AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?

ಪ್ರಜ್ಞೆ ಬಂದ ಬಳಿಕ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?
ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 27, 2023 | 1:19 PM

Share

ಹೈದರಾಬಾದ್ ನಲ್ಲಿ ಭಾರೀ ಕಳ್ಳತನ ನಡೆದಿದೆ. ಆದಾಯ ತೆರಿಗೆ ಇಲಾಖೆಯ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಅವರ ಮನೆಯಲ್ಲಿ ಇದು ನಡೆದಿದ್ದು ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಇನ್ನೊಂದು ಟ್ವಿಸ್ಟ್ ಇದೆ. ಈ ಕಳ್ಳತನದ ಹಿಂದೆ ಪೊಲೀಸ್ ಅಧಿಕಾರಿಯ (PSI) ಕೈವಾಡವಿದೆ ಎಂದು ಸ್ವತಃ ಕಳ್ಳ ಹೇಳಿದ್ದಾನೆ. ಈ ಘಟನೆಯ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಜಮೀನು ಖರೀದಿಸುವುದಾಗಿ ಹೇಳಿದ್ದ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಗೆ ಸುರೇಂದರ್ ಎಂಬ ವ್ಯಕ್ತಿ ಪರಿಚಯವಾಗಿತ್ತು. ಹಾಗಾಗಿ ಸುರೇಂದರ್ ಆಗಾಗ್ಗೆ ಸ್ಯಾಮ್ಯುಯೆಲ್ ಗೆ ಮನೆಗೆ ಬರುತ್ತಿದ್ದರು. ಇತ್ತೀಚೆಗೆ ಮನೆಗೆ ಬಂದಿದ್ದ ಸುರೇಂದರ್ ಟಿಫಿನ್ ಹಾಗೂ ಎಳೆನೀರು ತಂದಿದ್ದ. ಆದರೆ ಆ ತೆಂಗಿನಕಾಯಿಯ ನೀರಿಗೆ ಔಷಧ ಬೆರೆಸಿದ್ದ. ತೆಂಗಿನಕಾಯಿ ನೀರು ಕುಡಿದ ತಕ್ಷಣ ಸ್ಯಾಮುಯೆಲ್ ಪ್ರಜ್ಞೆ ತಪ್ಪಿಬಿದ್ದಿದ್ದಾರೆ. ಸುರೇಂದರ್ ಇದೇ ಅವಕಾಶ ಬಳಸಿಕೊಂಡು ಮನೆಯಲ್ಲಿ ಕಳ್ಳತನ ಮಾಡಿದ್ದಾನೆ. 5 ಲಕ್ಷ ನಗದು ಹಾಗೂ 30 ತೊಲೆ ಚಿನ್ನಾಭರಣ ದೋಚಿ (Robbery), ಅಲ್ಲಿಂದ ಓಡಿ ಹೋಗಿದ್ದಾನೆ.

ಸ್ವಲ್ಪ ಸಮಯದ ನಂತರ ಪ್ರಜ್ಞೆ ಬಂದ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ರೋಚಕ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ. ಇವರ ಹಿಂದೆ ಪೊಲೀಸ್​​ ಎಸ್ಸೆಐ ಕೈವಾಡವಿದೆ ಎಂದು ಬಹಿರಂಗಪಡಿಸಿದ್ದಾನೆ ಆರೋಪಿ ಸುರೇಂದರ್. ಆರೋಪಿ ನೀಡಿದ ಮಾಹಿತಿಯನ್ನು ಅನುಸರಿಸಿ ಪೊಲೀಸರು (Hyderabad Police) ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 27 June 23

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು