AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವು ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು: ಗೋವಾ ಸಿಎಂ

Sonali Phogat Death ನಾನು ರಾಜ್ಯ ಪೊಲೀಸರ ಬಗ್ಗೆ ಸಂಪೂರ್ಣ ವಿಶ್ವಾಸ ಹೊಂದಿದ್ದು ಮತ್ತು ತನಿಖೆ ಉತ್ತಮವಾಗಿ ನಡೆಯುತ್ತಿದೆ ಎಂದು ಸಾವಂತ್ ಹೇಳಿದ್ದಾರೆ. ಆದರೆ ಹರ್ಯಾಣದ ಜನರಿಂದ ಪುನರಾವರ್ತಿತ ಬೇಡಿಕೆಗಳ ನಂತರ ಪ್ರಕರಣದ ತನಿಖೆಯನ್ನು...

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವು ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು: ಗೋವಾ ಸಿಎಂ
ಸೋನಾಲಿ ಫೋಗಟ್
TV9 Web
| Edited By: |

Updated on:Sep 12, 2022 | 2:01 PM

Share

ಚಂಡೀಗಢ: ಬಿಜೆಪಿ ನಾಯಕಿ, ಟಿಕ್ ಟಾಕ್ ಸ್ಟಾರ್ ಸೋನಾಲಿ ಫೋಗಾಟ್ (Sonali Phogat) ಅವರ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ಶಿಫಾರಸು ಮಾಡಲು ಗೋವಾ ಸರ್ಕಾರ ನಿರ್ಧರಿಸಿದೆ ಎಂದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant )ಹೇಳಿದ್ದಾರೆ. ಈ ಪ್ರಕರಣದ ಬಗ್ಗೆ ಹರ್ಯಾಣದಲ್ಲಿ ‘ಮಹಾಪಂಚಾಯತ್ ‘ ನಡೆಸಿದ ಒಂದು ದಿನದ ನಂತರ ಈ ಕ್ರಮ ಬಂದಿದೆ. ನಾನು ರಾಜ್ಯ ಪೊಲೀಸರ ಬಗ್ಗೆ ಸಂಪೂರ್ಣ ವಿಶ್ವಾಸ ಹೊಂದಿದ್ದು, ತನಿಖೆ ಉತ್ತಮವಾಗಿ ನಡೆಯುತ್ತಿದೆ ಎಂದು ಸಾವಂತ್ ಹೇಳಿದ್ದಾರೆ. ಆದರೆ ಹರ್ಯಾಣದ ಜನರಿಂದ ಪುನರಾವರ್ತಿತ ಬೇಡಿಕೆಗಳ ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆಯುವುದಾಗಿ ಅವರು ಹೇಳಿದ್ದಾರೆ . ಫೋಗಟ್ ಸಾವು ಹೇಗೆ ಸಂಭವಿಸಿತು ಎಂದು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದ ಕುಟುಂಬ ಈ ಪ್ರಕರಣದ ಬಗ್ಗೆ ಕೇಂದ್ರ ಏಜೆನ್ಸಿ ತನಿಖೆಗೆ ಒತ್ತಾಯಿಸುತ್ತಿದ್ದಾರೆ.

ಗೋವಾ ಪೊಲೀಸರು ಪ್ರಕರಣದ ಬಗ್ಗೆ ಅತ್ಯುತ್ತಮ ರೀತಿಯಲ್ಲಿ ತನಿಖೆ ಮಾಡಿದ್ದು ಕೆಲವು ಪ್ರಮುಖ ಸುಳಿವುಗಳನ್ನು ಸಹ ಪಡೆದಿದ್ದಾರೆ ಎಂದು ಸಾವಂತ್ ಪಣಜಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆದರೆ ಹರ್ಯಾಣದ ಜನರು ಮತ್ತು ಸೋನಾಲಿ ಫೋಗಟ್ ಅವರ ಮಗಳ ಬೇಡಿಕೆಯಿಂದಾಗಿ, ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ನಾವು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ಸಾವಂತ್ ಹೇಳಿದ್ದಾರೆ. ಅದೇ ವೇಳೆ ಕೇಂದ್ರ ಗೃಹ ಸಚಿವಾಲಯಕ್ಕೆ ಖುದ್ದಾಗಿ ಪತ್ರ ಬರೆಯುತ್ತೇನೆ ಎಂದಿದ್ದಾರೆ ಗೋವಾ ಸಿಎಂ.

42 ವರ್ಷದ ಬಿಜೆಪಿ ನಾಯಕಿ ಫೋಗಟ್ ಹೃದಯಾಘಾತದಿಂದ ಸಾವಿಗೀಡಾಗಿರುವುದಾಗಿ ಪೊಲೀಸರು ಆರಂಭದಲ್ಲಿ ಹೇಳಿದ್ದರು. ಆಮೇಲೆ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಆದರೆ, ಸೋನಾಲಿ ಫೋಗಟ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸಹೋದರಿಯರು ಹೇಳಿದ್ದಾರೆ. ಅವಳು ಫೋನ್‌ನಲ್ಲಿ “ಏನೋ ಹೇಳುವವಳಿದ್ದಳು” ಎಂದು ಅವರು ಹೇಳಿದ್ದಾರೆ.

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಧ್ಯಪ್ರವೇಶಿಸಿದ ನಂತರ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ್ದರು. ಆಕೆಯ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ, “ದೇಹದ ಮೇಲೆ ಅನೇಕ ಗಾಯಗಳಿವೆ” ಎಂದು ಬೆಳಕಿಗೆ ಬಂದಿದೆ. ಸಾವಿನ ಕಾರಣವನ್ನು ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದು ವರದಿ ಹೇಳಿದೆ.

ಎರಡು ಭದ್ರತಾ ಕ್ಯಾಮರಾ ವಿಡಿಯೊಗಳು ಆಕೆಯ ಸಾವಿನ ಸಂದರ್ಭಗಳ ಬಗ್ಗೆ ಊಹಾಪೋಹಗಳಿಗೆ  ಒತ್ತು ನೀಡುವಂತೆ ಮಾಡಿದೆ. ಒಂದು ವಿಡಿಯೊದಲ್ಲಿ ಗೋವಾದ ನೈಟ್‌ಕ್ಲಬ್‌ನಿಂದ ಹೊರಬರುವ ದಾರಿಯಲ್ಲಿ ಸೋನಾಲಿ ಫೋಗಟ್ ಒದ್ದಾಡುತ್ತಿರುವುದನ್ನು ತೋರಿಸುತ್ತಿದೆ. ಇನ್ನೊಂದು ಕ್ಯಾಮೆರಾದಲ್ಲಿ ಡ್ಯಾನ್ಸ್ ಫ್ಲೋರ್‌ನಲ್ಲಿ ಫೋಗಟ್ ಅವರಿಗೆ ಬಲವಂತವಾಗಿ ಏನೋ ಕುಡಿಸುತ್ತಿರುವುದನ್ನು ತೋರಿಸಿದೆ.

ಈ ಹಿಂದೆ ಗೋವಾದಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳು ನಡೆಯುವುದಿಲ್ಲ ಎಂಬ ಷರತ್ತಿನ ಮೇಲೆ, ಕರ್ಲೀಸ್ ರೆಸ್ಟೋರೆಂಟ್ ಅನ್ನು ಕೆಡವಲು ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೇ ರೆಸ್ಟೋರೆಂಟ್ ನಲ್ಲಿ ಸೋನಾಲಿ ಫೋಗಟ್ ಮಾದಕ ದ್ರವ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಗಟ್ ಅವರ ಇಬ್ಬರು ಸಹಾಯಕರು ಸೇರಿದಂತೆ ಐವರನ್ನು ಗೋವಾ ಪೊಲೀಸರು ಬಂಧಿಸಿದ್ದರು. ಆಕೆಯ ಇಬ್ಬರು ಸಹಾಯಕರ ವಿರುದ್ಧ ಪೊಲೀಸರು ಕೊಲೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Published On - 1:06 pm, Mon, 12 September 22

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?