AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?

ಪ್ರಜ್ಞೆ ಬಂದ ಬಳಿಕ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ.

ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ, ಕಳ್ಳನಿಗೆ ಸಹಾಯ ಮಾಡಿದ ಸಬ್​​ಇನ್ಸ್​​ಪೆಕ್ಟರ್?
ನಿವೃತ್ತ ಆದಾಯ ತೆರಿಗೆ ಇಲಾಖೆ ಕಮಿಷನರ್ ಮನೆಯಲ್ಲಿ ಭಾರೀ ಕಳ್ಳತನ
ಸಾಧು ಶ್ರೀನಾಥ್​
|

Updated on:Jun 27, 2023 | 1:19 PM

Share

ಹೈದರಾಬಾದ್ ನಲ್ಲಿ ಭಾರೀ ಕಳ್ಳತನ ನಡೆದಿದೆ. ಆದಾಯ ತೆರಿಗೆ ಇಲಾಖೆಯ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಅವರ ಮನೆಯಲ್ಲಿ ಇದು ನಡೆದಿದ್ದು ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಇನ್ನೊಂದು ಟ್ವಿಸ್ಟ್ ಇದೆ. ಈ ಕಳ್ಳತನದ ಹಿಂದೆ ಪೊಲೀಸ್ ಅಧಿಕಾರಿಯ (PSI) ಕೈವಾಡವಿದೆ ಎಂದು ಸ್ವತಃ ಕಳ್ಳ ಹೇಳಿದ್ದಾನೆ. ಈ ಘಟನೆಯ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಜಮೀನು ಖರೀದಿಸುವುದಾಗಿ ಹೇಳಿದ್ದ ನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಗೆ ಸುರೇಂದರ್ ಎಂಬ ವ್ಯಕ್ತಿ ಪರಿಚಯವಾಗಿತ್ತು. ಹಾಗಾಗಿ ಸುರೇಂದರ್ ಆಗಾಗ್ಗೆ ಸ್ಯಾಮ್ಯುಯೆಲ್ ಗೆ ಮನೆಗೆ ಬರುತ್ತಿದ್ದರು. ಇತ್ತೀಚೆಗೆ ಮನೆಗೆ ಬಂದಿದ್ದ ಸುರೇಂದರ್ ಟಿಫಿನ್ ಹಾಗೂ ಎಳೆನೀರು ತಂದಿದ್ದ. ಆದರೆ ಆ ತೆಂಗಿನಕಾಯಿಯ ನೀರಿಗೆ ಔಷಧ ಬೆರೆಸಿದ್ದ. ತೆಂಗಿನಕಾಯಿ ನೀರು ಕುಡಿದ ತಕ್ಷಣ ಸ್ಯಾಮುಯೆಲ್ ಪ್ರಜ್ಞೆ ತಪ್ಪಿಬಿದ್ದಿದ್ದಾರೆ. ಸುರೇಂದರ್ ಇದೇ ಅವಕಾಶ ಬಳಸಿಕೊಂಡು ಮನೆಯಲ್ಲಿ ಕಳ್ಳತನ ಮಾಡಿದ್ದಾನೆ. 5 ಲಕ್ಷ ನಗದು ಹಾಗೂ 30 ತೊಲೆ ಚಿನ್ನಾಭರಣ ದೋಚಿ (Robbery), ಅಲ್ಲಿಂದ ಓಡಿ ಹೋಗಿದ್ದಾನೆ.

ಸ್ವಲ್ಪ ಸಮಯದ ನಂತರ ಪ್ರಜ್ಞೆ ಬಂದ ಸ್ಯಾಮ್ಯುಯೆಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಮುಶಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸುರೇಂದ್ರನನ್ನು ಬಂಧಿಸಿದ್ದಾರೆ. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ರೋಚಕ ಸಂಗತಿಗಳನ್ನು ಬಹಿರಂಗಪಡಿಸಿದ್ದಾನೆ. ಇವರ ಹಿಂದೆ ಪೊಲೀಸ್​​ ಎಸ್ಸೆಐ ಕೈವಾಡವಿದೆ ಎಂದು ಬಹಿರಂಗಪಡಿಸಿದ್ದಾನೆ ಆರೋಪಿ ಸುರೇಂದರ್. ಆರೋಪಿ ನೀಡಿದ ಮಾಹಿತಿಯನ್ನು ಅನುಸರಿಸಿ ಪೊಲೀಸರು (Hyderabad Police) ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Tue, 27 June 23

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?