AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?

ಪ್ರಜ್ಞೆ ಬಂದ ಬಳಿಕ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?
ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ
ಸಾಧು ಶ್ರೀನಾಥ್​
|

Updated on:Jun 27, 2023 | 1:19 PM

Share

ಹೈದರಾಬಾದ್ ನಲ್ಲಿ ಭಾರೀ ಕಳ್ಳತನ ನಡೆದಿದೆ. ಆದಾಯ ತೆರಿಗೆ ಇಲಾಖೆಯ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಅವರ ಮನೆಯಲ್ಲಿ ಇದು ನಡೆದಿದ್ದು ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಇನ್ನೊಂದು ಟ್ವಿಸ್ಟ್ ಇದೆ. ಈ ಕಳ್ಳತನದ ಹಿಂದೆ ಪೊಲೀಸ್ ಅಧಿಕಾರಿಯ (PSI) ಕೈವಾಡವಿದೆ ಎಂದು ಸ್ವತಃ ಕಳ್ಳ ಹೇಳಿದ್ದಾನೆ. ಈ ಘಟನೆಯ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಜಮೀನು ಖರೀದಿಸುವುದಾಗಿ ಹೇಳಿದ್ದ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಗೆ ಸುರೇಂದರ್ ಎಂಬ ವ್ಯಕ್ತಿ ಪರಿಚಯವಾಗಿತ್ತು. ಹಾಗಾಗಿ ಸುರೇಂದರ್ ಆಗಾಗ್ಗೆ ಸ್ಯಾಮ್ಯುಯೆಲ್ ಗೆ ಮನೆಗೆ ಬರುತ್ತಿದ್ದರು. ಇತ್ತೀಚೆಗೆ ಮನೆಗೆ ಬಂದಿದ್ದ ಸುರೇಂದರ್ ಟಿಫಿನ್ ಹಾಗೂ ಎಳೆನೀರು ತಂದಿದ್ದ. ಆದರೆ ಆ ತೆಂಗಿನಕಾಯಿಯ ನೀರಿಗೆ ಔಷಧ ಬೆರೆಸಿದ್ದ. ತೆಂಗಿನಕಾಯಿ ನೀರು ಕುಡಿದ ತಕ್ಷಣ ಸ್ಯಾಮುಯೆಲ್ ಪ್ರಜ್ಞೆ ತಪ್ಪಿಬಿದ್ದಿದ್ದಾರೆ. ಸುರೇಂದರ್ ಇದೇ ಅವಕಾಶ ಬಳಸಿಕೊಂಡು ಮನೆಯಲ್ಲಿ ಕಳ್ಳತನ ಮಾಡಿದ್ದಾನೆ. 5 ಲಕ್ಷ ನಗದು ಹಾಗೂ 30 ತೊಲೆ ಚಿನ್ನಾಭರಣ ದೋಚಿ (Robbery), ಅಲ್ಲಿಂದ ಓಡಿ ಹೋಗಿದ್ದಾನೆ.

ಸ್ವಲ್ಪ ಸಮಯದ ನಂತರ ಪ್ರಜ್ಞೆ ಬಂದ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ರೋಚಕ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ. ಇವರ ಹಿಂದೆ ಪೊಲೀಸ್​​ ಎಸ್ಸೆಐ ಕೈವಾಡವಿದೆ ಎಂದು ಬಹಿರಂಗಪಡಿಸಿದ್ದಾನೆ ಆರೋಪಿ ಸುರೇಂದರ್. ಆರೋಪಿ ನೀಡಿದ ಮಾಹಿತಿಯನ್ನು ಅನುಸರಿಸಿ ಪೊಲೀಸರು (Hyderabad Police) ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 27 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್