಸಲಾಗುವುದಿಲ್ಲ: ನ್ಯಾಯಾಲಯ
ಸಂಬಂಧImage Credit source: ABP Live
Follow us
ನಯನಾ ರಾಜೀವ್
|

Updated on: Aug 02, 2023 | 12:59 PM

ಲಿವ್​-ಇನ್​ ಸಂಬಂಧದಲ್ಲಿ ಇಬ್ಬರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೆ ಆ ಸಂಬಂಧವನ್ನು ಮಾನ್ಯವೆಂದು ಪರಿಗಣಿಸುವುದಿಲ್ಲ ಅಥವಾ ಅದು ಕಾನೂನು ರಕ್ಷಣೆಗೆ ಒಳಪಡುವುದಿಲ್ಲ ಎಂದು ಪ್ರಕರಣವೊಂದರ ವಿಚಾರಣೆ ವೇಳೆ ಅಲಹಾಬಾದ್ ಹೈಕೋರ್ಟ್​ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಸಂಬಂಧ ಕಾನೂನು ಮತ್ತು ಸಮಾಜಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ. ಲಿವ್-ಇನ್‌ನಲ್ಲಿ ಇರಲು ವಯಸ್ಕರಿಗೆ ಮಾತ್ರ ಅವಕಾಶವಿದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ವಿಕೆ ಬಿರ್ಲಾ ಮತ್ತು ನ್ಯಾಯಮೂರ್ತಿ ರಾಜೇಂದ್ರ ಅವರ ಪೀಠವು ವಿಚಾರಣೆ ನಡೆಸುತ್ತಿದೆ. ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ದಂಪತಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಎಫ್‌ಐಆರ್‌ನಲ್ಲಿ ಅಪಹರಣದ ದೂರು ದಾಖಲಾಗಿದೆ.

ಅಪ್ರಾಪ್ತ ವಯಸ್ಕ ಯುವತಿಯನ್ನು ಅಪಹರಿಸುವುದು ಅಪರಾಧವೇ ಅಥವಾ ಅಲ್ಲವೇ ಎಂಬುದನ್ನು ತನಿಖೆಯ ನಂತರವೇ ನಿರ್ಧರಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ಅಪ್ರಾಪ್ತ ಬಾಲಕ, ಬಾಲಕಿಯೊಂದಿಗೆ ಲಿವ್ ಇನ್ ನಲ್ಲಿ ವಾಸಿಸುವುದು ಮಕ್ಕಳ ರಕ್ಷಣಾ ಕಾಯ್ದೆಯಡಿ ಅಪರಾಧ ಎಂದು ಕೋರ್ಟ್ ಹೇಳಿದೆ.

ಮತ್ತಷ್ಟು ಓದಿ: Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ

ಈ ಪ್ರಕರಣದಲ್ಲಿ ವಯಸ್ಕ ಯುವತಿ ಮತ್ತು ಅಪ್ರಾಪ್ತರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ತನಗೆ 19 ವರ್ಷ ವಯಸ್ಸಾಗಿದೆ ಮತ್ತು ತನ್ನ ಸ್ವಂತ ಇಚ್ಛೆಯ ಮೇರೆಗೆ ವಾಸಿಸುತ್ತಿದ್ದೇವೆ ಮತ್ತು ಮುಂದೆ ಅವನೊಂದಿಗೆ ಇರಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಅರ್ಜಿದಾರರಲ್ಲಿ ಒಬ್ಬರು ಅಪ್ರಾಪ್ತ ವಯಸ್ಕರಾಗಿದ್ದು, ನ್ಯಾಯಾಲಯವು ಅನುಮತಿಸಿದರೆ ಅದು ಕಾನೂನುಬಾಹಿರ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ಹೇಳಿದೆ. ಇಬ್ಬರಲ್ಲಿ ಒಬ್ಬರು ಅಪ್ರಾಪ್ತ ವಯಸ್ಕರಾಗಿದ್ದು, ಆತನ ವಯಸ್ಸು 18 ವರ್ಷಕ್ಕಿಂತ ಕಡಿಮೆ ಎಂದು ನ್ಯಾಯಾಲಯ ಹೇಳಿದೆ. ಈ ವಯಸ್ಸಿನಲ್ಲಿ ಲಿವ್-ಇನ್​ನಲ್ಲಿರುವುದು ಕಾನೂನಿಗೆ ವಿರುದ್ಧವಾದದ್ದು, ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ನ್ಯಾಯಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ