AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿವ್-ಇನ್ ಸಂಬಂಧದಲ್ಲಿ ಇಬ್ಬರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೂ ಸಂಬಂಧ ಮಾನ್ಯವೆಂದು ಪರಿಗಣಿಸಲಾಗುವುದಿಲ್ಲ: ನ್ಯಾಯಾಲಯ

ಲಿವ್​-ಇನ್​ ಸಂಬಂಧದಲ್ಲಿ ಇಬ್ಬರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೆ ಆ ಸಂಬಂಧವನ್ನು ಮಾನ್ಯವೆಂದು ಪರಿಗಣಿಸುವುದಿಲ್ಲ ಅಥವಾ ಅದು ಕಾನೂನು ರಕ್ಷಣೆಗೆ ಒಳಪಡುವುದಿಲ್ಲ ಎಂದು ಪ್ರಕರಣವೊಂದರ ವಿಚಾರಣೆ ವೇಳೆ ಅಲಹಾಬಾದ್ ಹೈಕೋರ್ಟ್​ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಲಿವ್-ಇನ್ ಸಂಬಂಧದಲ್ಲಿ ಇಬ್ಬರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೂ ಸಂಬಂಧ ಮಾನ್ಯವೆಂದು ಪರಿಗಣಿಸಲಾಗುವುದಿಲ್ಲ: ನ್ಯಾಯಾಲಯ
ಸಂಬಂಧImage Credit source: ABP Live
ನಯನಾ ರಾಜೀವ್
|

Updated on: Aug 02, 2023 | 12:59 PM

Share

ಲಿವ್​-ಇನ್​ ಸಂಬಂಧದಲ್ಲಿ ಇಬ್ಬರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದರೆ ಆ ಸಂಬಂಧವನ್ನು ಮಾನ್ಯವೆಂದು ಪರಿಗಣಿಸುವುದಿಲ್ಲ ಅಥವಾ ಅದು ಕಾನೂನು ರಕ್ಷಣೆಗೆ ಒಳಪಡುವುದಿಲ್ಲ ಎಂದು ಪ್ರಕರಣವೊಂದರ ವಿಚಾರಣೆ ವೇಳೆ ಅಲಹಾಬಾದ್ ಹೈಕೋರ್ಟ್​ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಸಂಬಂಧ ಕಾನೂನು ಮತ್ತು ಸಮಾಜಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ. ಲಿವ್-ಇನ್‌ನಲ್ಲಿ ಇರಲು ವಯಸ್ಕರಿಗೆ ಮಾತ್ರ ಅವಕಾಶವಿದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ವಿಕೆ ಬಿರ್ಲಾ ಮತ್ತು ನ್ಯಾಯಮೂರ್ತಿ ರಾಜೇಂದ್ರ ಅವರ ಪೀಠವು ವಿಚಾರಣೆ ನಡೆಸುತ್ತಿದೆ. ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ದಂಪತಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಎಫ್‌ಐಆರ್‌ನಲ್ಲಿ ಅಪಹರಣದ ದೂರು ದಾಖಲಾಗಿದೆ.

ಅಪ್ರಾಪ್ತ ವಯಸ್ಕ ಯುವತಿಯನ್ನು ಅಪಹರಿಸುವುದು ಅಪರಾಧವೇ ಅಥವಾ ಅಲ್ಲವೇ ಎಂಬುದನ್ನು ತನಿಖೆಯ ನಂತರವೇ ನಿರ್ಧರಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ಅಪ್ರಾಪ್ತ ಬಾಲಕ, ಬಾಲಕಿಯೊಂದಿಗೆ ಲಿವ್ ಇನ್ ನಲ್ಲಿ ವಾಸಿಸುವುದು ಮಕ್ಕಳ ರಕ್ಷಣಾ ಕಾಯ್ದೆಯಡಿ ಅಪರಾಧ ಎಂದು ಕೋರ್ಟ್ ಹೇಳಿದೆ.

ಮತ್ತಷ್ಟು ಓದಿ: Live-in Relationship: ಲಿವ್-ಇನ್​ ಸಂಬಂಧವನ್ನು ಕಾನೂನು ಬಾಹಿರ ಎಂದು ಘೋಷಿಸಲು ಕೇಂದ್ರಕ್ಕೆ ಬಿಜೆಪಿ ಸಂಸದ ಅಜಯ್ ಸಿಂಗ್ ಒತ್ತಾಯ

ಈ ಪ್ರಕರಣದಲ್ಲಿ ವಯಸ್ಕ ಯುವತಿ ಮತ್ತು ಅಪ್ರಾಪ್ತರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ತನಗೆ 19 ವರ್ಷ ವಯಸ್ಸಾಗಿದೆ ಮತ್ತು ತನ್ನ ಸ್ವಂತ ಇಚ್ಛೆಯ ಮೇರೆಗೆ ವಾಸಿಸುತ್ತಿದ್ದೇವೆ ಮತ್ತು ಮುಂದೆ ಅವನೊಂದಿಗೆ ಇರಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಅರ್ಜಿದಾರರಲ್ಲಿ ಒಬ್ಬರು ಅಪ್ರಾಪ್ತ ವಯಸ್ಕರಾಗಿದ್ದು, ನ್ಯಾಯಾಲಯವು ಅನುಮತಿಸಿದರೆ ಅದು ಕಾನೂನುಬಾಹಿರ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ಹೇಳಿದೆ. ಇಬ್ಬರಲ್ಲಿ ಒಬ್ಬರು ಅಪ್ರಾಪ್ತ ವಯಸ್ಕರಾಗಿದ್ದು, ಆತನ ವಯಸ್ಸು 18 ವರ್ಷಕ್ಕಿಂತ ಕಡಿಮೆ ಎಂದು ನ್ಯಾಯಾಲಯ ಹೇಳಿದೆ. ಈ ವಯಸ್ಸಿನಲ್ಲಿ ಲಿವ್-ಇನ್​ನಲ್ಲಿರುವುದು ಕಾನೂನಿಗೆ ವಿರುದ್ಧವಾದದ್ದು, ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ನ್ಯಾಯಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು